ಅಕ್ಟೋಬರ್ 21 ರಂದು ನಾಗೌರ್ ಜಿಲ್ಲೆಯ ಖಿನ್ವಾರ್ನಲ್ಲಿ ನಡೆಯಲಿರುವ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಲು ತಮ್ಮ ಪಕ್ಷ ರಾಷ್ಟ್ರೀಯ ಲೋಕತಂತ್ರಿಕ್ ಪಕ್ಷ (ಆರ್ಎಲ್ಪಿ) ಜೊತೆ ಮೈತ್ರಿ ಮಾಡಿಕೊಂಡಿದೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಗುರುವಾರ ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 2019(Maharashtra Assembly Elections 2019) ರಲ್ಲಿ ಬಿಜೆಪಿ ಮತ್ತು ಶಿವಸೇನೆ ನಡುವೆ ಸ್ಥಾನ ಹಂಚಿಕೆ ಮತ್ತು ಮೈತ್ರಿ ಕುರಿತು ಒಪ್ಪಂದ ಬಹುತೇಕ ಅಂತಿಮ ಘಟ್ಟ ತಲುಪಿದೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಶಾಸಕ, ವಿಧಾನಪರಿಷತ್ ಸದಸ್ಯರಾದ ಜಗ್ಗೇಶ್ ಅವರು ವಲಸೆ ಬಂದಿರುವ ಶಾಸಕರಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆಗಳ ಬಗ್ಗೆ ಈ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.
ದೇಶಾದ್ಯಂತ ಹಿಂದಿ ಸಾಮಾನ್ಯ ಭಾಷೆಯಾಗಬೇಕೆಂದು ಗೃಹ ಸಚಿವ ಅಮಿತ್ ಶಾ ಪ್ರತಿ ಪಾದಿಸುತ್ತಿರುವ ಬೆನ್ನಲ್ಲೇ ಈಗ ತಮಿಳುನಾಡಿನ ಬಿಜೆಪಿ ನಾಯಕ ಪೊನ್ ರಾಧಾಕೃಷ್ಣನ್ ಅವರು ತಮಿಳು ಭಾಷೆಯನ್ನು ರಾಷ್ಟ್ರೀಯ ಭಾಷೆಯಾಗಿ ಗುರುತಿಸಬೇಕೆಂದು ಪ್ರತಿಪಾದಿಸಿದರು.
ಶಿವಸೇನೆ ಮತ್ತು ಬಿಜೆಪಿ ನಡುವಿನ ಮೈತ್ರಿಯಲ್ಲಿ ಯಾವುದೇ ರೀತಿಯ ಸಮಸ್ಯೆ ಇಲ್ಲ. ಎರಡು ದಿನಗಳಲ್ಲಿ ಸೀಟು ಹಂಚಿಕೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಿವಸೇನೆ ಮುಖ್ಯಸ್ಥರು ಹೇಳಿದರು.
ಬುಧವಾರ, ಮಹಾರಾಷ್ಟ್ರ ಸರ್ಕಾರದ ಸಚಿವರಾಗಿರುವ ಶಿವಸೇನೆ ನಾಯಕ ರೌಟೆ, ಬಿಜೆಪಿಯಿಂದ ಸಮಾನ ಸಂಖ್ಯೆಯ ಸ್ಥಾನಗಳನ್ನು ನೀಡದಿದ್ದರೆ ಶಿವಸೇನೆ ಮತ್ತು ಬಿಜೆಪಿ ನಡುವಿನ ಚುನಾವಣಾ ಪೂರ್ವ ಮೈತ್ರಿ ಮುರಿಯಬಹುದು ಎಂದು ಹೇಳಿಕೊಂಡಿದ್ದರು.
ನಮ್ಮ ಕಾಲದ ಕ್ರಾಂತಿಕಾರಿ ಎಸ್ಸಿಪಿ-ಟಿಎಸ್ಪಿ ಕಾಯ್ದೆಯನ್ನು ದುರ್ಬಲಗೊಳಿಸಲು ಹೊರಟರೆ ದಲಿತ ಸಮುದಾಯ ದಂಗೆ ಎದ್ದೀತು, ಅದರ ಮುಂಚೂಣಿಯಲ್ಲಿ ನಾನೇ ಇರುತ್ತೇನೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
'ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುತ್ತದೆ' ಎಂಬ ಮಾತೊಂದಿತ್ತು. ಯಡಿಯೂರಪ್ಪ ಹೆಸರಿನ ಹಿಂದೆ 'ಹೋರಾಟಗಾರ' ಎಂಬ ವಿಶೇಷಣವನ್ನು ಸೇರಿಸಲಾಗುತ್ತಿತ್ತು. ಬಲ್ಲವರು, ಬಗಿಲಲ್ಲಿರುವವರು 'ಛಲದಂಕ ಮಲ್ಲ' ಎಂಬ ಬಿರುದನ್ನು ನೀಡಿದ್ದರು.
2019 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ(Maharashtra Assembly Elections 2019) ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ತಂಡ ಮಂಗಳವಾರ ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದೆ. ತಂಡವು ಮುಖ್ಯ ಚುನಾವಣಾ ಆಯುಕ್ತರು ಮತ್ತು 2 ಚುನಾವಣಾ ಆಯುಕ್ತರನ್ನು ಒಳಗೊಂಡಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.