ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಆಗದೆ ಇರುವುದಕ್ಕೆ ವ್ಯಾಪಾಕ ಟೀಕೆಗಳು ವ್ಯಕ್ತವಾಗುತ್ತಿದೆ, ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ ಸಿ ಟಿ ರವಿ,ಅಧಿವೇಶನ ಕೇವಲ ಉತ್ತರ ಕರ್ನಾಟಕಕ್ಕೆ ಸೀಮಿತವಲ್ಲ.ಸಮಗ್ರ ಕರ್ನಾಟಕದ ದೃಷ್ಟಿಯಿಂದ ಅಧಿವೇಶನ ನಡೆಸಲಾಗಿದೆ.
ಗಡಿ ವಿಷಯದಲ್ಲಿ ಬಿಜೆಪಿ ಎರಡು ರೀತಿ ಮಾತನಾಡುತ್ತಿದೆ. ಮುಂಬಯಿಗೆ ಹೋದರೆ ಒಂದು ರೀತಿ, ಬೆಂಗಳೂರಿಗೆ ಬಂದರೆ ಇನ್ನೊಂದು ರೀತಿ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಕುಟುಕಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕರ್ನಾಟಕ -ಮಹಾರಾಷ್ಟ್ರ ರಾಜ್ಯ ಗಳ ಗಡಿ ವಿವಾದ ಸಭೆ ಬಳಿಕ ಸಭೆಯ ನಿರ್ಣಯ ಪ್ರಕಟಿಸಿ, ಸದ್ಯ ಸುಪ್ರೀಂ ಕೋರ್ಟಿನಲ್ಲಿ ಪ್ರಕರಣ ಇರುವ ಕಾರಣ ತೀರ್ಪು ಬರುವ ವರೆಗೆ ಯಾರು (ಉಭಯ ರಾಜ್ಯಗಳು ) ಬೆಳಗಾವಿಯನ್ನು ತಮ್ಮದು ಎಂದು ಹೇಳಬಾರದು ಎಂದು ತಿಳಿಸಿದರು.
ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳು ದಶಕಗಳಿಂದ ನಡೆಯುತ್ತಿರುವ ರಾಜ್ಯ ಗಡಿ ವಿವಾದದ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಅಂತಿಮ ನಿರ್ಣಯ ನೀಡುವವರೆಗೆ ತಮ್ಮ ಹಕ್ಕುಗಳನ್ನು ಪ್ರತಿಪಾದಿಸದಿರಲು ಒಪ್ಪಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉಭಯ ನಾಯಕರೊಂದಿಗಿನ ಸಭೆಯ ನಂತರ ಇಂದು ಹೇಳಿದ್ದಾರೆ.
ಅಮಿತ್ ಶಾ ನೇತೃತ್ವದಲ್ಲಿ ಗಡಿ ವಿವಾದ ಚರ್ಚೆ ನಡೆಯೋ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ಅಶೋಕ ಚಂದರಗಿ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರದ ಯಾವುದೇ ಕುತಂತ್ರಗಳಿಗೆ ಸಿಎಂ ಬೊಮ್ಮಾಯಿ ಬಲಿಯಾಗಬಾರದು ಎಂದು ಮನವಿ ಮಾಡಿದ್ದಾರೆ.
ಗಡಿ ಚರ್ಚೆ ಮಾಡಲು ಅಮಿತ್ ಶಾ ಆಹ್ವಾನ ನೀಡಿದ್ದಾರೆ. ಗೃಹ ಸಚಿವರು ಪ್ರಸ್ತಾಪ ಮಾಡಿದರೆ ನಾನು ಚರ್ಚಿಸುತ್ತೇನೆ. ಸುಪ್ರೀಂ ವರದಿ ಬಗ್ಗೆ ಗೃಹ ಸಚಿವರಿಗೆ ತಿಳಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
Bhupendra Patel Oath Ceremony: ಗಾಂಧಿನಗರದಲ್ಲಿ ನಡೆದ ಸಮಾರಂಭದಲ್ಲಿ ಭೂಪೇಂದ್ರ ಪಟೇಲ್ ಸತತ 2ನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿಯ ಹಲವು ಪ್ರಮುಖ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಗುಜರಾತ್ನಲ್ಲಿ 2ನೇ ಹಂತದ ಮತದಾನ ಬಿರುಸಿನಿಂದ ಸಾಗಿದೆ. 93 ವಿಧಾನಸಭಾ ಸ್ಥಾನಗಳಿಗೆ 833 ಅಭ್ಯರ್ಥಿಗಳ ಸ್ಪರ್ಧೆ ಮಾಡಿದ್ದಾರೆ. ಸ್ವಕ್ಷೇತದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ವೋಟಿಂಗ್ ಮಾಡಿದ್ದಾರೆ.
BJP : 2024ರ ಲೋಕಸಭೆ ಚುನಾವಣೆಗೆ ಇನ್ನೂ ಒಂದರಿಂದ ಒಂದೂವರೆ ವರ್ಷ ಬಾಕಿ ಇದೆ, ಆದರೆ ಭಾರತೀಯ ಜನತಾ ಪಕ್ಷ ತನ್ನ ತಯಾರಿಯನ್ನು ಆರಂಭಿಸಿದೆ. ಕಾಂಗ್ರೆಸ್ನ ಮಾಜಿ ದೊಡ್ಡ ನಾಯಕರಿಗೆ ಬಿಜೆಪಿ ಮಹತ್ವದ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದೆ.
ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ತರಲು ಬಿಜೆಪಿ ಬದ್ಧವಾಗಿದೆ ಆದರೆ ಎಲ್ಲಾ ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳು ಮತ್ತು ಚರ್ಚೆಗಳನ್ನು ಅನುಸರಿಸಿದ ನಂತರ ಮಾತ್ರವೇ ಅದನ್ನು ಕಾರ್ಯಗತಗೊಳಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.
ಭಾರತದ ತಂಡದ ಮಾಜಿ ನಾಯಕ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರು ಭಾರತದ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಇರುವ ಫೋಟೋ ಶನಿವಾರ ಅಂತರ್ಜಾಲದಲ್ಲಿ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಈಗ ನೆಟಿಜನ್ ಗಳ ಧೋನಿ ರಾಜಕೀಯಕ್ಕೆ ಧುಮುಕುತ್ತಾರೆಯೇ? ಎನ್ನುವ ಸಂದೇಹ ವ್ಯಕ್ತಪಡಿಸಿದ್ದಾರೆ.
ಮೋದಿ ಹೆಬ್ಬುಲಿ, ಅಮಿತ್ ಶಾ ಹುಲಿ, ಅವರೊಂದಿಗೆ ಹೆಜ್ಜೆ ಹಾಕೋ ಮತ್ತೊಂದು ಹುಲಿ ಪ್ರಹ್ಲಾದ್ ಜೋಶಿ. ಮನೆಗೆ ಒಬ್ಬ ಯಜಮಾನ ಇರಬೇಕು. ಪ್ರಹ್ಲಾದ್ ಜೋಶಿ ಇಂದು ಅದ್ಭುತ ಯಜಮಾನಿಕೆ ಮಾಡುತ್ತಿದ್ದಾರೆ. ಉಳಿದ ಸಂಸದರು ಅವರು ಹೇಳಿದ ಕೆಲಸ ಮಾಡ್ತಾರೆ ಎಂದು ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಹಾಡಿ ಹೊಗಳಿದ್ದಾರೆ.
ಮುಂದಿನ ಲೋಕಸಭೆ ಅಥವಾ ರಾಜ್ಯ ವಿಧಾನಸಭೆ ಚುನಾವಣೆ ಗೆಲ್ಲಲು ರಾಹುಲ್ ಗಾಂಧಿ ಅವರು ಈ ಯಾತ್ರೆಯನ್ನು ಹಮ್ಮಿಕೊಂಡಿಲ್ಲ.ಸ್ವತಂತ್ರ್ಯ ಭಾರತದ ಇತಿಹಾಸದಲ್ಲಿ ಇದೊಂದು ಐತಿಹಾಸಿಕ ಪಾದಯಾತ್ರೆ.
ಕೇಂದ್ರದ ಗೃಹ ಸಚಿವರು ದೇಶದಲ್ಲಿ ಹಲವಾರು ಭಾಷೆಗಳನ್ನು ನಾಶ ಮಾಡುವ ನಿಟ್ಟಿನಲ್ಲಿ ಆರಂಭಿಕ ಹೆಜ್ಜೆಗಳನ್ನು ಇಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಡಿ ಸರ್ಕಾರವು ರೈತರಿಗೆ ಆರ್ಥಿಕ ನೆರವು ನೀಡುತ್ತಿದೆ, ಆದರೆ ಈಗ ಸರ್ಕಾರವು ರೈತರಿಗೆ ನೇರ ಲಾಭ ನೀಡಲು ಮತ್ತೊಂದು ವಿಶೇಷ ಯೋಜನೆಯನ್ನು ಘೋಷಣೆ ಮಾಡಿದೆ.
ಆಜಾನ್ ಸಮಯದಲ್ಲಿ ಅಮಿತ್ ಶಾ ಅವರು ತಮ್ಮ ಭಾಷಣವನ್ನು ನಿಲ್ಲಿಸಿದ ವೀಡಿಯೊವನ್ನು ಟ್ವಿಟರ್ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ನೆಟಿಜನ್ಗಳಿಂದ ಸಕಾರಾತ್ಮಕ ಪ್ರತಿಕ್ರಿಯೆಗಳೂ ಬಂದಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.