ಮಾಜಿ ಹಣಕಾಸು ಸಚಿವ ಪಿ.ಚಿದಂಬರಂಗೆ ದೊಡ್ಡ ಹಿನ್ನಡೆಯಾಗಿ, ಜಾರಿ ನಿರ್ದೇಶನಾಲಯ (ಇಡಿ) ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿರುವ 370 ನೇ ವಿಧಿಯನ್ನು ರದ್ದುಪಡಿಸುವ ವಿಷಯದ ಕುರಿತು ಮನವಿಗಳನ್ನು ಸಂವಿಧಾನ ಪೀಠವು ಆಲಿಸಲಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ನಿರ್ಧರಿಸಿದೆ.
ಮತ್ತೊಮ್ಮೆ ಅನರ್ಹ ಶಾಸಕರ ಪ್ರಕರಣವನ್ನು ತುರ್ತಾಗಿ ವಿಚಾರಣೆಗಾಗಿ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆಯೇ ಮಂಡಿಸಲಾಯಿತು. ಮುಕುಲ್ ರೋಹ್ಟಗಿ ಮಂಗಳವಾರವೂ ಪ್ರಕರಣದ ಮೆನ್ಷನ್ ಮಾಡಲು ಮನಸ್ಸು ಮಾಡಲಿಲ್ಲ. ಅವರ ಬದಲು ವಕೀಲ ಗಿರಿ ಮೆನ್ಷನ್ ಮಾಡಿದರು.
ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟಿನಲ್ಲಿ ವಿಳಂಬವಾದರೆ ತಮ್ಮ ರಾಜಕೀಯ ಭವಿಷ್ಯ ಮುಸುಕಾಗಬಹುದು ಎಂದು ಆತಂಕಕ್ಕೊಳಗಾಗಿರುವ ಅನರ್ಹ ಶಾಸಕರು, 'ಪ್ರಕರಣವನ್ನು ಬೇಗ ಇತ್ಯರ್ಥ ಪಡಿಸಲು ಕಾನೂನು ಹೋರಾಟಕ್ಕೆ ಸಹಕಾರ ಕೊಡಿ' ಎಂದು ಕಳೆದ ವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರಿದ್ದರು.
ಮುಂದಿನ ಕೆಲವೇ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ಸುಧಾರಿಸುತ್ತದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.ಜಮ್ಮು ಮತ್ತು ಕಾಶ್ಮೀರದಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಸುಧಾರಿಸುತ್ತಿದೆ. ನಿರ್ಬಂಧಗಳನ್ನು ಕ್ರಮೇಣ ತೆಗೆದು ಹಾಕಲಾಗುತ್ತಿದೆ ಎಂದು ಹೇಳಿದೆ.10 ದಿನಗಳಿಗಿಂತ ಹೆಚ್ಚು ಕಾಲ ಕಣಿವೆಯಲ್ಲಿನ ನಿರ್ಬಂಧಗಳನ್ನು ತಕ್ಷಣವೇ ತೆಗೆದುಹಾಕುವಂತೆ ಕೋರಿ ಸಲ್ಲಿಸಿದ ಅರ್ಜಿಯೊಂದಕ್ಕೆ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿದೆ.
ಅಯೋಧ್ಯೆ ಭಗವಾನ್ ರಾಮನ ಜನ್ಮಸ್ಥಳ ಎಂಬುದು ಹಿಂದೂಗಳ ನಂಬಿಕೆಯಾಗಿದೆ ಮತ್ತು ಅದು ಎಷ್ಟು ತರ್ಕಬದ್ಧವಾಗಿದೆ ಎಂಬುದನ್ನು ಒರೆಗೆ ಹಚ್ಚಲು ಹೋಗಬಾರದು ಎಂದು ರಾಮ್ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದ ವಿಚಾರಣೆ ವೇಳೆ ರಾಮ್ ಲಲ್ಲಾ ವಿರಾಜ್ಮನ್ ಸುಪ್ರೀಂಕೋರ್ಟ್ ಗೆ ಸಲಹೆ ನೀಡಿದೆ.
ಪ್ರಸ್ತುತ ಕಾಲಘಟ್ಟವು ಕೆಲವು ವ್ಯಕ್ತಿ ಮತ್ತು ಗುಂಪುಗಳಿಂದಾಗಿ ಯುದ್ಧೋನ್ಮಾದಕ್ಕೆ ಸಾಕ್ಷಿಯಾಗುತ್ತಿದೆ ಎಂದು ಭಾರತದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಕಳವಳ ವ್ಯಕ್ತ ಪಡಿಸಿದರು. ಆದರೆ ಇಂತಹ ಬೆಳವಣಿಗೆಗಳು ದೇಶದ ಕಾನೂನು ಸಂಸ್ಥೆಗಳ ಶಕ್ತಿಯುತ ಸಂಪ್ರದಾಯಗಳಿಂದ ಸೋಲಿಸಲ್ಪಡುತ್ತವೆ ಎನ್ನುವ ಆಶಾವಾದವನ್ನು ಅವರು ವ್ಯಕ್ತಪಡಿಸಿದರು.
ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಹೊರತುಪಡಿಸಿ, ಸುಪ್ರೀಂ ಕೋರ್ಟ್ನಲ್ಲಿ ನ್ಯಾಯಾಧೀಶರ ಸಂಖ್ಯೆಯನ್ನು 31 ರಿಂದ 34ಕ್ಕೆ ಹೆಚ್ಚಿಸಲು ಸಿಜೆಐ ರಂಜನ್ ಗೊಗೊಯ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರಬರೆದಿದ್ದ ಬೆನ್ನಲ್ಲೇ ಕ್ಯಾಬಿನೆಟ್ ಈ ನಿರ್ಧಾರ ಕೈಗೊಂಡಿದೆ.
ಈಗಾಗಲೇ ಸ್ಪೀಕರ್ ಅವರು ಅನರ್ಹಗೊಳಿಸಿ ನೀಡಿರುವ ತೀರ್ಪಿಗೆ ಶೀಘ್ರ ತಡೆಯಾಜ್ಞೆ ನೀಡಬೇಕು ಹಾಗೂ ಸ್ಪೀಕರ್ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಅನರ್ಹಗೊಂಡ ಶಾಸಕರು ಸುಪ್ರೀಂಕೋರ್ಟ್ನಲ್ಲಿ ಮನವಿ ಅರ್ಜಿ ಸಲ್ಲಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.