ಥೋಮರ್ ಪತ್ರ ಬರೆದ ಬಳಿಕ ಟ್ವೀಟ್ ಮಾಡಿರುವ ಮೋದಿ, 'ಕೃಷಿ ಸಚಿವ @nstomar ಜೀ ರೈತ ಸಹೋದರ ಸಹೋದರಿಯರಿಗೆ ಪತ್ರ ಬರೆದು ಒಳ್ಳೆಯ ಸಂವಾದ ನಡೆಸಲು ಪ್ರಯತ್ನಿಸುತ್ತಿದ್ದಾರೆ. ಎಲ್ಲಾ ರೈತರು ಪತ್ರವನ್ನು ಓದುವಂತೆ ವಿನಂತಿಸುತ್ತೇನೆ' ಎಂದಿದ್ದಾರೆ.
ಇಂದು ಸಿಂಗು ಗಡಿಯಲ್ಲಿ ರೈತ ಮುಖಂಡರು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ರೈತರಿಗೆ ಬೆಂಬಲ ನೀಡಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.
ಅಮಿತ್ ಶಾ ರೈತ ಸಂಘಟನೆಗಳ 13 ಪ್ರತಿನಿಧಿಗಳ ಜೊತೆ ನಡೆಸಿದ ‘ಅನೌಪಚಾರಿಕ ಮಾತುಕತೆ’ ವಿಫಲವಾಗಿರುವ ಹಿನ್ನೆಲೆಯಲ್ಲಿ ಬುಧವಾರ ಕೇಂದ್ರ ಸರ್ಕಾರ ರೈತ ಪ್ರತಿನಿಧಿಗಳೊಂದಿಗೆ ಅಧಿಕೃತವಾಗಿ ಕರೆದಿದ್ದ 6ನೇ ಸಭೆಯನ್ನು ರೈತರು ಬಹಿಷ್ಕರಿಸಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ ಕರೆ ಕೊಟ್ಟಿರುವ ‘ಭಾರತ ಬಂದ್’ಗೆ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್, ಅಕಾಲಿ ದಳ, ಡಿಎಂಕೆ, ಆರ್ ಜೆಡಿ, ಆಮ್ ಆದ್ಮಿ ಪಾರ್ಟಿ, ತೃಣಮೂಲ ಕಾಂಗ್ರೆಸ್, ಟಿಆರ್ ಎಸ್, ಬಿಎಸ್ ಪಿ, ಎಸ್ ಪಿ, ಎನ್ ಸಿಪಿ, ಶಿವಸೇನಾ ಹಾಗೂ ಎಡ ಪಕ್ಷಗಳು ಬೆಂಬಲ ಘೋಷಿಸಿವೆ.
Bharat Bandh: ನಾಳೆ ರೈತರು ಕರೆ ನೀಡಿರುವ ಭಾರತ್ ಬಂದ್ಗೆ ಹಲವು ಸಾರಿಗೆ ಸಂಸ್ಥೆಗಳು, ಬ್ಯಾಂಕಿಂಗ್ ಯೂನಿಯನ್, ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ಸಹ ಸಹಕಾರ ನೀಡಲು ಮುಂದಾಗಿವೆ.
ರೈತರು ದೆಹಲಿ ಗಡಿಯಲ್ಲಿ ಕೊರೆಯುವ ಚಳಿಯಲ್ಲಿ 12 ದಿನಗಳಿಂದ ಪ್ರತಿಭಟಿಸುತ್ತಿದ್ದರೂ, ಶೀತಗಾಳಿಗೆ ಈಗಾಗಲೇ ಪ್ರಾಣಹಾನಿ ಸಂಭವಿಸಿದ್ದರೂ ಲೆಕ್ಕಿಸದ ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಲು ಮುಂದಾಗದೆ 'ಮಾತುಕತೆ ನಡೆಸುವ' ನೆಪವನ್ನೇ ಮುಂದುವರೆಸಿದೆ.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಪಿಯೂಷ್ ಗೋಯಲ್, ಕಿರಿಯ ಕೈಗಾರಿಕಾ ಸಚಿವ ಸೋಮ್ ಪ್ರಕಾಶ್ ಹಾಗೂ ರೈತ ಸಂಘಟನೆಗಳ 35 ಮಂದಿ ಪ್ರತಿನಿಧಿಗಳ ನಡುವೆ ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಭೆಗಳಲ್ಲಿ ಮಾತುಕತೆ ಯಶಸ್ವಿಯಾಗಿರಲಿಲ್ಲ.
ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್, ಪಿಯೂಷ್ ಗೋಯಲ್, ಕಿರಿಯ ಕೈಗಾರಿಕಾ ಸಚಿವ ಸೋಮ್ ಪ್ರಕಾಶ್ ಹಾಗೂ ರೈತ ಸಂಘಟನೆಗಳ 35 ಮಂದಿ ಪ್ರತಿನಿಧಿಗಳ ನಡುವೆ ದೆಹಲಿಯ ವಿಜ್ಞಾನ ಭವನದಲ್ಲಿ ಸಭೆ ನಡೆದಿತ್ತು. ಸುಮಾರು 7 ಗಂಟೆ ಸಭೆ ನಡೆಯಿತಾದರೂ ತಾರ್ಕಿಕ ಅಂತ್ಯಕ್ಕೆ ಬರಲು ಸಾಧ್ಯವಾಗದೆ ಡಿಸೆಂಬರ್ 5ರಂದು ಮತ್ತೆ ಸಭೆ ಸೇರಿ ಸಮಾಲೋಚನೆ ನಡೆಸಲು ನಿರ್ಧರಿಸಲಾಯಿತು.
ರೈತರ ಪಾಲಿಗೆ ಮರಣಶಾಸನವಾಗಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ಹಿಂಪಡೆಯಬೇಕು. ರೈತ ಬೆಳೆಯುವ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗೊಳಿಸಬೇಕು. ರೈತರಿಗೆ ಪೂರಕವಾಗಿಲ್ಲದ ವಿದ್ಯುತ್ ಕಾಯಿದೆಯನ್ನು ಹಿಂಪಡೆಯಬೇಕು ಎಂಬ ರೈತರ ಹಕ್ಕೊತ್ತಾಯವನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳಲಿಲ್ಲ.
ರೈತರ ಬೇಡಿಕೆಗಳನ್ನು ಸರ್ಕಾರ ಸ್ವೀಕರಿಸದಿದ್ದರೆ ಡಿಸೆಂಬರ್ 8 ರಂದು ಅಖಿಲ ಭಾರತ ಮೋಟಾರು ಸಾರಿಗೆ ಕಾಂಗ್ರೆಸ್ ದೆಹಲಿ-ಎನ್ಸಿಆರ್ ಸೇರಿದಂತೆ ದೇಶಾದ್ಯಂತ ಸರಕುಗಳ ಸಾಗಣೆ ಮತ್ತು ಸರಬರಾಜನ್ನು ನಿಲ್ಲಿಸುತ್ತದೆ ಎಂದು ಸಾರಿಗೆ ಸಂಘಗಳು ಹೇಳಿವೆ.
ನಿನ್ನೆ ನಡೆದ ಸಭೆಗೆ ದೆಹಲಿ ಚಲೋದ ಏಳು ಸದಸ್ಯರ ರೈತರ ಸಮಿತಿಯ ಭಾಗವಾಗಿದ್ದ ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಹಾಜರಾಗುವ ಬಗ್ಗೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.