ದಿಢೀರ್ ಎಂದು ಬಂದಿದ್ದ ಉಪ ಚುನಾವಣೆಯಿಂದ ಪ್ರಮುಖವಾಗಿ ಅನರ್ಹರು ಮತ್ತು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಪತರುಗುಟ್ಟಿ ಹೋಗಿದ್ದವು. ಚುನಾವಣೆಗೆ ಹುರಿಯಾಳುಗಳನ್ನು ಅಣಿಗೊಳಿಸಲು ನಿರತವಾಗಿದ್ದವು. ಇದಾದ ಬಳಿಕ ಸೆಪ್ಟೆಂಬರ್ 26ರಂದು ಸುಪ್ರೀಂ ಕೋರ್ಟ್ ಉಪ ಚುನಾವಣೆಗೆ ತಡೆ ನೀಡಿ ಎಲ್ಲರಲ್ಲೂ ನಿರಾಳ ಉಂಟುಮಾಡಿತ್ತು.
ಕೆಲವು ಸತ್ಯಗಳನ್ನು ನ್ಯಾಯಾಲಯದ ಮುಂದೆ ಇಡಲಿದ್ದೇನೆ ಎಂದು ವಾದ ಶುರುಮಾಡಿದ ಕಪಿಲ್ ಸಿಬಲ್, ಅನರ್ಹರು ತರಾತುರಿಯಲ್ಲಿ ರಾಜೀನಾಮೆ ನೀಡಿದರು. ಅಷ್ಟೂ ಜನ ರಾಜೀನಾಮೆ ನೀಡಿದ್ದನ್ನು ವಿಡಿಯೋ ರೆಕಾರ್ಡ್ ಮಾಡಲಾಗಿದೆ.
ಚುನಾವಣೆ ಮುಂದೆ ಹೋಗಬೇಕು ಎಂದು ನಮ್ಮ ಸ್ನೇಹಿತರೆಲ್ಲರೂ ಬಯಸಿದ್ದರು. ಅದರಂತೆಯೇ ಆಗಿದೆ. ಆದರೆ ನನಗೆ ಚುನಾವಣೆ ನಡೆದಿದ್ದರೆ ಒಳ್ಳೆಯದಿತ್ತೇನೋ ಅನಿಸುತ್ತಿದೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಎರಡು ದಿನಗಳ ಕಾಲ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಸುಪ್ರೀಂ ಕೋರ್ಟ್ ಉಪಚುನಾವಣೆಗೆ ತಡೆ ನೀಡಿ ಆದೇಶ ಹೊರಡಿಸಿ ವಿಚಾರಣೆಯನ್ನು ಮುಂದೂಡಿದೆ. ಈ ಬಗ್ಗೆ ಯಾವುದೇ ಕಟುವಾದ ಪದ ಪ್ರಯೋಗ ಮಾಡುವುದಿಲ್ಲ ಎಂದು ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಒಟ್ಟಾರೆ ಅನರ್ಹ ಶಾಸಕರ ಪರವಾಗಿ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ, ಚಿಕ್ಕಬಳ್ಳಾಪುರ ಕ್ಷೇತ್ರದ ಅನರ್ಹ ಶಾಸಕ ಡಾ. ಸುಧಾಕರ್ ಪರವಾಗಿ ಹಿರಿಯ ನ್ಯಾಯವಾದಿ ಸಿ.ಎ. ಸುಂದರಂ, ಪಕ್ಷೇತರ ಶಾಸಕ ಆರ್. ಶಂಕರ್ ಮತ್ತು ಶ್ರೀಮಂತ ಪಾಟೀಲ್ ಪರವಾಗಿ ಗಿರಿ, ಆನಂದ್ ಸಿಂಗ್ ಪರವಾಗಿ ಸಜ್ಜನ್ ಪೂವಯ್ಯ, ಜೆಡಿಎಸ್ ಅನರ್ಹ ಶಾಸಕರ ಪರವಾಗಿ ವಿಶ್ವನಾಥನ್ ಹಾಗೂ ಸ್ಪೀಕರ್ ಪರವಾಗಿ ಅಡಿಷನಲ್ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.
ಕಳೆದ ಸೋಮವಾರ ಅನರ್ಹ ಶಾಸಕರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜಯ್ ಖನ್ನಾ ಮತ್ತು ಕೃಷ್ಣನ್ ಮುರಾರಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಬುಧವಾರ ಅನರ್ಹ ಶಾಸಕರ ಪರ ವಕೀಲ ಮುಕುಲ್ ರೊಹಟಗಿ ಮತ್ತು ಗುರುವಾರ ಕೆಪಿಸಿಸಿ ಪರ ವಕೀಲರಾದ ಕಪಿಲ್ ಸಿಬಲ್ ವಾದ ಮಂಡಿಸುವಂತೆ ಹೇಳಿತ್ತು.
ಸಾಮಾಜಿಕ ಮಾಧ್ಯಮಗಳಿಗೆ ಕಠಿಣ ಮಾರ್ಗಸೂಚಿಗಳನ್ನು ನೀಡಬೇಕು. 'ನನ್ನ ಗೌಪ್ಯ ಮಾಹಿತಿ ಸುರಕ್ಷಿತವಲ್ಲ, ನಾನು ಸ್ಮಾರ್ಟ್ಫೋನ್ ಬಿಡುವ ಬಗ್ಗೆ ಯೋಚಿಸುತ್ತಿದ್ದೇನೆ' - ನ್ಯಾಯಮೂರ್ತಿ ದೀಪಕ್ ಗುಪ್ತಾ
ಈ ಮೊದಲು ಹಿಮಾಚಲ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಆಗಿದ್ದ ವಿ. ರಾಮಸುಬ್ರಮಣಿಯನ್, ರಾಜಸ್ಥಾನ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರವೀಂದ್ರ ಭಟ್, ಪಂಜಾಬ್ ಹರಿಯಾಣ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಕೃಷ್ಣ ಮುರಾರಿ ಮತ್ತು ಕೇರಳ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ರಿಷಿಕೇಶ್ ರಾಯ್ ಸುಪ್ರೀಂ ಕೋರ್ಟ್ನ ನೂತನ ನ್ಯಾಯಾಧೀಶರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ವಿವಾದಿತ ರಾಮಜನ್ಮ ಭೂಮಿ ಪ್ರಕರಣ ಕುರಿತಂತೆ ಅಂತಿಮ ಗಡುವು ನೀಡಿರುವ ಸುಪ್ರೀಂಕೋರ್ಟ್, ಅಗತ್ಯವಿದ್ದರೆ ಪ್ರತಿದಿನ ಮತ್ತು ಪ್ರತಿ ಶನಿವಾರ ಒಂದು ಗಂಟೆ ಹೆಚ್ಚುವರಿ ವಿಚಾರಣೆ ನಡೆಸಲು ಸಿದ್ಧ ಎಂದು ತಿಳಿಸಿದೆ.
ಮೊದಲಿಗೆ ಬಹಳ ಬೇಗ ತಮಗೆ ಸುಪ್ರೀಂ ಕೋರ್ಟಿನಲ್ಲಿ ನ್ಯಾಯಸಿಗುತ್ತೆ, ತಾವು ನೂತನ ಸರ್ಕಾರದಲ್ಲಿ ಸಚಿವರಾಗಬಹುದು ಎಂದು ಕನಸು ಕಂಡಿದ್ದ ಅನರ್ಹ ಶಾಸಕರಿಗೆ 10 ದಿನವಾದರೂ ಶುಭ ಸುದ್ದಿ ಸಿಗಲಿಲ್ಲ. ಪ್ರಕರಣ ಇತ್ಯರ್ಥ ಆಗುವುದಿರಲಿ ಅರ್ಜಿ ವಿಚಾರಣೆಗೆ ಬರಲಿಲ್ಲ.
ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಅಜಾದ್ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ ಅವರ ಸಂಬಂಧಿಕರು ಮತ್ತು ಹಿತೈಷಿಗಳನ್ನು ಭೇಟಿ ಮಾಡಲು ಸುಪ್ರೀಂಕೋರ್ಟ್ ನಿಂದ ಅನುಮತಿ ಕೋರಿ ಮನವಿ ಸಲ್ಲಿಸಿದ್ದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಬಂಧನದ ನಿಬಂಧನೆಗಳನ್ನು ವಾಸ್ತವಿಕವಾಗಿ ದುರ್ಬಲಗೊಳಿಸಿದ ತನ್ನ ಮಾರ್ಚ್ 2018 ರ ತೀರ್ಪಿನ ಪರಿಶೀಲನೆಗಾಗಿ ಕೇಂದ್ರದ ಮನವಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ಉಲ್ಲೇಖಿಸಿದೆ.
ಸುಪ್ರೀಂ ಕೋರ್ಟ್ ಪ್ರಕಾರ, ಇಲ್ತಿಜಾ ಅವರು ಶ್ರೀನಗರಕ್ಕೆ ಯಾವಾಗ ಬೇಕಾದರೂ ಭೇಟಿ ನೀಡಬಹುದು ಮತ್ತು ಆಡಳಿತದ ಅನುಮತಿಯ ನಂತರ ತಾಯಿ ಮೆಹಬೂಬಾ ಮುಫ್ತಿ ಅವರನ್ನು ಭೇಟಿ ಮಾಡಬಹುದು. ಕಳೆದ ವಾರದ ಆರಂಭದಲ್ಲಿ, ಮೆಹಬೂಬಾ ಮುಫ್ತಿ ಅವರ ತಾಯಿ ಮತ್ತು ಸಹೋದರಿ ಅವರನ್ನು ಭೇಟಿಯಾಗಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.