ದೆಹಲಿ-ಎನ್ಸಿಆರ್ನಲ್ಲಿ ನವೆಂಬರ್ 30 ರವರೆಗೆ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಎನ್ಜಿಟಿ ಆದೇಶ ಹೋರಡಿಸಿದೆ. ನ್ಯಾಯಾಧಿಕರಣವು ಗಾಳಿಯ ಗುಣಮಟ್ಟ ಉತ್ತಮವಾಗಿರುವ ರಾಜ್ಯಗಳಲ್ಲಿ ಯಾವುದೇ ನಿರ್ಬಂಧವಿಲ್ಲ ಎಂದು ಹೇಳಿದೆ.
ಪಂಜಾಬ್ ಮತ್ತು ಹರಿಯಾಣದಲ್ಲಿ ಈ ಸಮಯದಲ್ಲಿ ಬೆಳೆ ಕೂಳೆ ಸುಡುವುದರಿಂದ ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದೆ. ಇದರಿಂದಾಗಿ ವಾಯು ವಿಷಪೂರಿತವಾಗುತ್ತಿದೆ ಎಂದು ಕೇಂದ್ರ ಭೂ ವಿಜ್ಞಾನ ಸಚಿವಾಲಯ ನಡೆಸುತ್ತಿರುವ ವಾಯು ಗುಣಮಟ್ಟದ ಸೂಚ್ಯಂಕ ಮೇಲ್ವಿಚಾರಣಾ ಸಂಸ್ಥೆ ಸಫರ್ ಇಂಡಿಯಾ ಹೇಳಿದೆ.
ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಂಗಳವಾರ ವಾಯುಮಾಲಿನ್ಯ, ವಿಶೇಷವಾಗಿ ಪೈರಿನ ಕಸ ಸುಡುವಿಕೆಗೆ ಸಂಬಂಧಿಸಿದ ವಿಷಯ, ದೆಹಲಿಗೆ ಸಂಬಂಧಿಸಿದ ವಿಷಯ ಮಾತ್ರವಲ್ಲ ಮತ್ತು ಅದು ಇಡೀ ಉತ್ತರ ಭಾರತಕ್ಕೆ ಸಂಬಂಧಿಸಿದ್ದು ಎಂದು ಪ್ರತಿಪಾದಿಸಿದರು.
ಮಾರ್ಚ್ 25 ರಂದು ಲಾಕ್ಡೌನ್ ಘೋಷಣೆಯಾದ ನಂತರ ದೆಹಲಿ-ಎನ್ಸಿಆರ್ನಲ್ಲಿ ಅತ್ಯಂತ ಅಪರೂಪದ ದೃಶ್ಯವು ನೀಲಿ ಆಕಾಶವನ್ನು ತೆರವುಗೊಳಿಸಿದೆ. ಇದಕ್ಕೆ ಈಗ ಅಂಕಿ ಅಂಶಗಳು ಸಹಿತ ಇದನ್ನು ಪುಷ್ಟಿಕರಿಸುತ್ತವೆ.
ವಾಯುಮಾಲಿನ್ಯದ ಅಪಾಯಕಾರಿ ಮಟ್ಟಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಗೆ ನೀಡಿದ ಉತ್ತರದಲ್ಲಿ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಗುರುವಾರ ವಾಯುಮಾಲಿನ್ಯದ ಸಮಸ್ಯೆಯನ್ನು ನಿಭಾಯಿಸಲು ನಗರ ಅರಣ್ಯ ರಚನೆಯ ತುರ್ತು ಅಗತ್ಯವನ್ನು ಒತ್ತಿ ಹೇಳಿದರು.
ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ಕುರಿತ ನಗರಾಭಿವೃದ್ಧಿ ಸಂಸದೀಯ ಸ್ಥಾಯಿ ಸಮಿತಿಯ ನಿರ್ಣಾಯಕ ಸಭೆಗೆ ಗೈರು ಹಾಜರಾದ ನಂತರ 'ಬಿಜೆಪಿ ಸಂಸದ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕಾಣೆಯಾಗಿದ್ದಾರೆ' ಎನ್ನುವ ಪೋಸ್ಟರ್ ದೆಹಲಿಯಲ್ಲಿ ಕಾಣಿಸಿಕೊಂಡಿವೆ.
ನವದೆಹಲಿ ಮತ್ತು ಇತರ ನಗರಗಳಲ್ಲಿ ಇತ್ತೀಚಿನ ಮಾಲಿನ್ಯ ಬಿಕ್ಕಟ್ಟಿಗೆ ರೈತರು ಕಳೆಗೆ ಹಚ್ಚುವ ಬೆಂಕಿ ಎಂದು ಆರೋಪಿಸಿ ಈಗ ಪಂಜಾಬ್ ನಲ್ಲಿ 80ಕ್ಕೂ ಅಧಿಕ ರೈತರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತೀವ್ರ ವಾಯುಮಾಲಿನ್ಯವನ್ನು ಎದುರಿಸುತ್ತಿರುವ ದೆಹಲಿ-ಎನ್ಸಿಆರ್ ಪ್ರದೇಶದ ಕೋಟ್ಯಂತರ ಜನರ ಜೀವನದ ಪ್ರಶ್ನೆಯಾಗಿದೆ ಮತ್ತು ಅದನ್ನು ತಡೆಯುವಲ್ಲಿ ವಿಫಲವಾದ ಕಾರಣ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಬೇಕಾಗಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.
ಬಿಹಾರದ ಕೆಲವು ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಉನ್ನತ ಮಟ್ಟದ ಸಭೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ದೀಪಕ್ ಕುಮಾರ್ ತಿಳಿಸಿದ್ದಾರೆ. ಈ ನಿಯಮ ನವೆಂಬರ್ 5(ಮಂಗಳವಾರ)ದಿಂದ ಜಾರಿಗೆ ಬರಲಿದೆ.
ದೆಹಲಿ ಎನ್ಸಿಆರ್ನಲ್ಲಿ 17,000 ಕ್ಕೂ ಹೆಚ್ಚು ಜನರ ಮೇಲೆ ನಡೆಸಿದ ಈ ಸಮೀಕ್ಷೆಯಲ್ಲಿ, 13 ಪ್ರತಿಶತದಷ್ಟು ದೆಹಲಿ ನಿವಾಸಿಗಳು ಮಾಲಿನ್ಯ ಮಟ್ಟವನ್ನು ತಡೆದುಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ನಂಬಿದ್ದಾರೆ ಎಂದು ತಿಳಿದುಬಂದಿದೆ.
ಉತ್ತರ ಭಾರತದ ಸಿಂಧು-ಗಂಗಾ ಬಯಲುಪ್ರದೇಶದಲ್ಲಿ ವಾಸಿಸುವ ಜನರು ಗಾಳಿಯ ಗುಣಮಟ್ಟ ಕಳಪೆಯಾಗಿರುವುದರಿಂದ ಸುಮಾರು ಏಳು ವರ್ಷಗಳ ಜೀವಿತಾವಧಿಯನ್ನು ಕಳೆದುಕೊಳ್ಳುವ ನಿರೀಕ್ಷೆಯಿದೆ ಎಂದು ಗುರುವಾರ ವರದಿಯೊಂದು ತಿಳಿಸಿದೆ.
ವಾಯು ಮಾಲಿನ್ಯಕ್ಕೆ ದೀರ್ಘಕಾಲ ಒಳಪಡುವುದರಿಂದ ಪಾರ್ಶ್ವವಾಯು, ಮಧುಮೇಹ, ಹಾರ್ಟ್ ಅಟ್ಯಾಕ್, ಶ್ವಾಸಕೋಶದ ಕ್ಯಾನ್ಸರ್ ಮತ್ತು ಗಂಭೀರ ಸ್ವರೂಪದ ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಂದಾಗಿ 2017ರಲ್ಲಿ 5 ಮಿಲಿಯನ್ ಗೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎನ್ನಲಾಗಿದೆ.
ದೆಹಲಿ ಆಗಾಗ ವಾಯುಮಾಲಿನ್ಯದ ಕಾರಣದಿಂದ ಸುದ್ದಿಯಲ್ಲಿರುತ್ತದೆ.ಈಗ ಮತ್ತೆ ಅದೇ ಕಾರಣಕ್ಕಾಗಿ ಮತ್ತೊಮ್ಮೆ ಕಳಪೆ ವಾಯುಗುಣ ಮಟ್ಟದಿಂದಾಗಿ ಸುದ್ದಿಯಲ್ಲಿದೆ.ಭಾನುವಾರದಂದು ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣವು ಅಧಿಕಗೊಂಡಿದೆ ಎಂದು ತಿಳಿದುಬಂದಿದೆ. ಇನ್ನು ಕೆಲವು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎನ್ನಲಾಗಿದೆ.
ಜರ್ಮನ್ ಮೂಲದ ಕಾರು ಉತ್ಪಾದಕ ಕಂಪನಿ ವೋಕ್ಸ್ ವ್ಯಾಗನ್ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 100 ಕೋಟಿ ರೂ ದಂಡವನ್ನು ಪಾವತಿಸಲು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಆದೇಶಿಸಿದೆ. ಇಲ್ಲದೆ ಹೋದಲ್ಲಿ ಸೂಕ್ತ ಎಂಡಿ ಬಂಧಿಸಿ ಕಂಪನಿಯ ಆಸ್ತಿಯನ್ನು ವಶಪಡಿಸಿಕೊಳ್ಳುವ ಎಚ್ಚರಿಕೆಯನ್ನು ಟ್ರಿಬ್ಯೂನಲ್ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ.
ವಾಯುಮಾಲಿನ್ಯದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಿಕೊಳ್ಳಲು ವಿಟಮಿನ್ ಸಿ, ಇ, ಮತ್ತು ಒಮೆಗಾ 3, ಬೀಟಾ ಕ್ಯಾರೋಟಿನ್ ಅಂಶಗಳಿರುವ ಆಹಾರ ಸೇವಿಸುವುದು ಅಗತ್ಯ. ಇವು ಮಾಲಿನ್ಯವನ್ನು ಎದುರಿಸುವಲ್ಲಿ ಸಹಕರಿಸಿ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.