ದ.ಆಫ್ರಿಕಾ ಟೆಸ್ಟ್ ಸರಣಿಗೆ ನೂತನ ಟೀಂ ಇಂಡಿಯಾ ತಂಡ ಪ್ರಕಟ: ಇಶಾನ್ ಔಟ್- ಈ ಸ್ಟಾರ್ ಆಟಗಾರ ಇನ್

India vs South Africa Test Series: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿ ಡಿಸೆಂಬರ್ 26 ರಿಂದ ಆರಂಭವಾಗಲಿದೆ. ಈ ಸರಣಿಗೆ ಆಯ್ಕೆಯಾಗಿರುವ ಭಾರತ ತಂಡದಲ್ಲಿ ಇಶಾನ್ ಕಿಶನ್ ಹೆಸರನ್ನು ಸೇರಿಸಲಾಗಿತ್ತು. ಆದರೆ ಈಗ ಅವರ ಹೆಸರನ್ನು ಹಿಂಪಡೆದುಕೊಳ್ಳಲಾಗಿದೆ.

Written by - Bhavishya Shetty | Last Updated : Dec 17, 2023, 07:47 PM IST
    • ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿ
    • ಮತ್ತೊಬ್ಬ ಸ್ಟಾರ್ ಆಟಗಾರನ ಹೆಸರನ್ನು ಹಿಂತೆಗೆದುಕೊಳ್ಳಲಾಗಿದೆ
    • ಇದೀಗ ಇಶಾನ್ ಟೆಸ್ಟ್ ಸರಣಿಯಿಂದಲೂ ತಮ್ಮ ಹೆಸರನ್ನು ಹಿಂಪಡೆದಿದ್ದಾರೆ
ದ.ಆಫ್ರಿಕಾ ಟೆಸ್ಟ್ ಸರಣಿಗೆ ನೂತನ ಟೀಂ ಇಂಡಿಯಾ ತಂಡ ಪ್ರಕಟ: ಇಶಾನ್ ಔಟ್- ಈ ಸ್ಟಾರ್ ಆಟಗಾರ ಇನ್ title=
India vs South Africa

India vs South Africa Test Series: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ತಂಡವು ಒಂದರ ನಂತರ ಒಂದರಂತೆ ಹಲವು ಹಿನ್ನಡೆಗಳನ್ನು ಎದುರಿಸುತ್ತಿದೆ. ಈ ಹಿಂದೆ ದೀಪಕ್ ಚಹಾರ್ ಮತ್ತು ಮೊಹಮ್ಮದ್ ಶಮಿ ಟೂರ್ನಿಯಿಂದ ಹೊರಗುಳಿದಿರುವ ಬಗ್ಗೆ ಮಾಹಿತಿ ಸಿಕ್ಕಿತು. ಇದೀಗ ಮತ್ತೊಬ್ಬ ಸ್ಟಾರ್ ಆಟಗಾರನ ಹೆಸರನ್ನು ಹಿಂತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ಬಿಗ್ ಬಾಸ್’ಗೆ ವೈಲ್ಡ್ ಕಾರ್ಡ್ ಎಂಟ್ರಿಕೊಟ್ಟ ಪವಿ ಪೂವಪ್ಪ ಬಾಯ್ ಫ್ರೆಂಡ್ ಯಾರು ಗೊತ್ತಾ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿ ಡಿಸೆಂಬರ್ 26 ರಿಂದ ಆರಂಭವಾಗಲಿದೆ. ಈ ಸರಣಿಗೆ ಆಯ್ಕೆಯಾಗಿರುವ ಭಾರತ ತಂಡದಲ್ಲಿ ಇಶಾನ್ ಕಿಶನ್ ಹೆಸರನ್ನು ಸೇರಿಸಲಾಗಿತ್ತು. ಆದರೆ ಈಗ ಅವರ ಹೆಸರನ್ನು ಹಿಂಪಡೆದುಕೊಳ್ಳಲಾಗಿದೆ.

ಈ ನಿರ್ಧಾರದ ಬಗ್ಗೆ ಬಿಸಿಸಿಐ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಇಶಾನ್ ಕಿಶನ್ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಅವರನ್ನು ಬಿಡುಗಡೆ ಮಾಡುವಂತೆ ಬಿಸಿಸಿಐಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದಾದ ನಂತರ ಮಂಡಳಿಯು ಅವರ ಹೆಸರನ್ನು ಹಿಂಪಡೆದಿದ್ದು, ಕೆಎಸ್ ಭರತ್ ಅವರನ್ನು ಆಯ್ಕೆ ಮಾಡಿದೆ.

ಟಿ 20 ಸರಣಿಯಲ್ಲಿ ಇಶಾನ್ ಕಿಶನ್ ತಂಡದ ಭಾಗವಾಗಿದ್ದರು. ಈ ಸರಣಿಯ ಮೊದಲ ಪಂದ್ಯ ರದ್ದಾಗಿದ್ದು, ಉಳಿದೆರಡು ಪಂದ್ಯಗಳಲ್ಲಿ ಸ್ಥಾನ ಪಡೆಯಲಿಲ್ಲ. ಈ ಹಿಂದೆ ಆಸ್ಟ್ರೇಲಿಯಾ ಸರಣಿಯಲ್ಲೂ ಜಿತೇಶ್ ಶರ್ಮಾ ಅವರಿಗೆ ಆದ್ಯತೆ ನೀಡಲಾಗಿತ್ತು.. ಇದೀಗ ಇಶಾನ್ ಟೆಸ್ಟ್ ಸರಣಿಯಿಂದಲೂ ತಮ್ಮ ಹೆಸರನ್ನು ಹಿಂಪಡೆದಿದ್ದಾರೆ.

ಇದನ್ನೂ ಓದಿ: ಎಂಟ್ರಿ ಕೊಟ್ಟ ಮೂರೇ ವಾರಕ್ಕೆ ಬಿಗ್ ಬಾಸ್ ಮನೆಯಿಂದ ಪವಿ ಪೂವಪ್ಪ ಎಲಿಮಿನೇಟ್

ಟೀಂ ಇಂಡಿಯಾ ಅಪ್ಡೇಟೆಡ್ ಟೆಸ್ಟ್ ತಂಡ:

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾಹ್ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್).

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News