"ಸಂಧಾನ ಸಮಿತಿಯಿಂದ ವರದಿಯನ್ನು ಸ್ವೀಕರಿಸಲಾಗಿದ್ದು, ಸಮಿತಿಯು ಆಗಸ್ಟ್ 15ರ ವರೆಗೆ ಹೆಚ್ಚುವರಿ ಕಾಲಾವಕಾಶವನ್ನು ಕೋರಿದೆ" ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠವು ತಿಳಿಸಿದೆ.
ಸುಪ್ರೀಂಕೋರ್ಟ್ ನ ಆಂತರಿಕ ಸಮಿತಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ವಿಚಾರವಾಗಿ ಸೋಮವಾರಂದು ಸುಪ್ರೀಂ ಕ್ಲೀನ್ ಚಿನ್ ನೀಡಿತ್ತು. ಈಗ ಸುಪ್ರೀಂಕೋರ್ಟ್ ನ ನಡೆಯನ್ನು ಖಂಡಿಸಿ ಮಹಿಳಾ ವಕೀಲರು ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಸಿಜೆಐ ರಂಜನ್ ಗೋಗಯ್ ವಿರುದ್ಧ ಬಂದಿರುವ ಲೈಂಗಿಕ ಕಿರುಕುಳ ಆರೋಪದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಅಭಿಪ್ರಾಯಪಟ್ಟಿದೆ.ಅಲ್ಲದೆ ಸಿಜೆಐ ವಿರುದ್ಧ ಬಂದಿರುವ ಆರೋಪಗಳೆಲ್ಲವೂ ಕೂಡ ಆಧಾರರಹಿತ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಜರ್ಮನ್ ಮೂಲದ ಕಾರು ಉತ್ಪಾದಕ ಕಂಪನಿ ವೋಕ್ಸ್ ವ್ಯಾಗನ್ ಗೆ ಈಗ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ವಿಧಿಸಿದ್ದ 500 ಕೋಟಿ ದಂಡದ ವಿಚಾರವಾಗಿ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಪ್ರಕರಣದ ಸಂಪೂರ್ಣ ವಿಚಾರಣೆ ಮುಗಿಯುವವರೆಗೂ ಯಾವುದೇ ರೀತಿಯ ಹಣ ವಸೂಲಿ ಮಾಡಲು ಒತ್ತಡ ಹೇರುವಂತಿಲ್ಲ ಎಂದು ಆದೇಶಿಸಿದೆ.
ರಾಹುಲ್ ಗಾಂಧಿ ತಮ್ಮ ವೈಯಕ್ತಿಕ ಹೇಳಿಕೆಯನ್ನು ಸುಪ್ರೀಂಕೋರ್ಟ್ ಆದೇಶ ಎಂದು ಬಿಂಬಿಸಲು ಯತ್ನಿಸಿದ್ದಾರೆ. ಕೋರ್ಟ್ ತೀರ್ಪಿನಲ್ಲಿ ಇಲ್ಲದ ಅಂಶಗಳನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಮಾಡಿ ಟೀಕೆಯಿಂದ ನ್ಯಾಯಾಂಗ ನಿಂದನೆಯಾದಂತಾಗಿದೆ ಎಂದು ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.
ಪುಣೆ ಮೂಲದ ದಂಪತಿಗಳು ಮುಸ್ಲಿಂ ಮಹಿಳೆಯರಿಗೆ ಮಸೀದಿಯೊಳಗೆ ಪ್ರವೇಶಿಸಲು ಮತ್ತು ಪ್ರಾರ್ಥನೆಗೆ ಅವಕಾಶ ಕಲ್ಪಿಸಲು ಅನುಮತಿ ಕೇಳಿದ ನಂತರ ಸುಪ್ರೀಂ ಕೋರ್ಟ್ ರಾಷ್ಟ್ರೀಯ ಮಹಿಳಾ ಆಯೋಗ, ಕೇಂದ್ರ ವಕ್ಫ್ ಕೌನ್ಸಿಲ್ ಮತ್ತು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಗೆ ನೋಟಿಸ್ ಜಾರಿ ಮಾಡಿದೆ.
ಎಲೆಕ್ಟೋರಲ್ ಬಾಂಡ್ ಯೋಜನೆಯ ಕುರಿತಾಗಿ ಕೆಲವೊಂದು ಆಕ್ಷೇಪಗಳನ್ನು ವ್ಯಕ್ತಪಡಿಸಿ ಸರಕಾರೇತರ (ಎ.ಡಿ.ಆರ್.) ಸಂಘಟನೆಯಾದ 'ಪ್ರಜಾಪ್ರಭುತ್ವ ಸುಧಾರಣಾ ಸಂಘ' ಸುಪ್ರಿಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ರಫೇಲ್ ಡೀಲ್ ಗೆ ಸಂಬಂಧಿಸಿದಂತೆ ಸೋರಿಕೆಯಾಗಿರುವ ದಾಖಲೆಗಳನ್ನು ಸಾಕ್ಷಿಯಾಗಿ ಪರಿಗಣಿಸದಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಆಕ್ಷೇಪಣಾ ಅರ್ಜಿಯನ್ನು ಬುಧವಾರ ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಭಾರತದ ಚುನಾವಣಾ ಆಯೋಗವು ಗೌರವಾನ್ವಿತ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಕಾರ್ಯಗತಗೊಳಿಸಲು ಮತ್ತು ಕಾರ್ಯರೂಪಕ್ಕೆ ತರಲು ಎಲ್ಲ ಪ್ರಯತ್ನಗಳನ್ನು ನಡೆಸಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.
2015ರಲ್ಲಿ ಗುಜರಾತ್ನಲ್ಲಿ ಪಾಟೀದಾರ್ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ವೇಳೆ ಮೆಹಸಾನಾದಲ್ಲಿ ನಡೆದ ದೊಂಬಿ ಪ್ರಕರಣದಲ್ಲಿ ಹಾರ್ದಿಕ್ಗೆ ಮೆಹಸಾನಾ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ರಾಮ್ ಕಿ ಜನ್ಮಭೂಮಿ ಚಿತ್ರದ ಬಿಡುಗಡೆಯನ್ನು ತಡೆ ಹಿಡಿಯಲು ಸುಪ್ರೀಂ ಕೋರ್ಟ್ ಗುರುವಾರದಂದು ನಿರಾಕರಿಸಿತು.ಈಗ ಇದೇ ಮಾರ್ಚ್ 29ರಂದು ದೇಶದಾದ್ಯಂತದ ಬಿಡುಗಡೆಯಾಗಲು ಸನ್ನಿತವಾಗಿದ್ಧ ಸಂದರ್ಭದಲ್ಲಿ ಈ ಸುಪ್ರೀಂಕೋರ್ಟ್ ನ ತೀರ್ಪು ಬಂದಿದೆ.
ಸುಪ್ರೀಂಕೋರ್ಟ್ ನ ಕೊಲಿಜಿಯಂ ಬಾಂಬೆ, ಮದ್ರಾಸ್ ಹಾಗೂ ಪಟ್ನಾ ಹೈಕೋರ್ಟ್ ಗಳ ಹೆಚ್ಚುವರಿ ನ್ಯಾಯಾಧೀಶರನ್ನು ಕಾಯಂಗೊಳಿಸಲು ಶಿಫಾರಸ್ಸು ಮಾಡಿದೆ. ಇದರಲ್ಲಿ ಬಾಂಬೆ ಹೈಕೋರ್ಟ್ ನಿಂದ 14 ಮದ್ರಾಸ್ ಹೈಕೋರ್ಟ್ ನಿಂದ 6 ಹಾಗೂ ಪಾಟ್ನಾ ಹೈಕೋರ್ಟ್ ನಿಂದ 6 ಹೆಚ್ಚುವರಿ ನ್ಯಾಯಾಧೀಶರನ್ನು ಕೊಲಿಜಿಯಂ ಶಿಫಾರಸ್ಸು ಮಾಡಿದೆ.
ಬುಧವಾರ ನಡೆದ ರಫೆಲ್ ಫೈಟರ್ ಜೆಟ್ ಒಪ್ಪಂದದ ವಿಚಾರವಾಗಿ ಡಿಸೆಂಬರ್ 14 ರಂದು ನೀಡಿದ ತೀರ್ಪಿನ ಪರಿಶೀಲನೆಗಾಗಿ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದೆ. ಈ ಹಿಂದೆ ಸುಪ್ರೀಂಕೋರ್ಟ್ ಫ್ರಾನ್ಸ್ ನಿಂದ 36 ರಫೆಲ್ ಯುದ್ಧ ವಿಮಾನ ಖರೀದಿಸಿರುವ ವಿಚಾರವಾಗಿ ತನಿಖೆಗೆ ಆದೇಶ ನೀಡಲು ನಿರಾಕರಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.