ಮೊದಲ ಟೆಸ್ಟ್ ಗೆದ್ದ ಖುಷಿಯಲ್ಲಿ ಕುಣಿದಾಡಿದ ರೋಹಿತ್ ಶರ್ಮಾ! ಈ ಗೆಲುವಿನ ನಿಜವಾದ ಹೀರೋ ಈತನೇ ಎಂದು ಕೊಂಡಾಡಿದ ಕ್ಯಾಪ್ಟನ್

ಬಾಂಗ್ಲಾದೇಶ ವಿರುದ್ಧದ ಚೆನ್ನೈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ʼನಲ್ಲಿ 113 ರನ್‌ʼಗಳ ಸ್ಫೋಟಕ ಇನ್ನಿಂಗ್ಸ್ ಆಡಿದ ಅವರು, ಎರಡನೇ ಇನ್ನಿಂಗ್ಸ್‌ನ ಬೌಲಿಂಗ್‌ನಲ್ಲಿ 88 ರನ್‌ಗಳಿಗೆ 6 ವಿಕೆಟ್ ಪಡೆದು ಅದ್ಭುತ ಪ್ರದರ್ಶನ ನೀಡಿದರು.  

Written by - Bhavishya Shetty | Last Updated : Sep 22, 2024, 05:04 PM IST
    • ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ ಗೆಲುವು
    • ಒಬ್ಬ ಆಟಗಾರನನ್ನು ಭಾರತದ ಗೆಲುವಿನ ಅತಿದೊಡ್ಡ ಮತ್ತು ನಿಜವಾದ ಹೀರೋ ಎಂದು ಬಣ್ಣಿಸಿದ್ದಾರೆ
    • ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ
ಮೊದಲ ಟೆಸ್ಟ್ ಗೆದ್ದ ಖುಷಿಯಲ್ಲಿ ಕುಣಿದಾಡಿದ ರೋಹಿತ್ ಶರ್ಮಾ! ಈ ಗೆಲುವಿನ ನಿಜವಾದ ಹೀರೋ ಈತನೇ ಎಂದು ಕೊಂಡಾಡಿದ ಕ್ಯಾಪ್ಟನ್ title=
Captain Rohit Sharma

Rohit Sharma Statement: ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 280 ರನ್‌ʼಗಳಿಂದ ಸೋಲಿಸಿದ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಂತೋಷದಿಂದ ಜಿಗಿದಿದ್ದಾರೆ. ಈ ಬಳಿಕ ಮಾತನಾಡಿದ ಅವರು, ಒಬ್ಬ ಆಟಗಾರನನ್ನು ಭಾರತದ ಗೆಲುವಿನ ಅತಿದೊಡ್ಡ ಮತ್ತು ನಿಜವಾದ ಹೀರೋ ಎಂದು ಬಣ್ಣಿಸಿದ್ದಾರೆ. ಇನ್ನು ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.

ಇದನ್ನೂ ಓದಿ: IND vs BAN Test: ಮೊದಲ ಟೆಸ್ಟ್ ಗೆಲುವಿನ ಬೆನ್ನಲ್ಲೇ 2ನೇ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟಿಸಿದ ಬಿಸಿಸಿಐ: ಯಾರು ಇನ್‌? ಯಾರು ಔಟ್?‌

‘ಪ್ಲೇಯರ್ ಆಫ್ ದಿ ಮ್ಯಾಚ್’ ರವಿಚಂದ್ರನ್ ಅಶ್ವಿನ್ ಅವರನ್ನು ಹೊಗಳಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, "ಅವರು ಈ ತಂಡಕ್ಕಾಗಿ ಏನು ಮಾಡುತ್ತಾರೆ ಎಂಬುದನ್ನು ಹೇಳಲು ನನ್ನ ಬಳಿ ಪದಗಳಿಲ್ಲ. ಪ್ರತಿಕ್ಷಣವೂ ನಮ್ಮ ಜೊತೆಯಲ್ಲೇ ಇರುತ್ತಾನೆ, ಯಾವಾಗ ಏನು ಮಾಡಬೇಕು? ಏನು ಮಾಡಬಾರದು ಎಂಬುದನ್ನು ಹೇಳುತ್ತಿರುತ್ತಾನೆ. ಆತ ಎಂದಿಗೂ ಪಂದ್ಯದಿಂದ ಹೊರಗುಳಿದಿಲ್ಲ. ಅಶ್ವಿನ್ ಭಾರತದ ಅತಿದೊಡ್ಡ ಮ್ಯಾಚ್ ವಿನ್ನರ್ ಎಂದು ಸಾಬೀತುಪಡಿಸಿದ್ದಾರೆ" ಎಂದು ಹೇಳಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಚೆನ್ನೈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ʼನಲ್ಲಿ 113 ರನ್‌ʼಗಳ ಸ್ಫೋಟಕ ಇನ್ನಿಂಗ್ಸ್ ಆಡಿದ ಅವರು, ಎರಡನೇ ಇನ್ನಿಂಗ್ಸ್‌ನ ಬೌಲಿಂಗ್‌ನಲ್ಲಿ 88 ರನ್‌ಗಳಿಗೆ 6 ವಿಕೆಟ್ ಪಡೆದು ಅದ್ಭುತ ಪ್ರದರ್ಶನ ನೀಡಿದರು.

ಇದನ್ನೂ ಓದಿ: ನಿಂಬೆಯಲ್ಲ, ಬಿಸಿ ನೀರಿಗೆ ಇದೊಂದು ಬೆರೆಸಿ ಖಾಲಿ ಹೊಟ್ಟೆಯಲ್ಲಿ ಕುಡಿದ್ರೆ ಒಂದೇ ವಾರದಲ್ಲಿ ಕರಗುತ್ತೆ ಬೆಲ್ಲಿ ಫ್ಯಾಟ್!

ಇನ್ನು ಮಾತು ಮುಂದುವರೆಸಿದ ರೋಹಿತ್, "ಯಾವುದೇ ಸ್ಥಿತಿಯಲ್ಲಿ ನಾವು ಇದೇ ರೀತಿಯ ತಂಡವನ್ನು ಮಾಡಲು ಬಯಸುತ್ತೇವೆ. ವೇಗದ ಬೌಲಿಂಗ್ ಅಥವಾ ಸ್ಪಿನ್‌ನಲ್ಲಿ ನಮಗೆ ಯಾವುದೇ ಆಯ್ಕೆಗಳ ಕೊರತೆಯಾಗಬಾರದೆಂದು ನಾವು ಬಯಸುತ್ತೇವೆ. ಈ ಪಿಚ್ ತುಂಬಾ ಸುಲಭವಾಗಿತ್ತು. ಇಲ್ಲಿ ವೇಗದ ಬೌಲರ್‌ಗಳಿಗೆ ಮತ್ತು ಸ್ಪಿನ್ ಬೌಲರ್‌ಗಳಿಗೂ ಸಾಕಷ್ಟು ಅವಕಾಶಗಳು ಸಿಕ್ಕಿತ್ತು. ನೀವು ತಾಳ್ಮೆ ತೋರಿಸಬೇಕಾದ ಪಿಚ್ ಇದು" ಎಂದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News