ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ವಿಚಾರಣೆಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರದಂದು ಸಮನ್ಸ್ ಕರೆದಿದೆ.
ಚುನಾವಣಾ ಆಯೋಗವು ಸೋಮವಾರದಂದು ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವನ್ನು (ಎಎಪಿ) ರಾಷ್ಟ್ರೀಯ ಪಕ್ಷವೆಂದು ಗುರುತಿಸಿದೆ ಮತ್ತು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ), ಶರದ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಗಳನ್ನು ರಾಷ್ಟ್ರೀಯ ಪಕ್ಷದ ಸ್ಥಾನಮಾನದಿಂದ ಹಿಂತೆಗೆದುಕೊಂಡಿದೆ.
Karnataka Assembly Election 2023: ಆಮ್ ಆದ್ಮಿ ಪಾರ್ಟಿಯು ಸುಳ್ಳು ಆಶ್ವಾಸನೆಗಳನ್ನು ನೀಡುವ ಪಕ್ಷವಲ್ಲ. ನಾವು ಆಶ್ವಾಸನೆಗಳ ಬದಲು ಗ್ಯಾರೆಂಟಿ ಕಾರ್ಡ್ ನೀಡುತ್ತೇವೆ. ಇದೊಂದು ಕರಾರುಪತ್ರವಾಗಿದ್ದು, ಇವೆಲ್ಲವನ್ನೂ ಶೇ. 100ರಷ್ಟು ಈಡೇರಿಸುತ್ತೇವೆ- ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ವಕ್ತಾರ ಹಾಗೂ ರಾಜ್ಯಸಭಾ ಸದಸ್ಯರಾದ ಸಂಜಯ್ ಸಿಂಗ್
ಈ ಬಾರಿಯ ಚುನಾವಣೆ ಬೂದಿ ಮುಚ್ಚಿದ ಕೆಂಡ.. ನಾವು ಕೂಡ ಜನರಿಗೆ ಗ್ಯಾರಂಟಿ ಕಾರ್ಡ್ ಕೊಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ವಿರುದ್ಧ ಚಂದ್ರು ವಾಗ್ದಾಳಿ ನಡೆಸಿದ್ದಾರೆ..
ರಾಹುಲ್ ಗಾಂಧಿಯನ್ನು ಅನರ್ಹತೆ ಮಾಡಿರೋ ಕ್ರಮವನ್ನು ಎಎಪಿ ಮುಖಂಡ ಮುಖ್ಯಮಂತ್ರಿ ಚಂದ್ರು ಖಂಡಿಸಿದ್ದಾರೆ.. ರಾಹುಲ್ ಗಾಂಧಿ ನೀಡಿರೋ ಹೇಳಿಕೆ ದೊಡ್ಡ ಅಪರಾಧವಲ್ಲ ಎಂದಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ..
ಚುನಾವಣೆಗೆ ಹತ್ತಾರು ಸಾವಿರ ಕೋಟಿ ಬೇಕಾಗಿದೆ.. ಹೀಗಾಗಿ ಕೊನೆಯ ಗಳಿಗೆಯಲ್ಲಿ ಟೆಂಡರ್ ಅಂತ ಮಾಡಿಬಿಟ್ಟು ಹಣ ಕಳಿಸಿ ಅಂತಾ ಬಿಜೆಪಿ ನಾಯಕರಿಗೆ ಅಮಿತ್ ಶಾ ಸೂಚನೆ ನೀಡಿದ್ದಾರಂತೆ.. ರಾಯಚೂರಿನಲ್ಲಿ ಮಾತನಾಡಿದ ಎಎಪಿ ನಾಯಕ ಮುಖ್ಯಮಂತ್ರಿ ಚಂದ್ರು ಅಮಿತ್ ಶಾ ವಿರುದ್ಧ ಈ ಆರೋಪ ಮಾಡಿದ್ದಾರೆ..
Karnataka Election 2023 : ಪ್ರತಿಯೊಬ್ಬ ನಾಗರಿಕನಿಗಿರುವ ಕನಸು ಕಾಣುವ ಹಾಗೂ ಬೆಳೆಯುವ ಹಕ್ಕುಗಳನ್ನು ಕಾಪಾಡುವುದಾಗಿ ಇವರು ಖಚಿತ ಪಡಿಸಿದ್ದಾರೆ. ಆಮ್ ಆದ್ಮಿ ಪಾರ್ಟಿಯು ಇಂದು ದೇಶದ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಕ್ಷವಾಗಿದ್ದು, ಅನೇಕ ರಾಜ್ಯಗಳಲ್ಲಿ ಸಾಂಪ್ರದಾಯಿಕ ಪ್ರತಿಸ್ಪರ್ಧಿಗಳ ವಿರುದ್ಧ ಸ್ಪರ್ಧಿಸಲು ಮತ್ತು ಗೆಲ್ಲಲು ಸಮರ್ಥವಾಗಿದೆ ಎಂದು ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ತಿಳಿಸಿದರು.
Karnataka Legislative Assembly Election 2023: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ನಾಳೆ ಆಮ್ ಆದ್ಮಿ ಪಕ್ಷ (AAP) ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ.
ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಗ್ರಾಮದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಏರ್ಪಡಿಸಿದ್ದ "ಪೊರಕೆಯೇ ಪರಿಹಾರ" ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಗ್ರಾಮವನ್ನು ಸ್ವಚ್ಛಗೊಳಿಸಿ ಜನ ಜಾಗೃತಿ ಮೂಡಿಸುವ ಸಲುವಾಗಿ ಪೊರಕೆ ಹಿಡಿದು ಕಸ ಗುಡಿಸುವ ಸಂದರ್ಭದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಬಿ.ಕೆ ಶಿವಪ್ಪ ಮಾತನಾಡಿದರು.
ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಆವರಣದಲ್ಲಿ ʻಪೊರಕೆಯೇ ಪರಿಹಾರʼ ಹೆಸರಿನಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ, ಅಲ್ಲಿಂದ ಬೃಹತ್ ಮೆರವಣಿಗೆಯಲ್ಲಿ ಸಾಗಿ, ಫ್ರೀಡಂ ಪಾರ್ಕ್ನಲ್ಲಿ ಬಹಿರಂಗ ಸಭೆ ನಡೆಸಿದರು.
ಸ್ವಚ್ಛತೆ, ಶಿಕ್ಷಣ, ಆರೋಗ್ಯ, ವಿದ್ಯುತ್ ಮುಂತಾದ ಮೂಲಭೂತ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಆಮ್ ಆದ್ಮಿ ಪಾರ್ಟಿಯೊಂದೇ ಪರಿಹಾರವಾಗಿದೆ. ಇದನ್ನು ಜನರಿಗೆ ತಿಳಿಸುವ ಉದ್ದೇಶದಿಂದ ʻಪೊರಕೆಯೇ ಪರಿಹಾರʼ ಹೆಸರಿನಲ್ಲಿ ಯಾತ್ರೆ ಆಯೋಜಿಸಲಾಗಿದೆ.
ಜೆಡಿಎಸ್ ಭದ್ರಕೋಟೆ ಮಂಡ್ಯಕ್ಕೆ ಲಗ್ಗೆ ಇಡಲು ಎಎಪಿ ಮುಂದಾಗಿದೆ.. ಬಂಡಾಯ ಎದ್ದಿರುವ ಜೆಡಿಎಸ್ ಮುಖಂಡ ತಗ್ಗಳ್ಳಿ ವೆಂಕಟೇಶ್ಗೆ ಗಾಳ ಹಾಕಲಾಗಿದೆ. ಶ್ರೀರಂಗಪಟ್ಟಣ ಕ್ಷೇತ್ರದ ಜೆಡಿಎಸ್ ಮುಖಂಡ ತಗ್ಗಳ್ಳಿ ವೆಂಕಟೇಶ್ ನಿವಾಸಕ್ಕೆ ಅಪ್ ರಾಜ್ಯ ನಾಯಕರು ಭೇಟಿ ಮಾತುಕತೆ ನಡೆಸಿದ್ದಾರೆ.. ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ.
ನಗರದ ಯೋಜನೆಯನ್ನು ಮಹಾನಗರ ಯೋಜನಾ ಸಮಿತಿಯು ರೂಪಿಸಬೇಕು ಹಾಗೂ ಮೊಬಿಲಿಟಿ ಯೋಜನೆಗಳನ್ನು ಬೆಂಗಳೂರು ಮಹಾನಗರ ರಸ್ತೆ ಸಾರಿಗೆ ಪ್ರಾಧಿಕಾರವು ಗುರುತಿಸಿ, ಯೋಜನೆ ರೂಪಿಸಬೇಕು. ಬಿಬಿಎಂಪಿ ಬಳಿ ಇಂತಹ ಮೂಲಸೌಕರ್ಯ ಯೋಜನೆಗಳನ್ನು ಸಿದ್ಧಪಡಿಸಲು ಬೇಕಾದ ಜ್ಞಾನವಾಗಲಿ ಅಥವಾ ಸಾಮರ್ಥ್ಯವಾಗಲಿ ಇಲ್ಲ ಎಂಬುದು ಈ ಹಿಂದಿನ ಯೋಜನೆಗಳಿಂದ ಸಾಬೀತಾಗಿದೆ.
ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿರವರನ್ನು ಶೀಘ್ರವೇ ಬಂಧಿಸಿ ತನಿಖೆ ನಡೆಸಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು.
ಭೂತಾನ್ನಿಂದ ಅಡಿಕೆ ಆಮದು ಖಂಡಿಸಿ ಶಿವಮೊಗ್ಗದ ಎಎಪಿ ನಾಯಕಿ ಟಿ. ನೇತ್ರಾವತಿರವರು ನಡೆಸುತ್ತಿದ್ದ ಪ್ರತಿಭಟನೆಯನ್ನು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಬಲವಂತದಿಂದ ತೆರವುಗೊಳಿಸಿದ್ದು ಖಂಡನೀಯ ಎಂದು ಪಕ್ಷದ ಮುಖಂಡ ಹಾಗೂ ಸುಪ್ರೀಂ ಕೋರ್ಟ್ ಹಿರಿಯ ವಕೀಲ ಬ್ರಿಜೇಶ್ ಕಾಳಪ್ಪ ಹೇಳಿದರು.
ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಆಮ್ ಆದ್ಮಿ ಪಾರ್ಟಿ ಬೆಂಬಲ ಸೂಚಿಸಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.