ಹಾರ್ದಿಕ್ ಪಾಂಡ್ಯ ತಂಡಕ್ಕೆ ವಾಪಾಸಾದ್ರೆ ಹೊರಗುಳಿಯೋದು ಶಮಿ ಅಲ್ಲ… ಈ ಸ್ಟಾರ್ ಬ್ಯಾಟ್ಸ್’ಮನ್!

Hardik Pandya return, Cricket News in Kannada: ಇದೀಗ ಹೊಸ ಸುದ್ದಿಯೊಂದು ಹೊರಬಿದ್ದಿದ್ದು ಶ್ರೀಲಂಕಾ ವಿರುದ್ಧದ ಪಂದ್ಯದಿಂದಲೂ ಹಾರ್ದಿಕ್ ಹೊರಬಿದ್ದಿದ್ದಾರೆ ಎನ್ನಲಾಗಿದೆ. ಆದರೆ ನವೆಂಬರ್ 5 ರಂದು ಕೋಲ್ಕತ್ತಾದಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯಕ್ಕೆ ಹಾರ್ದಿಕ್ ಲಭ್ಯವಿರುತ್ತಾರೆ.

Written by - Bhavishya Shetty | Last Updated : Oct 30, 2023, 10:14 PM IST
    • ಹಾರ್ದಿಕ್ ಪಾಂಡ್ಯ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದರು
    • ಸೂರ್ಯಕುಮಾರ್ ಯಾದವ್ ಮತ್ತು ಮೊಹಮ್ಮದ್ ಶಮಿಗೆ ತಂಡದಲ್ಲಿ ಅವಕಾಶ
    • ಪಾಂಡ್ಯ ವಾಪಸಾದ ಬಳಿಕ ಯಾವ ಆಟಗಾರನನ್ನು ಪ್ಲೇಯಿಂಗ್-11ರಿಂದ ಹೊರಗಿಡಲಾಗುತ್ತದೆ?
ಹಾರ್ದಿಕ್ ಪಾಂಡ್ಯ ತಂಡಕ್ಕೆ ವಾಪಾಸಾದ್ರೆ ಹೊರಗುಳಿಯೋದು ಶಮಿ ಅಲ್ಲ… ಈ ಸ್ಟಾರ್ ಬ್ಯಾಟ್ಸ್’ಮನ್! title=
Hardik Pandya

World Cup 2023: ಭಾರತ ತಂಡದ ಸ್ಟಾರ್ ಆಲ್’ರೌಂಡರ್ ಹಾರ್ದಿಕ್ ಪಾಂಡ್ಯ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದರು. ಆ ಬಳಿಕ ಸೂರ್ಯಕುಮಾರ್ ಯಾದವ್ ಮತ್ತು ಮೊಹಮ್ಮದ್ ಶಮಿಗೆ ತಂಡದಲ್ಲಿ ಅವಕಾಶ ನೀಡಲಾಯಿತು. ನಂತರ ಹಾರ್ದಿಕ್ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಎರಡು ಪಂದ್ಯಗಳನ್ನಾಡಿ ಜಯಿಸಿತ್ತು.

ಇದನ್ನೂ ಓದಿ: World Cup 2023: ಶ್ರೀಲಂಕಾ ಸೋಲಿನಿಂದ ಅಧಿಕೃತವಾಗಿ ಸೆಮೀಸ್ ಪ್ರವೇಶಿಸಿದ ಭಾರತ! ಹೇಗೆ ಗೊತ್ತಾ?

ಇದೀಗ ಹೊಸ ಸುದ್ದಿಯೊಂದು ಹೊರಬಿದ್ದಿದ್ದು ಶ್ರೀಲಂಕಾ ವಿರುದ್ಧದ ಪಂದ್ಯದಿಂದಲೂ ಹಾರ್ದಿಕ್ ಹೊರಬಿದ್ದಿದ್ದಾರೆ ಎನ್ನಲಾಗಿದೆ. ಆದರೆ ನವೆಂಬರ್ 5 ರಂದು ಕೋಲ್ಕತ್ತಾದಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯಕ್ಕೆ ಹಾರ್ದಿಕ್ ಲಭ್ಯವಿರುತ್ತಾರೆ. ಹೀಗಿರುವಾಗ ಹಾರ್ದಿಕ್ ಪಾಂಡ್ಯ ವಾಪಸಾದ ಬಳಿಕ ಯಾವ ಆಟಗಾರನನ್ನು ಪ್ಲೇಯಿಂಗ್-11ರಿಂದ ಹೊರಗಿಡಲಾಗುತ್ತದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

ಸದ್ಯ ಟೀಂ ಇಂಡಿಯಾ ಪಾಳಯಕ್ಕೆ ಹಾರ್ದಿಕ್ ಪಾಂಡ್ಯ ವಾಪಸಾದ ಬಳಿಕವೂ ಸೂರ್ಯಕುಮಾರ್ ಯಾದವ್ ಪ್ಲೇಯಿಂಗ್ ಇಲೆವೆನ್’ನಲ್ಲಿ ಉಳಿಯಲಿದ್ದಾರೆ. ಆದರೆ, ಹೊರಗುಳಿಯಲಿರುವುದು ಶ್ರೇಯಸ್ ಅಯ್ಯರ್ ಎಂದು ಹೇಳಲಾಗುತ್ತಿದೆ. ಏಕೆಂದರೆ ಪ್ರಸಕ್ತ ವಿಶ್ವಕಪ್‌’ನಲ್ಲಿ ಶ್ರೇಯಸ್ ಅಯ್ಯರ್ ಹೇಳಿಕೊಳ್ಳುವಂತಹದ್ದೇನು ಮಾಡಿಲ್ಲ. ಕೇವಲ 1 ಅರ್ಧಶತಕ ಗಳಿಸಲಷ್ಟೇ ಶಕ್ತರಾಗಿದ್ದಾರೆ.

ಬಿಸಿಸಿಐ ಮೂಲಗಳು ಮತ್ತು ಮಾಧ್ಯಮ ವರದಿಗಳ ಪ್ರಕಾರ, ಲಕ್ನೋದಲ್ಲಿ ಇಂಗ್ಲೆಂಡ್ ವಿರುದ್ಧ ಸೂರ್ಯಕುಮಾರ್ ಯಾದವ್ ಅದ್ಭುತ ಬ್ಯಾಟಿಂಗ್ ಮಾಡಿದ ರೀತಿ, ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಖುಷಿ ನೀಡಿದೆ. ಇದೇ ಕಾರಣದಿಂದ ಮುಂದಿನ ಪಂದ್ಯಕ್ಕೆ ಇವರನ್ನೇ ಮುಂದುವರೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಇಂಗು ಪೇಸ್ಟ್ ಅನ್ನು ದೇಹದ ಈ ಭಾಗಕ್ಕೆ ಹಚ್ಚಿದರೆ ತಕ್ಷಣವೇ ಇಳಿಕೆಯಾಗುತ್ತೆ ದೇಹದ ಬೊಜ್ಜು

ಅಂದಹಾಗೆ, ಪ್ರಸ್ತುತ ಹಾರ್ದಿಕ್ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌’ಸಿಎ)ಯಲ್ಲಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News