“ಇಂದು ಈ ತಂಡ ಸುಲಭವಾಗಿ ವಿಶ್ವಕಪ್ ಗೆಲ್ಲುತ್ತೆ” – ಫೈನಲ್ ಪಂದ್ಯದ ವೇಳೆ ಶೋಯೆಬ್ ಅಖ್ತರ್ ಹೇಳಿಕೆ ವೈರಲ್

Shoaib Akhtar, World Cup 2023 Final: ಪಾಕಿಸ್ತಾನದ ಟಿವಿ ಶೋಗಳಲ್ಲಿಯೂ ಟೀಮ್ ಇಂಡಿಯಾದ ಯಶಸ್ಸಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಜೊತೆಗೆ ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿ ಭಾರತದ ಗೆಲುವಿಗಾಗಿ ಪ್ರಾರ್ಥನೆಗಳು ನಡೆಯುತ್ತಿವೆ. ಟೀಂ ಇಂಡಿಯಾವೇ ಈ ಬಾರಿ ವಿಶ್ವಕಪ್ ಗೆಲ್ಲಲಿ ಎಂದು ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು ಹಾರೈಸಿದ್ದಾರೆ ಎಂದು ಹೇಳಿದ್ದಾರೆ.

Written by - Bhavishya Shetty | Last Updated : Nov 19, 2023, 03:13 PM IST
    • ಪಾಕಿಸ್ತಾನದ ಟಿವಿ ಶೋಗಳಲ್ಲಿಯೂ ಟೀಮ್ ಇಂಡಿಯಾದ ಯಶಸ್ಸಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ
    • ಪಾಕಿಸ್ತಾನಿ ಕ್ರಿಕೆಟ್ ಅಭಿಮಾನಿಗಳಿಗೆ ಭಾರತದ ಬ್ಯಾಟಿಂಗ್‌ ಇಷ್ಟವಾದಂತಿದೆ.
    • ಫೈನಲ್‌’ನಲ್ಲಿ ಭಾರತ ತಂಡವು ವಿಶ್ವಕಪ್ ಅನ್ನು ಸುಲಭವಾಗಿ ಗೆಲ್ಲುತ್ತದೆ
“ಇಂದು ಈ ತಂಡ ಸುಲಭವಾಗಿ ವಿಶ್ವಕಪ್ ಗೆಲ್ಲುತ್ತೆ” – ಫೈನಲ್ ಪಂದ್ಯದ ವೇಳೆ ಶೋಯೆಬ್ ಅಖ್ತರ್ ಹೇಳಿಕೆ ವೈರಲ್  title=
Shoaib Akhtar

Shoaib Akhtar, World Cup 2023 Final: ಅಹಮದಾಬಾದ್‌’ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕ್ರಿಕೆಟ್‌ ಲೋಕದ ಅತಿದೊಡ್ಡ ಪಂದ್ಯ ಪ್ರಾರಂಭವಾಗಿದೆ. ಈ ಪಂದ್ಯವನ್ನು ವೀಕ್ಷಿಸಲು ದೇಶ ಮತ್ತು ಪ್ರಪಂಚದಾದ್ಯಂತದ ಸಾವಿರಾರು ಜನರು ಇಲ್ಲಿ ಜಮಾಯಿಸಿದ್ದಾರೆ. ಇನ್ನು ಈ ಬಾರಿ ಟೀಂ ಇಂಡಿಯಾಗೆ ಸಪೋರ್ಟ್ ಮಾಡಲು ಪಾಕಿಸ್ತಾನವೂ ಸಿದ್ಧವಾಗಿದೆ ಎಂದು ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ಮೈದಾನದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿದ್ದು ಶಮಿ-ಬುಮ್ರಾ ಅಲ್ಲ, ಈ ಬೌಲರ್!

ಪಾಕಿಸ್ತಾನದ ಟಿವಿ ಶೋಗಳಲ್ಲಿಯೂ ಟೀಮ್ ಇಂಡಿಯಾದ ಯಶಸ್ಸಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಜೊತೆಗೆ ಭಾರತದ ಗೆಲುವಿಗಾಗಿ ಪ್ರಾರ್ಥನೆಗಳು ನಡೆಯುತ್ತಿವೆ. ಟೀಂ ಇಂಡಿಯಾವೇ ಈ ಬಾರಿ ವಿಶ್ವಕಪ್ ಗೆಲ್ಲಲಿ ಎಂದು ಪಾಕಿಸ್ತಾನ ಕ್ರಿಕೆಟ್ ಅಭಿಮಾನಿಗಳು ಹಾರೈಸಿದ್ದಾರೆ ಎಂದು ಹೇಳಿದ್ದಾರೆ.

ಒಂದೆಡೆ ಪಾಕಿಸ್ತಾನದ ಜನರು ವಿಶ್ವಕಪ್‌’ನಲ್ಲಿ ತಮ್ಮ ತಂಡದ ವೈಫಲ್ಯದ ಬಗ್ಗೆ ಕಣ್ಣೀರು ಹಾಕುತ್ತಿದ್ದರೆ, ಇನ್ನೊಂದೆಡೆ ಭಾರತವನ್ನು ಆತಿಥ್ಯ ವಹಿಸಿದ್ದಕ್ಕಾಗಿ ಪ್ರಶಂಸೆ ಕೂಡ ಮಾಡುತ್ತಿದ್ದಾರೆ. ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರನ್ನು ಮ್ಯಾಚ್ ಚೇಂಜಿಂಗ್ ಪ್ಲೇಯರ್ ಎಂದು ಪರಿಗಣಿಸಿದ್ದಾರೆ.

ಇದನ್ನೂ ಓದಿ: ಇಂದು ವಿಶ್ವಕಪ್ ಗೆಲ್ಲುತ್ತಾ ಭಾರತ? ನಾಯಕ ರೋಹಿತ್ ಶರ್ಮಾ – ವಿರಾಟ್ ಕೊಹ್ಲಿ ಜಾತಕ ಏನ್ ಹೇಳ್ತಿದೆ?

ಪಾಕಿಸ್ತಾನಿ ಕ್ರಿಕೆಟ್ ಅಭಿಮಾನಿಗಳಿಗೆ ಭಾರತದ ಬ್ಯಾಟಿಂಗ್‌ ಇಷ್ಟವಾದಂತಿದೆ. ಫೈನಲ್‌’ನಲ್ಲಿ ಭಾರತ ತಂಡವು ವಿಶ್ವಕಪ್ ಅನ್ನು ಸುಲಭವಾಗಿ ಗೆಲ್ಲುತ್ತದೆ. ಇದುವರೆಗಿನ ಅಮೋಘತೆಗೆ ಹೋಲಿಸಿದರೆ ಇತರೆ ತಂಡಗಳು ಪೇಲವವಾಗಿ ಕಾಣುತ್ತಿದ್ದವು.ಈ ಬಾರಿಯ ವಿಶ್ವಕಪ್‌’ನಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿತ್ತು ಎಂದು ಹೇಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News