/kannada/photo-gallery/shukra-gochar-laxmi-narayana-yoga-bless-this-zodiac-signs-with-huge-wealth-and-success-221344 Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು Laxmi Narayana Yoga: ಈ ರಾಶಿಯವರಿಗೆ ಭಾಗ್ಯೋದಯ, ಸಿಗಲಿದೆ ಅಪಾರ ಕೀರ್ತಿ ಯಶಸ್ಸು 221344

2022 ರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನವು ಸೆಮಿಫೈನಲ್ ರೇಸ್‌ನಲ್ಲಿ ಉಳಿಯಲು, ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಸೋಲಿಸುವುದು ಅಗತ್ಯವಾಗಿತ್ತು. ಆದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್‌ಗಳಿಂದ ಸೋಲು ಅನುಭವಿಸಬೇಕಾಯಿತು. ಪಾಕಿಸ್ತಾನದ ಕ್ರಿಕೆಟ್ ಅಭಿಮಾನಿಗಳು ಮತ್ತು ಅನೇಕ ದಿಗ್ಗಜರು ಭಾರತದ ಈ ಸೋಲನ್ನು ಪಂದ್ಯಾವಳಿಯಿಂದ ನಿರ್ಗಮಿಸಲು ಕಾರಣವೆಂದು ಪರಿಗಣಿಸುತ್ತಿದ್ದಾರೆ. ಹೀಗಿರುವಾಗ ಇದೀಗ ಭಾರತದ ಮಾಜಿ ಓಪನರ್ ವಾಸಿಂ ಜಾಫರ್ ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ.

ಇದನ್ನೂ ಓದಿ: SHOCKING!.. ವಿರಾಟ್ ಕೊಹ್ಲಿ‌ ಪ್ರೈವೇಟ್‌ ರೂಮ್‌ ವಿಡಿಯೋ ಲೀಕ್‌ : ಬೇಸರ ವ್ಯಕ್ತಪಡಿಸಿದ ಕಿಂಗ್‌..!

ಟೀಂ ಇಂಡಿಯಾ ಸೋಲಿನ ನಂತರ ಪಾಕಿಸ್ತಾನದ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿರುವ ವಾಸೀಂ ಜಾಫರ್, “ಪಾಕಿಸ್ತಾನವು ಟಿ20 ವಿಶ್ವಕಪ್‌ನಿಂದ ಹೊರಗುಳಿಯುವುದು ಟೀಂ ಇಂಡಿಯಾ ಸೋಲಿನಿಂದಲ್ಲ, ಜಿಂಬಾಬ್ವೆ ವಿರುದ್ಧದ ಸೋಲಿನಿಂದ” ಎಂದು ಹೇಳಿದ್ದಾರೆ. ಟೀಂ ಇಂಡಿಯಾದ ಪಂದ್ಯದ ನಂತರ ವಾಸಿಂ ಜಾಫರ್ ಟ್ವೀಟ್ ಮಾಡಿ, 'ಜನಪ್ರಿಯ ನಂಬಿಕೆಗೆ ವಿರುದ್ಧವಾಗಿ, ಪಾಕಿಸ್ತಾನವು ಔಟಾದರೆ, ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಸೋತ ಕಾರಣವಲ್ಲ. ಪಾಕಿಸ್ತಾನವು ಜಿಂಬಾಬ್ವೆ ವಿರುದ್ಧ ಸೋತಿದ್ದರಿಂದ ಇದು ಸಂಭವಿಸುತ್ತದೆ ಎಂದು ತೀಕ್ಷ್ಣವಾಗಿ ಹೇಳಿಕೆ ನೀಡಿದ್ದಾರೆ

T20 ವಿಶ್ವಕಪ್ 2022 ರಲ್ಲಿ, ಪಾಕಿಸ್ತಾನ ಮತ್ತು ಜಿಂಬಾಬ್ವೆ ತಂಡಗಳು ಅಕ್ಟೋಬರ್ 28 ರಂದು ಪರ್ತ್ ಮೈದಾನದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 130 ರನ್ ಗಳಿಸಿತು. ಇದಕ್ಕುತ್ತರವಾಗಿ ಪಾಕಿಸ್ತಾನ ಇನಿಂಗ್ಸ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 129 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಪಂದ್ಯದಲ್ಲಿ ಪಾಕಿಸ್ತಾನ 1 ರನ್‌ನಿಂದ ಸೋಲನುಭವಿಸಬೇಕಾಯಿತು, ಅಂದಿನಿಂದ ಅವರು ಪಂದ್ಯಾವಳಿಯಿಂದ ಹೊರಗುಳಿಯುವ ಅಪಾಯದಲ್ಲಿದೆ.

ಇದನ್ನೂ ಓದಿ: T20 World Cup: ಡೇಂಜರ್ ಝೋನ್ ನಲ್ಲಿ ಟೀಂ ಇಂಡಿಯಾ... ಸೆಮಿಸ್ ಲೆಕ್ಕಾಚಾರ ಉಲ್ಟಾಪಲ್ಟಾ!

ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತ್ತು ಆದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಸಂಪೂರ್ಣ ವಿಫಲವಾಗಿತ್ತು. ಈ ತಂಡ 49 ರನ್‌ಗಳಿಗೆ ತನ್ನ ಮೊದಲ 5 ವಿಕೆಟ್‌ಗಳನ್ನು ಕಳೆದುಕೊಂಡಿತು. 20 ಓವರ್‌ಗಳ ಆಟ ಮುಗಿದಾಗ ಟೀಂ ಇಂಡಿಯಾ 9 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿತ್ತು. ಕೊನೆಯ ಓವರ್‌ನಲ್ಲಿ ದಕ್ಷಿಣ ಆಫ್ರಿಕಾ 5 ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಸಾಧಿಸಿತು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Section: 
English Title: 
Wasim Jaffer told elimination of Pakistan was due to the loss against Zimbabwe not India fault
News Source: 
Home Title: 

“ಪಾಕ್ ಹೊರಗುಳಿದಿದ್ದು ಜಿಂಬಾಬ್ವೆ ವಿರುದ್ಧದ ಸೋಲಿನಿಂದ, ಭಾರತ ಅದಕ್ಕೆ ಕಾರಣವಲ್ಲ”

“ಪಾಕ್ ಹೊರಗುಳಿದಿದ್ದು ಜಿಂಬಾಬ್ವೆ ವಿರುದ್ಧದ ಸೋಲಿನಿಂದ, ಭಾರತ ಅದಕ್ಕೆ ಕಾರಣವಲ್ಲ”
Caption: 
Wasim Zafar
Yes
Is Blog?: 
No
Tags: 
Facebook Instant Article: 
Yes
Highlights: 
  • ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಭಾರತದ ಮಾಜಿ ಓಪನರ್ ವಾಸಿಂ ಜಾಫರ್
  • “ಪಾಕಿಸ್ತಾನವು ಟಿ20 ವಿಶ್ವಕಪ್‌ನಿಂದ ಹೊರಗುಳಿಯುವುದು ಟೀಂ ಇಂಡಿಯಾ ಸೋಲಿನಿಂದಲ್ಲ”
  • “ಜಿಂಬಾಬ್ವೆ ವಿರುದ್ಧದ ಸೋಲಿನಿಂದ” ಎಂದು ಹೇಳಿಕೆ
Mobile Title: 
“ಪಾಕ್ ಹೊರಗುಳಿದಿದ್ದು ಜಿಂಬಾಬ್ವೆ ವಿರುದ್ಧದ ಸೋಲಿನಿಂದ, ಭಾರತ ಅದಕ್ಕೆ ಕಾರಣವಲ್ಲ”
Bhavishya Shetty
Publish Later: 
No
Publish At: 
Monday, October 31, 2022 - 15:17
Created By: 
Bhavishya Shetty
Updated By: 
Bhavishya Shetty
Published By: 
Bhavishya Shetty
Request Count: 
4
Is Breaking News: 
No