ದ.ಆಫ್ರಿಕಾ ವಿರುದ್ಧ ಭಾರತ ಗೆಲ್ಲಲು ಕಾರಣ ಈ ಆಟಗಾರ- ಈತನೇ ಮ್ಯಾಚ್ ವಿನ್ನರ್ ಎಂದು ಕೊಂಡಾಡಿದ ನಾಯಕ ರೋಹಿತ್ ಶರ್ಮಾ

Rohit Sharma Statement, Cricket News in Kannada: ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತದ ಬ್ಯಾಟ್ಸ್ ಮನ್’ಗಳು ಆಫ್ರಿಕನ್ ಬೌಲರ್’ಗಳನ್ನು ನಿದ್ದೆಗೆಡಿಸಿದ್ದರು. ಆರಂಭಿಕ ಜೋಡಿಯಾದ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಮೊದಲ ವಿಕೆಟ್‌’ಗೆ ಅರ್ಧಶತಕದ ಜೊತೆಯಾಟ ನಡೆಸಿ 62 ರನ್ ಸೇರಿಸುವ ಮೂಲಕ ತಂಡಕ್ಕೆ ಭದ್ರವಾದ ಆರಂಭ ನೀಡಿದರು.

Written by - Bhavishya Shetty | Last Updated : Nov 5, 2023, 09:49 PM IST
    • ಭಾರತ ಮತ್ತು ದಕ್ಷಿಣ ಆಫ್ರಿಕಾ (IND vs SA) ನಡುವೆ ನಡೆದ ಪಂದ್ಯ
    • ಟಾಸ್ ಗೆದ್ದ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು
    • ಐತಿಹಾಸಿಕ ಗೆಲುವಿನ ಬಗ್ಗೆ ಮಾತನಾಡಿದ ನಾಯಕ ರೋಹಿತ್ ಶರ್ಮಾ
ದ.ಆಫ್ರಿಕಾ ವಿರುದ್ಧ ಭಾರತ ಗೆಲ್ಲಲು ಕಾರಣ ಈ ಆಟಗಾರ- ಈತನೇ ಮ್ಯಾಚ್ ವಿನ್ನರ್ ಎಂದು ಕೊಂಡಾಡಿದ ನಾಯಕ ರೋಹಿತ್ ಶರ್ಮಾ title=
Rohit Sharma

Rohit Sharma Statement: ODI ವಿಶ್ವಕಪ್ 2023ರ 37 ಪಂದ್ಯ ಇಂದು ಭಾರತ ಮತ್ತು ದಕ್ಷಿಣ ಆಫ್ರಿಕಾ (IND vs SA) ನಡುವೆ ನಡೆದಿದೆ. ಈ ಪಂದ್ಯದ ಟಾಸ್ ಗೆದ್ದ ಟೀಮ್ ಇಂಡಿಯಾ, ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು.

ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಭಾರತದ ಬ್ಯಾಟ್ಸ್ ಮನ್’ಗಳು ಆಫ್ರಿಕನ್ ಬೌಲರ್’ಗಳನ್ನು ನಿದ್ದೆಗೆಡಿಸಿದ್ದರು. ಆರಂಭಿಕ ಜೋಡಿಯಾದ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಮೊದಲ ವಿಕೆಟ್‌’ಗೆ ಅರ್ಧಶತಕದ ಜೊತೆಯಾಟ ನಡೆಸಿ 62 ರನ್ ಸೇರಿಸುವ ಮೂಲಕ ತಂಡಕ್ಕೆ ಭದ್ರವಾದ ಆರಂಭ ನೀಡಿದರು.

ಇದನ್ನೂ ಓದಿ: ಯಾವ್ಯಾವ ಆಟಗಾರರು ತಮ್ಮ ಹುಟ್ಟುಹಬ್ಬದಂದು ಶತಕ ಸಿಡಿಸಿ ಇತಿಹಾಸ ನಿರ್ಮಿಸಿದ್ದಾರೆ ಗೊತ್ತಾ?

ಇನ್ನು ಈ ಐತಿಹಾಸಿಕ ಗೆಲುವಿನ ಬಗ್ಗೆ ಮಾತನಾಡಿದ ನಾಯಕ ರೋಹಿತ್ ಶರ್ಮಾ, “ಕಳೆದ ಮೂರು ಪಂದ್ಯಗಳಲ್ಲಿ ನಾವು ಹೇಗೆ ಪ್ರದರ್ಶನ ನೀಡಿದ್ದೇವೆ ಎಂಬುದನ್ನು ನೀವು ನೋಡಿದರೆ, ಚೆನ್ನಾಗಿ ಅರ್ಥವಾಗುತ್ತದೆ. ಇಂಗ್ಲೆಂಡ್ ವಿರುದ್ಧ ಆಡುವಾಗ ಒತ್ತಡದಲ್ಲಿದ್ದರೂ ಸಹ ಉತ್ತಮ ಸ್ಕೋರ್ ಮಾಡಿದ್ದೇವೆ. ಅಲ್ಲಿಯೂ ಕೆಲಸ ಮಾಡಿದ್ದು ವೇಗದ ಬೌಲರ್‌’ಗಳು. ನಾವು ಮೊದಲ ಓವರ್‌’ನಲ್ಲಿ ಒಂದು ವಿಕೆಟ್ ಪಡೆದಿದ್ದೇವೆ. ಈ ಪಂದ್ಯಗಳಲ್ಲಿ ಸೀಮರ್‌’ಗಳು ಉತ್ತಮ ಪ್ರದರ್ಶನ ನೀಡಿದರು. ಆದರೆ ಬ್ಯಾಟಿಂಗ್’ನಲ್ಲಿ ನಮ್ಮ ಪರಿಸ್ಥಿತಿಯನ್ನು ನಿಭಾಯಿಸಲು ನಮಗೆ ಕೊಹ್ಲಿಯೇ ಬೇಕಾಗಿತ್ತು” ಎಂದರು.

"ಆಟವನ್ನು ಇದ್ದಂತೆ ನಿಭಾಯಿಸಬೇಕು, ಪಿಚ್ ಎಲ್ಲವನ್ನೂ ನೋಡಿಕೊಳ್ಳಬೇಕು, ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಇದನ್ನೆಲ್ಲಾ ಪ್ರತಿದಿನ ಮಾಡಲು ಸಾಧ್ಯವಿಲ್ಲ. ಆದರೆ ಶಮಿ ಕಂಬ್ಯಾಕ್ ಮಾಡಿದ ನೋಡಿದರೆ ಅವರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ” ಎಂದು ಕೊಂಡಾಡಿದರು. ಕಳೆದ ಮೂರು ಪಂದ್ಯಗಳಲ್ಲೂ ಶಮಿ ಮ್ಯಾಚ್ ವಿನ್ನರ್ ಆಗಿ ಹೊರಹೊಮ್ಮಿದ್ದು, ಇಂದೂ ಕೂಡ ಅವರ ಪರಿಶ್ರಮವನ್ನು ನಾಯಕ ಕೊಂಡಾಡಿದ್ದಾರೆ.  

ಇದನ್ನೂ ಓದಿ: ಬಾಳೆ ಎಲೆಯಲ್ಲಿ ಊಟ ಮಾಡಿದ್ರೆ ಈ ಮಾರಕ ಕಾಯಿಲೆಗೆ ಸಿಗುತ್ತೆ ಪರ್ಮನೆಂಟ್ ಪರಿಹಾರ!

ವಿರಾಟ್ ಕೊಹ್ಲಿ ಅವರ ಜನ್ಮದಿನದಂದೇ 49 ಏಕದಿನ ಶತಕಗಳನ್ನು ಬಾರಿಸಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಇನ್ನೊಂದೆಡೆ ಐದು ವಿಕೆಟ್ ಪಡೆದ ರವೀಂದ್ರ ಜಡೇಜಾ ಮತ್ತು ಉಳಿದ ಬೌಲರ್‌’ಗಳ ಅಮೋಘ ಪ್ರದರ್ಶನದ ಆಧಾರದ ಮೇಲೆ ಭಾರತವು ದಕ್ಷಿಣ ಆಫ್ರಿಕಾವನ್ನು 243 ರನ್‌’ಗಳಿಂದ ಸೋಲಿಸಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News