ರೋಹಿತ್ ಶರ್ಮಾರನ್ನು ಕೆಳಗಿಳಿಸಿ 26ರ ಹರೆಯದ ಈ ಆಟಗಾರನಿಗೆ ನಾಯಕತ್ವ ನೀಡಲಿದೆ- ಬಿಸಿಸಿಐ ಅಧಿಕಾರಿ ಹೇಳಿಕೆ

Team India Captain, IND vs AUS T20: ಒಂದು ವೇಳೆ ಹಾರ್ದಿಕ್ ಪಾಂಡ್ಯ ಎಲ್ಲಾ ವಿಶ್ವಕಪ್ ಪಂದ್ಯಗಳನ್ನು ಆಡಿದ್ದರೆ ಐದು ಪಂದ್ಯಗಳ ಟಿ-20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ನಾಯಕನಾಗಿ ಮುಂದುವರೆಯುತ್ತಿದ್ದರು. ಆದರೆ ಇದೀಗ ಅವರು ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದು, ಮುಂದಿನ ಪಂದ್ಯದಿಂದ ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ.

Written by - Bhavishya Shetty | Last Updated : Nov 7, 2023, 04:19 PM IST
    • ವಿಶ್ವಕಪ್’ನಿಂದ ಹಾರ್ದಿಕ್ ಪಾಂಡ್ಯ ಹೊರಗುಳಿದಿದ್ದಾರೆ
    • ವಿಶ್ವ ಟೂರ್ನಿ ಮುಗಿದ ಬಳಿಕ ಭಾರತ, ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಆಡಲಿದೆ
    • ಧೋನಿ ಶಿಷ್ಯ ರುತುರಾಜ್ ಗಾಯಕ್ವಾಡ್ ನಾಯಕನಾಗುವ ಸಾಧ್ಯತೆ
ರೋಹಿತ್ ಶರ್ಮಾರನ್ನು ಕೆಳಗಿಳಿಸಿ 26ರ ಹರೆಯದ ಈ ಆಟಗಾರನಿಗೆ ನಾಯಕತ್ವ ನೀಡಲಿದೆ- ಬಿಸಿಸಿಐ ಅಧಿಕಾರಿ ಹೇಳಿಕೆ title=
Team India Captain

Team India Captain, IND vs AUS T20: ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡು ವಿಶ್ವಕಪ್’ನಿಂದ ಹಾರ್ದಿಕ್ ಪಾಂಡ್ಯ ಹೊರಗುಳಿದಿದ್ದಾರೆ. ಇವರ ಬದಲಿಯಾಗಿ ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಶಮಿ ಮತ್ತು ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದರು. ಇನ್ನು ವಿಶ್ವ ಟೂರ್ನಿ ಮುಗಿದ ಬಳಿಕ ಭಾರತ, ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಆಡಲಿದೆ. ಆದರೆ ಈ ಟೂರ್ನಿಯಲ್ಲಿ ನಾಯಕ ಸ್ಥಾನ ಬದಲಾಗಲಿದೆ.

ಇದನ್ನೂ ಓದಿ:  ಅನುಷ್ಕಾ ಶೆಟ್ಟಿ ಮೊದಲು ನಟಿಸಿದ್ದು ತೆಲುಗಿನಲ್ಲಿ ಅಲ್ಲ… ಕನ್ನಡದ ಈ ಧಾರಾವಾಹಿಯಲ್ಲಿ! ಯಾವುದದು ಗೊತ್ತಾ?

ಈ ಟೂರ್ನಿಗೆ ಧೋನಿ ಶಿಷ್ಯ ರುತುರಾಜ್ ಗಾಯಕ್ವಾಡ್ ನಾಯಕನಾಗುವ ಸಾಧ್ಯತೆ ಇದೆ. ಇವರು ಏಷ್ಯನ್ ಗೇಮ್ಸ್’ನಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕರಾಗಿದ್ದು, ಚಿನ್ನದ ಪದಕ ಗೆದ್ದುಕೊಟ್ಟಿದ್ದರು. ಇದೇ ಕಾರಣದಿಂದ ಅವರನ್ನು IND vs AUS T20 ಸರಣಿಯಲ್ಲಿ ನಾಯಕನನ್ನಾಗಿ ಮಾಡುವ ಸಾಧ್ಯತೆಯಿದೆ.

ಒಂದು ವೇಳೆ ಹಾರ್ದಿಕ್ ಪಾಂಡ್ಯ ಎಲ್ಲಾ ವಿಶ್ವಕಪ್ ಪಂದ್ಯಗಳನ್ನು ಆಡಿದ್ದರೆ ಐದು ಪಂದ್ಯಗಳ ಟಿ-20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ನಾಯಕನಾಗಿ ಮುಂದುವರೆಯುತ್ತಿದ್ದರು. ಆದರೆ ಇದೀಗ ಅವರು ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದು, ಮುಂದಿನ ಪಂದ್ಯದಿಂದ ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ಸೇರಿ ಕೆಲ ಆಟಗಾರರು ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿಯಲಿದ್ದಾರೆ. ಈ ಹಿನ್ನೆಲೆಯಲ್ಲಿ ರುತುರಾಜ್ ಗಾಯಕ್ವಾಡ್ ಅವರು IND vs AUS T20 ಸರಣಿಯಲ್ಲಿ ಮುನ್ನಡೆ ಸಾಧಿಸುವ ಏಕೈಕ ಆಟಗಾರನಾಗಿದ್ದಾರೆ.

ಬಿಸಿಸಿಐ ಅಧಿಕಾರಿ ಹೇಳಿದ್ದು ಹೀಗೆ…

“ಸೂರ್ಯ ಅಥವಾ ರುತುರಾಜ್ ನಾಯಕನಾಗಬೇಕು ಎಂಬ ಆಲೋಚನೆಯಿತ್ತು. ಈಗ, ಹಾರ್ದಿಕ್ ವಿಶ್ವಕಪ್ ಪಂದ್ಯಗಳನ್ನು ಕಳೆದುಕೊಂಡಿದ್ದು ಅವರ ಸ್ಥಾನದಲ್ಲಿ ಸೂರ್ಯಕುಮಾರ್ ಇದ್ದಾರೆ. ಹೀಗಾಗಿ ಅವರಿಗೆ ನಾಯಕತ್ವ ನೀಡುವುದು ಕಷ್ಟ. ಹಾರ್ದಿಕ್ ಅವರ ಫಿಟ್‌ನೆಸ್ ಮೌಲ್ಯಮಾಪನ ಮಾಡಿದ ನಂತರ ನಾವು ಮುಂದಿನ ವಾರ ದೃಢ ನಿರ್ಧಾರ ತೆಗೆದುಕೊಳ್ಳುತ್ತೇವೆ ”ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಇನ್‌ಸೈಡ್‌ ಸ್ಪೋರ್ಟ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿ: BBKS10: ಮುಂದಿನವಾರ ಮನೆಯಿಂದ ಹೊರಬರೋದು ಇವರೇ! ರಕ್ಷಕ್ ಬುಲೆಟ್ ವಾಕ್‌ಬಾಣ ಯಾರತ್ತ?   

ರುತುರಾಜ್ ಗಾಯಕ್ವಾಡ್ ಹೊರತುಪಡಿಸಿ, ರಾಜಸ್ಥಾನ ರಾಯಲ್ಸ್ ಮತ್ತು ಕೇರಳವನ್ನು ಮುನ್ನಡೆಸಿರುವ ಸಂಜು ಸ್ಯಾಮ್ಸನ್‌ ಅವರಿಗೆ ನಾಯಕತ್ವ ನೀಡಬಹುದು. ಆದರೆ ಹೆಚ್ಚಿನ ಸಂಭಾವ್ಯತೆ ರುತುರಾಜ್ ಕಡೆಯಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News