Suryakumar Yadav: ಟೆಸ್ಟ್ ನಲ್ಲಿ ಸ್ಥಾನ ಸಿಗದ ಕಾರಣ ಈ ಮಹತ್ವದ ನಿರ್ಧಾರ ಕೈಗೊಂಡ ಸೂರ್ಯಕುಮಾರ್

Suryakumar Yadav Team India: ರಣಜಿ ಟ್ರೋಫಿ 2022-23 ಪ್ರಸ್ತುತ ಭಾರತದ ದೇಶೀಯ ಕ್ರಿಕೆಟ್‌ನಲ್ಲಿ ಆಡುತ್ತಿದೆ. ಸೂರ್ಯಕುಮಾರ್ ಯಾದವ್ ಮತ್ತೊಮ್ಮೆ ಈ ಟೂರ್ನಿಯಲ್ಲಿ ಆಡಲಿದ್ದಾರೆ. ಕಳೆದ 3 ವರ್ಷಗಳಿಂದ ಅವರು ರಣಜಿ ಟ್ರೋಫಿಯ ಭಾಗವಾಗಿರಲಿಲ್ಲ. ಸೂರ್ಯಕುಮಾರ್ ದೇಶೀಯ ಕ್ರಿಕೆಟ್‌ನಲ್ಲಿ ಮುಂಬೈ ಪರ ಆಡುತ್ತಿದ್ದಾರೆ.

Written by - Bhavishya Shetty | Last Updated : Dec 18, 2022, 01:08 PM IST
    • ಬಾಂಗ್ಲಾದೇಶ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ
    • ಈ ಪ್ರವಾಸದಲ್ಲಿ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ತಂಡದ ಭಾಗವಾಗಿಲ್ಲ
    • ಸುದೀರ್ಘ ವಿರಾಮದ ಬಳಿಕ ಮತ್ತೆ ಮೈದಾನಕ್ಕೆ ಮರಳಲು ಸಜ್ಜಾಗಿದ್ದಾರೆ
Suryakumar Yadav: ಟೆಸ್ಟ್ ನಲ್ಲಿ ಸ್ಥಾನ ಸಿಗದ ಕಾರಣ ಈ ಮಹತ್ವದ ನಿರ್ಧಾರ ಕೈಗೊಂಡ ಸೂರ್ಯಕುಮಾರ್ title=
Suryakumar Yadav

Suryakumar Yadav Team India: ಸದ್ಯ ಟೀಂ ಇಂಡಿಯಾ ಬಾಂಗ್ಲಾದೇಶ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ಪ್ರವಾಸದಲ್ಲಿ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ತಂಡದ ಭಾಗವಾಗಿಲ್ಲ. ನ್ಯೂಜಿಲೆಂಡ್ ಪ್ರವಾಸದ ಬಳಿಕ ಅವರು ವಿಶ್ರಾಂತಿಯಲ್ಲಿದ್ದಾರೆ. ಇದೆಲ್ಲದರ ನಡುವೆ ಸೂರ್ಯಕುಮಾರ್ ಗೆ ಸಂಬಂಧಿಸಿದ ದೊಡ್ಡ ಸುದ್ದಿಯೊಂದು ಮುನ್ನೆಲೆಗೆ ಬಂದಿದೆ. ಸುದೀರ್ಘ ವಿರಾಮದ ಬಳಿಕ ಮತ್ತೆ ಮೈದಾನಕ್ಕೆ ಮರಳಲು ಸಜ್ಜಾಗಿದ್ದಾರೆ. ಕಳೆದ 3 ವರ್ಷಗಳಿಂದ ಭಾಗವಹಿಸದೇ ಇದ್ದ ಟೂರ್ನಿಯಲ್ಲಿ ಈ ಬಾರಿ ಆಡಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: Team India: ಈ ಆಟಗಾರನೇ ಟೀಂ ಇಂಡಿಯಾದ ಮುಂದಿನ ವಿರಾಟ್ ಕೊಹ್ಲಿ..!

ರಣಜಿ ಟ್ರೋಫಿ 2022-23 ಪ್ರಸ್ತುತ ಭಾರತದ ದೇಶೀಯ ಕ್ರಿಕೆಟ್‌ನಲ್ಲಿ ಆಡುತ್ತಿದೆ. ಸೂರ್ಯಕುಮಾರ್ ಯಾದವ್ ಮತ್ತೊಮ್ಮೆ ಈ ಟೂರ್ನಿಯಲ್ಲಿ ಆಡಲಿದ್ದಾರೆ. ಕಳೆದ 3 ವರ್ಷಗಳಿಂದ ಅವರು ರಣಜಿ ಟ್ರೋಫಿಯ ಭಾಗವಾಗಿರಲಿಲ್ಲ. ಸೂರ್ಯಕುಮಾರ್ ದೇಶೀಯ ಕ್ರಿಕೆಟ್‌ನಲ್ಲಿ ಮುಂಬೈ ಪರ ಆಡುತ್ತಿದ್ದಾರೆ. ಮುಂಬೈ ತಂಡ ಡಿಸೆಂಬರ್ 20 ರಿಂದ ಹೈದರಾಬಾದ್ ವಿರುದ್ಧ ಪಂದ್ಯವನ್ನು ಆಡಲಿದೆ. ಮುಂಬೈ ಕ್ರಿಕೆಟ್ ಸಂಸ್ಥೆ ಈ ಪಂದ್ಯಕ್ಕೆ 17 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಸೂರ್ಯಕುಮಾರ್ ಯಾದವ್ ಹೆಸರೂ ಸೇರಿದೆ.

ಸೂರ್ಯಕುಮಾರ್ ಯಾದವ್ 2022 ರಲ್ಲಿ ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಆಗಿದ್ದರು. ಈ ವರ್ಷ ಅವರು 31 ಇನ್ನಿಂಗ್ಸ್‌ಗಳಲ್ಲಿ 46.56 ಸರಾಸರಿ ಮತ್ತು 187.43 ಸ್ಟ್ರೈಕ್ ರೇಟ್‌ನಲ್ಲಿ 1,164 ರನ್ ಗಳಿಸಿದ್ದಾರೆ. ಈ ವೇಳೆ ಅವರ ಬ್ಯಾಟ್‌ನಿಂದ 9 ಅರ್ಧ ಶತಕ ಮತ್ತು 2 ಶತಕಗಳು ಹೊರಬಂದಿವೆ. ಸೂರ್ಯಕುಮಾರ್ ಯಾದವ್ ಈ ವರ್ಷ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಉಳಿದಿದ್ದಾರೆ. ಅವರು ಈ ವರ್ಷ ODIಗಳಲ್ಲಿ 280 ರನ್ ಗಳಿಸಿದ್ದರು. ಆದರೂ ಟೀಂ ಇಂಡಿಯಾ ಪರ ಒಂದೇ ಒಂದು ಟೆಸ್ಟ್ ಪಂದ್ಯವನ್ನು ಆಡಲು ಸಾಧ್ಯವಾಗಿಲ್ಲ.

ಇದನ್ನೂ ಓದಿ: Pro Kabaddi League Season 9 : ಜೈಪುರ ಪಿಂಕ್ ಪ್ಯಾಂಥರ್ಸ್ ಚಾಂಪಿಯನ್!

ಹೈದರಾಬಾದ್ ವಿರುದ್ಧ ಮುಂಬೈನ ರಣಜಿ ತಂಡ:

ಅಜಿಂಕ್ಯ ರಹಾನೆ (ನಾಯಕ), ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಯಶಸ್ವಿ ಜೈಸ್ವಾಲ್, ಅರ್ಮಾನ್ ಜಾಫರ್, ಸರ್ಫರಾಜ್ ಖಾನ್, ಸುವೇದ್ ಪರ್ಕರ್, ಹಾರ್ದಿಕ್ ತಮೋರ್, ಪ್ರಸಾದ್ ಪನ್ವಾರ್, ಶಮ್ಸ್ ಮುಲಾನಿ, ತನುಷ್ ಕೋಟ್ಯಾನ್, ತುಷಾರ್ ದೇಶಪಾಂಡೆ, ಮೋಹಿತ್ ಅವಸ್ತಿ, ಸಿದ್ಧಾರ್ಥ್ ರೌತ್, ರೋ ಶಶಾನ್ ದಿಯಾಸ್ ಮುಶೀರ್ ಖಾನ್

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News