ಕಬ್ಬಿನ ಆಯುಕ್ತ ಮನೀಶ್ ಚೌಹಾಣ್ ಅವರನ್ನು ಆಹಾರ ಮತ್ತು ಲಾಜಿಸ್ಟಿಕ್ಸ್ ವಿಭಾಗದ ಆಯುಕ್ತರನ್ನಾಗಿ ಮಾಡಲಾಗಿದೆ ಮತ್ತು ಅವರ ಸ್ಥಾನದಲ್ಲಿ ಕಬ್ಬು ಅಭಿವೃದ್ಧಿ ಮತ್ತು ಅಬಕಾರಿ ಮುಖ್ಯ ಕಾರ್ಯದರ್ಶಿ ಸಂಜಯ್ ಭೂಸ್ರೆಡ್ಡಿ ಅವರನ್ನು ನೇಮಿಸಲಾಗಿದೆ.
ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಸುಮಾರು ಎರಡೂವರೆ ವರ್ಷಗಳ ನಂತರ ಮೊದಲ ಬಾರಿಗೆ ಉತ್ತರ ಪ್ರದೇಶ ಸರ್ಕಾರದಲ್ಲಿ ಸಂಪುಟ ಪುನರ್ರಚನೆ ಮಾಡಲಾಗುತ್ತಿದೆ.
ಉತ್ತರಪ್ರದೇಶ ಕ್ಯಾಬಿನೆಟ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಐವರು ಮಂತ್ರಿಗಳಾದ - ಹಣಕಾಸು ಸಚಿವ ರಾಜೇಶ್ ಅಗರ್ವಾಲ್, ಸಾರಿಗೆ ಸಚಿವ ಸ್ವತಂತ್ರ ದೇವ್ ಸಿಂಗ್, ಅರ್ಚನ ಪಾಂಡೆ, ಅನುಪಮ ಜೈಸ್ವಾಲ್ ಮತ್ತು ಧರಂಪಾಲ್ ಸಿಂಗ್ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ.
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದಂತೆ ಕೆಲವು ಅಂಕಿಅಂಶಗಳನ್ನು ಕೇಳಿದ್ದರುಜಿಲ್ಲಾ ಮ್ಯಾಜಿಸ್ಟ್ರೇಟ್ ಈ ಅಂಕಿಅಂಶಗಳನ್ನು ಮಂಡಿಸಿದರು, ಆದರೆ ಕೆಲ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ತಪ್ಪಾದ ಅಂಕಿ ಅಂಶಗಳನ್ನು ಮಂಡಿಸಿರುವುದಕ್ಕೆ ಯೋಗಿ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದೆ.
ಕೇಂದ್ರ ಸಚಿವ ಅಮಿತ್ ಶಾ ಈಗ ಕೊನೆಗೂ ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನಾಗಿ ಯೋಗಿ ಆದಿತ್ಯನಾಥ್ ಅವರನ್ನು ಆಯ್ಕೆ ಮಾಡಿದ್ದರ ಹಿಂದಿನ ರಹಸ್ಯವನ್ನು ವಿವರಿಸಿದ್ದಾರೆ. ಲಖನೌದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಅಮಿತ್ ಶಾ ಈ ವಿಚಾರವನ್ನು ಬಹಿರಂಗಪಡಿಸಿದರು. ಈ ವೇಳೆ ಸಿಎಂ ಯೋಗಿ ಆದಿತ್ಯನಾಥ್ ಕೂಡ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಯೋಗಿ ಆದಿತ್ಯನಾಥ್ ಅವರು 2017 ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಈವರೆಗೂ ಉತ್ತರ ಪ್ರದೇಶ ಸರ್ಕಾರ ಒಟ್ಟು 76 ಪ್ರಕರಣಗಳನ್ನು ಹಿಂತೆಗೆದುಕೊಂಡಿದೆ ಎಂಬುದು ಗಮನಿಸಬೇಕಾದ ಅಂಶ.
ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋ ವೈರಲ್ ಆಗಿದ್ದು, ಬಿಜೆಪಿ ಬೆಂಬಲಿಸುವವರ ಅಂಗಡಿಗಳಿಂದ ಸಾಮಾನುಗಳ ಖರೀದಿಯನ್ನು ಕೂಡಲೇ ನಿಲ್ಲಿಸಬೇಕೆಂದು ಕೈರಾನಾ ಮತ್ತು ಅಲ್ಲಿನ ಸಮೀಪದ ಗ್ರಾಮಗಳ ಜನರಿಗೆ ಒತ್ತಾಯಿಸುತ್ತಿರುವುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿದೆ.
ವಿಧಾನಸಭೆಯಲ್ಲಿ ಹಲವು ಬಾರಿ ಲೋಟದಲ್ಲಿರುವ ನೀರನ್ನು ಪೂರ್ಣ ಬಳಸದೆ ವ್ಯರ್ಥವಾಗುವುದನ್ನು ಕಾಣುತ್ತೇವೆ. ನೀರಿನ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ವಿಧಾನಸಭೆಯ ಸ್ಪೀಕರ್ ತಿಳಿಸಿದ್ದಾರೆ.
ಭೂವಿವಾದಕ್ಕೆ ಸಂಬಂಧಿಸಿದಂತೆ ಪೂರ್ವ ಉತ್ತರ ಪ್ರದೇಶದ ಸೋನ್ಭದ್ರ ಜಿಲ್ಲೆಯ ಹಳ್ಳಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಜನರನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡಿನ ಚಕಮಕಿಯಲ್ಲಿ 19 ಮಂದಿ ಗಾಯಗೊಂಡಿದ್ದಾರೆ. ಗುಂಡಿನ ದಾಳಿಗೆ ಸಂಬಂಧಿಸಿದಂತೆ ಇಬ್ಬರು ಜನರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ
ಉತ್ತರ ಪ್ರದೇಶದ ಸೀತಾಪುರದಲ್ಲಿ ಮಹಿಳೆಯೊಬ್ಬಳು ತನ್ನ ಎರಡು ತಿಂಗಳ ಮಗಳನ್ನು ತನ್ನ ಮನೆಯಲ್ಲಿ ಸಮಾಧಿ ಮಾಡಿದ ನಂತರ ತನ್ನ ಮನೆಗೆ ಬೆಂಕಿ ಹಚ್ಚಿದ್ದಾಳೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಮಧುಬನ್ ಸಿಂಗ್ ಹೇಳಿದ್ದಾರೆ.
ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿಗೆ ಈಗ ಮುಜುಗರದ ಸಂಗತಿಯೊಂದು ಎದುರಾಗಿದೆ.ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಚಿತಾಭಸ್ಮ ವಿಸರ್ಜನೆಗೆ ವ್ಯಯಸಿದ್ದ 2.54 ಕೋಟಿ ರೂ.ಗಳ ಬಿಲ್ ನ್ನು ಉ.ಪ್ರದೇಶ ಸರ್ಕಾರ ಇದುವರೆಗೆ ಪಾವತಿಸಿಲ್ಲ ಎನ್ನಲಾಗಿದೆ. ಇದರಿಂದ ಈಗ ಬಿಜೆಪಿ ಸರ್ಕಾರಕ್ಕೆ ಈ ವಿಚಾರ ಸಾಕಷ್ಟು ಇರಿಸು ಮುರಿಸು ಉಂಟು ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.