Aam Aadmi Party leader Sanjay Singh MP: ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ (AAP) ನಾಯಕ ಸಂಜಯ್ ಸಿಂಗ್ ಸೋಮವಾರ ೨ನೇ ಬಾರಿಗೆ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಲಿಲ್ಲ. ಅವರ ವಿರುದ್ಧದ ಪ್ರಕರಣವು ವಿಶೇಷಾಧಿಕಾರಗಳ ಸಮಿತಿಯ ಮುಂದೆ ಬಾಕಿಯಿದೆ ಎಂದು ರಾಜ್ಯಸಭೆಯ ಮೂಲಗಳು ತಿಳಿಸಿವೆ.
Sanjay Singh arrested: ಸಂಜಯ್ ಸಿಂಗ್ ಬಂಧನದ ಬಗ್ಗೆ ಆಮ್ ಆದ್ಮಿ ಪಕ್ಷವು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಆಮ್ ಆದ್ಮಿ ಪಕ್ಷದ ನಾಯಕರಾದ ಸೌರಭ್ ಭಾರದ್ವಾಜ್ ಮತ್ತು ಅತಿಶಿ ಮರ್ಲೆನಾ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
Aam Aadmi Party : ರಾಜ್ಯದಲ್ಲಿ ಈ ವರ್ಷ ನಿರೀಕ್ಷೆಯ ಮಳೆಯಾಗದೆ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಏಕಾಏಕಿ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಲಾಗಿದ್ದು ಎಂದು ರಾಜ್ಯ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.
ಸರ್ವಾಧಿಕಾರಿಯ ಹತ್ತಿರಕೆ ಬಂತು 47ರ ಸ್ವಾತಂತ್ರ್ಯ, ಸ್ವಾರ್ಥದ ರಾಜಕಾರಣಿಗಳ ಹತ್ತಿರಕೆ ಬಂತು ಸ್ವಾತಂತ್ರ್ಯ ಎಂಬಂತಾಗಿದೆ. ಸ್ವಾತಂತ್ರ್ಯ ಕಟ್ಟಕಡೆಯ ಮನುಷ್ಯನಿಗೆ ಸಿಗಬೇಕಿತ್ತು. ಆದರೆ ಆತನ ಪರಿಸ್ಥಿತಿ ಅತಂತ್ರವಾಗಿದೆ.
ಕಾಂಗ್ರೆಸ್, ಬಿಜೆಪಿ ಪಕ್ಷಗಳ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಮತನೀಡಿದ ನಾವುಗಳೆಲ್ಲರೂ ಸಾಲಗಾರರಿಗೆ ಲಕ್ಷಾಂತರ ಕೋಟಿ ಬಡ್ಡಿ ಕಟ್ಟುತ್ತಾ ಬಡ್ಡಿ ಮಕ್ಕಳಾಗಿದ್ದೇವೆ ಎಂದು ಆಮ್ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರ ಗುಡುಗಿದರು.
ಜುಲೈ 17-18 ರಂದು ಬೆಂಗಳೂರಿನಲ್ಲಿ ನಡೆಯಲಿರುವ ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸುವ ಕುರಿತು ಚರ್ಚಿಸಲು ಆಮ್ ಆದ್ಮಿ ಪಕ್ಷದ ಉನ್ನತ ನಾಯಕರು ಇಂದು ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನದ ಕಾರ್ಯತಂತ್ರದ ಬಗ್ಗೆಯೂ ಪಕ್ಷವು ಚರ್ಚಿಸಲಿದೆ.
ಆಪಾದಿತ ಅಬಕಾರಿ ನೀತಿ ಹಗರಣದ ವಿವಾದದ ಕೇಂದ್ರದಲ್ಲಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಶನಿವಾರ, ಆಮ್ ಆದ್ಮಿ ಪಕ್ಷವು ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ವಿರುದ್ಧ ಸುಳ್ಳು ಸಾಕ್ಷ್ಯ ಮತ್ತು ನ್ಯಾಯಾಲಯಗಳಲ್ಲಿ ಸುಳ್ಳು ಸಾಕ್ಷ್ಯವನ್ನು ಒದಗಿಸಿದಕ್ಕಾಗಿ ಸೂಕ್ತ ಪ್ರಕರಣಗಳನ್ನು ದಾಖಲಿಸುತ್ತದೆ ಎಂದು ಹೇಳಿದರು.
Karnataka Assembly Election 2023: ಆಮ್ ಆದ್ಮಿ ಪಾರ್ಟಿಯು ಸುಳ್ಳು ಆಶ್ವಾಸನೆಗಳನ್ನು ನೀಡುವ ಪಕ್ಷವಲ್ಲ. ನಾವು ಆಶ್ವಾಸನೆಗಳ ಬದಲು ಗ್ಯಾರೆಂಟಿ ಕಾರ್ಡ್ ನೀಡುತ್ತೇವೆ. ಇದೊಂದು ಕರಾರುಪತ್ರವಾಗಿದ್ದು, ಇವೆಲ್ಲವನ್ನೂ ಶೇ. 100ರಷ್ಟು ಈಡೇರಿಸುತ್ತೇವೆ- ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ವಕ್ತಾರ ಹಾಗೂ ರಾಜ್ಯಸಭಾ ಸದಸ್ಯರಾದ ಸಂಜಯ್ ಸಿಂಗ್
Karnataka Election 2023 : ಪ್ರತಿಯೊಬ್ಬ ನಾಗರಿಕನಿಗಿರುವ ಕನಸು ಕಾಣುವ ಹಾಗೂ ಬೆಳೆಯುವ ಹಕ್ಕುಗಳನ್ನು ಕಾಪಾಡುವುದಾಗಿ ಇವರು ಖಚಿತ ಪಡಿಸಿದ್ದಾರೆ. ಆಮ್ ಆದ್ಮಿ ಪಾರ್ಟಿಯು ಇಂದು ದೇಶದ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಕ್ಷವಾಗಿದ್ದು, ಅನೇಕ ರಾಜ್ಯಗಳಲ್ಲಿ ಸಾಂಪ್ರದಾಯಿಕ ಪ್ರತಿಸ್ಪರ್ಧಿಗಳ ವಿರುದ್ಧ ಸ್ಪರ್ಧಿಸಲು ಮತ್ತು ಗೆಲ್ಲಲು ಸಮರ್ಥವಾಗಿದೆ ಎಂದು ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ತಿಳಿಸಿದರು.
Karnataka Legislative Assembly Election 2023: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ನಾಳೆ ಆಮ್ ಆದ್ಮಿ ಪಕ್ಷ (AAP) ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ.
ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಗ್ರಾಮದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಏರ್ಪಡಿಸಿದ್ದ "ಪೊರಕೆಯೇ ಪರಿಹಾರ" ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಗ್ರಾಮವನ್ನು ಸ್ವಚ್ಛಗೊಳಿಸಿ ಜನ ಜಾಗೃತಿ ಮೂಡಿಸುವ ಸಲುವಾಗಿ ಪೊರಕೆ ಹಿಡಿದು ಕಸ ಗುಡಿಸುವ ಸಂದರ್ಭದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಬಿ.ಕೆ ಶಿವಪ್ಪ ಮಾತನಾಡಿದರು.
ಹೊಸ ಮೇಯರ್ ಆಗಿ ಆಯ್ಕೆಯಾದ ನಂತರ ಒಬೆರಾಯ್ ಅವರ ಗೆಲುವಿಗೆ ಅಭಿನಂದನೆ ಸಲ್ಲಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಉಪ ಮನೀಷ್ ಸಿಸೋಡಿಯಾ, “ಇಂದು ಮುನ್ಸಿಪಲ್ ಕಾರ್ಪೊರೇಶನ್ನಲ್ಲಿ ದೆಹಲಿಯ ಜನರು ಗೆದ್ದಿದ್ದಾರೆ ಮತ್ತು ಗೂಂಡಾಗಿರಿಯನ್ನು ಸೋಲಿಸಿದ್ದಾರೆ” ಎಂದು ಹೇಳಿದ್ದಾರೆ.
ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಆವರಣದಲ್ಲಿ ʻಪೊರಕೆಯೇ ಪರಿಹಾರʼ ಹೆಸರಿನಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ, ಅಲ್ಲಿಂದ ಬೃಹತ್ ಮೆರವಣಿಗೆಯಲ್ಲಿ ಸಾಗಿ, ಫ್ರೀಡಂ ಪಾರ್ಕ್ನಲ್ಲಿ ಬಹಿರಂಗ ಸಭೆ ನಡೆಸಿದರು.
ಜೆಡಿಎಸ್ ಭದ್ರಕೋಟೆ ಮಂಡ್ಯಕ್ಕೆ ಲಗ್ಗೆ ಇಡಲು ಎಎಪಿ ಮುಂದಾಗಿದೆ.. ಬಂಡಾಯ ಎದ್ದಿರುವ ಜೆಡಿಎಸ್ ಮುಖಂಡ ತಗ್ಗಳ್ಳಿ ವೆಂಕಟೇಶ್ಗೆ ಗಾಳ ಹಾಕಲಾಗಿದೆ. ಶ್ರೀರಂಗಪಟ್ಟಣ ಕ್ಷೇತ್ರದ ಜೆಡಿಎಸ್ ಮುಖಂಡ ತಗ್ಗಳ್ಳಿ ವೆಂಕಟೇಶ್ ನಿವಾಸಕ್ಕೆ ಅಪ್ ರಾಜ್ಯ ನಾಯಕರು ಭೇಟಿ ಮಾತುಕತೆ ನಡೆಸಿದ್ದಾರೆ.. ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.