ಬಿಜೆಪಿ ಅಧ್ಯಕ್ಷ ಅಮಿತ್ ಷಾ, ಜೆಡಿ (ಯು) ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಎಲ್ಜೆಪಿ ಮುಖಂಡ ರಾಮ್ ವಿಲಾಸ್ ಪಾಸ್ವಾನ್ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ಪ್ರತಿಪಕ್ಷಗಳು ಮಹಾಘಟಬಂಧನ ಹೆಸರಿನಲ್ಲಿ ಮಾಡಿಕೊಳ್ಳುತ್ತಿರುವ ಮೈತ್ರಿಕೂಟದಲ್ಲಿ ಪರಸ್ಪರ ವಿಶ್ವಾಸ, ನಂಬಿಕೆಯೇ ಇಲ್ಲ. ಈ ಮೈತ್ರಿಕೂಟ ಕೇವಲ ಭ್ರಮೆ, ಅದು ಯಾವುದೇ ಕಾರಣಕ್ಕೂ ಅಸ್ತಿತ್ವಕ್ಕೆ ಬರಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದರು.
ರಾಜಸ್ಥಾನ್ ಅಲ್ವಾರ್ನಲ್ಲಿ ಇತ್ತೀಚೆಗೆ ನಡೆಸಿದ ರ್ಯಾಲಿಯಲ್ಲಿ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಭಾಷಣದ ವೇಳೆ ಮೊಳಗಿದ ಪಾಕಿಸ್ತಾನ ಜಿಂದಾಬಾದ್ ಘೋಷಣೆಯ ವಿರುದ್ದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕಿಡಿಕಾರಿದ್ದಾರೆ.
ಕಲ್ಕತ್ತಾ ಹೈಕೋರ್ಟ್ ಗುರುವಾರದಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಥ ಯಾತ್ರೆಗೆ ನಿರಾಕರಿಸಿದೆ.ಈ ಯಾತ್ರೆ ರಾಜ್ಯದಲ್ಲಿ ಕೋಮುಗಲಭೆಗೆ ಕಾರಣವಾಗಬಹುದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಚಿತ್ತೊರ್ಘಢದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅಮಿತ್ ಷಾ, ರಾಜಸ್ಥಾನದಲ್ಲಿ ಇದುವರೆಗೂ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡದ ಕಾಂಗ್ರೆಸ್ ವಿರುದ್ಧ ತೀವ್ರ ಟೀಕಾಪ್ರಹಾರ ಮಾಡಿದರು.
ಕರ್ನಾಟಕದ ಕರಾವಳಿಯನ್ನು ಬಿಜೆಪಿ ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದೆ. ಹಾಗಾಗಿ ಬಿಜೆಪಿ ರಾಷ್ಟ್ರೀಯ ನಾಯಕರು ಆಗಾಗ ಕರಾವಳಿಗೆ ಭೇಟಿ ನೀಡುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರು ಪ್ರವೇಶಿಸುವ ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿರುವ ಅಮಿತ್ ಶಾ ಅವರ ಭಾಷಣವೇ ಈ ಹಿಂಸಾತ್ಮಕ ಪ್ರತಿಭಟನೆಯ ಹಿಂದಿನ ಕಾರಣಗಳನ್ನು ಬಹಿರಂಗಪಡಿಸಿದೆ ಎಂದು ಭಾರತೀಯ ಕಮ್ಯೂನಿಸ್ಟ್ ಪಕ್( ಮಾರ್ಕ್ಸವಾದಿ) ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿರುವ ಮನೋಹರ್ ಪರಿಕ್ಕರ್ ಆರೋಗ್ಯದ ದೃಷ್ಟಿಯಿಂದ ಗೋವಾದ ಮುಖ್ಯಮಂತ್ರಿಯನ್ನು ಬದಲಿಸುವ ಚರ್ಚೆ ನಡೆದಿತ್ತು ಆದರೆ ಈಗ ಆ ಎಲ್ಲ ವದಂತಿಗಳಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತೆರೆ ಎಳೆದಿದ್ದಾರೆ. ಪರಿಕರ್ ಅವರೇ ಗೋವಾ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಬಂಡಾಯ ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಮೇಲೆ ಟೀಕಾ ಪ್ರಹಾರ ನಡೆಸುತ್ತಾ ಇದು ಒನ್ ಮ್ಯಾನ್ ಶೋ, ಟು ಮೆನ್ ಆರ್ಮಿ ಎಂದು ವ್ಯಂಗವಾಡಿದ್ದಾರೆ. ಅಲ್ಲದೆ ಮುಂದಿನ 50 ವರ್ಷಗಳ ಕಾಲ ಸರ್ಕಾರ ನಡೆಸುತ್ತೇವೆ ಎಂದು ಹೇಳಲಿಕ್ಕೆ ಇವಿಎಂ ಕಾರಣವೇ ಎಂದು ಅವರು ಪ್ರಶ್ನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.