ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ಹಿನ್ನಲೆಯಲ್ಲಿಯೇ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಶೋಭಾ ಕರಂದ್ಲಾಜೆ ವಿಧಾನಸಭೆಯಲ್ಲಿ ಬಹುಮತಕ್ಕೆ ನಂಬರ್ ಸಮಸ್ಯೆಯಿಲ್ಲ ಎಂದು ಹೇಳಿದರು.
ರೈತರಿಗಾಗಿ ಏನಾದರೂ ಮಾಡಬೇಕೆಂಬ ತುಡಿತ ಯಡಿಯೂರಪ್ಪ ಅವರಲ್ಲಿದೆ. ಹಾಗಾಗಿ ಅಧಿಕಾರಕ್ಕೆ ಬಂದ ಬಳಿಕ ರೈತರಿಗೆ ಒಳ್ಳೆಯದು ಮಾಡುವ, ರಾಜ್ಯದ ಜನತೆಗೆ ಒಳ್ಳೆಯದು ಮಾಡುವ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಬಹುಮತ ಇಲ್ಲದಿದ್ದರೂ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಳು ಹೊರಟಿರುವುದು ಮತ್ತು ಈ ತರಾತುರಿ ನಿರ್ಧಾರವನ್ನು ರಾಜ್ಯಪಾಲರು ಒಪ್ಪಿರುವುದು ಸಂಸದೀಯ ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬಿಎಸ್ವೈ ಪ್ರಮಾಣ ವಚನ ಸ್ವೀಕರಿಸುವಾಗ ಮಹೇಶ್ ಕುಮಟಳ್ಳಿ ಒಬ್ಬ ಬಿಟ್ಟು ಉಳಿದ ತೃಪ್ತ ಶಾಸಕರಿಗೆ ಪ್ರಮಾಣ ವಚನ ನೀಡಲೇಬೇಕು. ಇಲ್ಲಾಂದ್ರೆ ಯಾರೂ ಯಡಿಯೂರಪ್ಪರನ್ನು ಸುಮ್ಮನ್ನೇ ಬಿಡುವುದಿಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕರ್ನಾಟಕ ರಾಜ್ಯ ವಿಧಾನಸಭೆಯಲ್ಲಿ ಇಂದು ನಡೆದ ವಿಶ್ವಾಸಮತದಲ್ಲಿ ನಾವು ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಸೋಲಿಸುವ ಮೂಲಕ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದ್ದೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರಿಗೆ ಯಡಿಯೂರಪ್ಪ ಪತ್ರ ಬರೆದಿದ್ದಾರೆ.
ನಾಳೆಯಿಂದಲೇ ರಾಜ್ಯದ ಜನತೆಗೆ ಒಳ್ಳೆಯದಾಗಲಿದೆ. ನನ್ನ ಮೊದಲ ಆದ್ಯತೆ ಬರಗಾಲದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಅನ್ನ ಕೊಡುವ ರೈತ ಸಮುದಾಯ. ಹಾಗಾಗಿ ರಾಜ್ಯದಲ್ಲಿ ಬರಪರಿಹಾರಕ್ಕಾಗಿ ತ್ವರಿತವಾಗಿ ಕೆಲಸ ಮಾಡುತ್ತೇವೆ ಎಂದು ಯಡಿಯೂರಪ್ಪ ಹೇಳಿದರು.
ವಿಶ್ವಾಸ ಮತ ಚಲಾಯಿಸುವುದಾಗಿ ಹೇಳಿದ್ದ ಸಿಎಂ ಕುಮಾರಸ್ವಾಮಿಯವರ ಮಾತಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವಿಶ್ವಾಸ ನಿರ್ಣಯವನ್ನು ಎದುರಿಸಲು ಸಿದ್ಧ ಎಂದು ಹೇಳಿದರು.
ಹಳ್ಳಿಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಜನರ ಭಾವನೆಗಳನ್ನು ಹತ್ತಿಕ್ಕಿ ಸಿಎಂ ಗ್ರಾಮ ವಾಸ್ತವ್ಯ ಮಾಡುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ಮತ್ತು ಜನ ವಿರೋಧಿ ಕ್ರಮ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.