ಯಾರೇ ಬಂದರೂ ಸಹ ಕರ್ನಾಟಕದ ಜನತೆ ತೀರ್ಮಾನ ಮಾಡಿದ್ದಾರೆ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ಗೆ ಮತ್ತೆ ಆಶೀರ್ವಾದ ಮಾಡಬೇಕು ಅಂತಾ ರಾಜ್ಯದ ಜನತೆ ತೀರ್ಮಾನ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೋಳಿ ದೆಹಲಿಗೆ ಭೇಟಿ ನೀಡಿದ್ದು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಲಿದ್ದಾರೆ. ಸಿಡಿ ಪ್ರಕರಣ ಸಿಬಿಐಗೆ ನೀಡುವಂತೆ ಒತ್ತಾಯ ಮಾಡಲಿದ್ದಾರೆ..
ಚುನಾವಣೆ ಹೊಸ್ತಿಲಲ್ಲಿ ಜಾರಕಿಹೊಳಿ ಸಿಡಿ ಷಡ್ಯಂತ್ರದ ಗಲಾಟೆ ಈಗ ದೆಹಲಿ ಅಂಗಳಕ್ಕೆ ಶಿಫ್ಟ್ ಆಗಿದೆ. ಸಿಡಿ ಫ್ಯಾಕ್ಟರಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪಟ್ಟು ಹಿಡಿದಿರುವ ರಮೇಶ್ ಜಾರಕಿಹೊಳಿ, ವಿಡಿಯೋ, ಆಡಿಯೋ ಇರುವ ದಾಖಲೆ ಸಮೇತ ದೆಹಲಿಗೆ ಹಾರಿದ್ದಾರೆ. ಶತಾಯಗತಾಯ ಡಿಕೆಶಿಯನ್ನ ಜೈಲಿಗೆ ಕಳಿಸುತ್ತೇನೆ ಅಂತಿರುವ ಸಾಹುಕಾರ್, ಶಾ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಈ ಕುರಿತು ಒಂದು ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ.
ಮೂರು ವಿಶ್ವವಿದ್ಯಾಲಯ ಹೊಂದಿರುವ ಧಾರವಾಡದಲ್ಲಿ ಮತ್ತೊಂದು ವಿವಿ ನಿರ್ಮಾಣಕ್ಕೆ ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಂಕು ಸ್ಥಾಪನೆ ನೆರವೇರಿಸಿದರು. ರಾಜ್ಯದ ಟಾಪ್ ಮೋಸ್ಟ್ ವಿವಿ ಹೊಂದಿರುವ ವಿದ್ಯಾಕಾಶಿ ಧಾರವಾಡಕ್ಕೆ ಈಗ ಇನ್ನೊಂದು ಗರಿ ಮೂಡಿದೆ. ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಕ್ಯಾಂಪಸ್ ನಿರ್ಮಾಣಕ್ಕೆ ಭೂಮಿಪೂಜೆ ಮಾಡಲಾಯಿತು.
2023ರ ಚುನಾವಣೆಗೆ ಬೆಳಗಾವಿ ಜಿಲ್ಲೆ ಸಜ್ಜಾಗಿದೆ. ಬೆಳಗಾವಿಯ 18 ಮತ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಹೊರಟಿರುವ ಬಿಜೆಪಿ, ಚುನಾವಣೆ ಘೋಷಣೆ ಮುಂಚೆಯೆ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಆರಂಭಿಸಿದೆ. ನಿನ್ನೆ ಕಿತ್ತೂರ ಮತ ಕ್ಷೇತ್ರದ MK ಹುಬ್ಬಳ್ಳಿ ಪಟ್ಟಣದಲ್ಲಿ ಜನ ಸಂಕಲ್ಪ ಸಮಾವೇಶದಲ್ಲಿ ಅಮಿತ ಶಾ ಭರ್ಜರಿ ಪ್ರಚಾರ ನಡೆಸಿದ್ರು. ಅಲ್ಲದೇ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು
2023ರ ಚುನಾವಣೆಗೆ ಬೆಳಗಾವಿ ಜಿಲ್ಲೆ ಸಜ್ಜಾಗಿದೆ. ಬೆಳಗಾವಿಯ 18 ಮತ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಹೊರಟಿರುವ ಬಿಜೆಪಿ, ಚುನಾವಣೆ ಘೋಷಣೆ ಮುಂಚೆಯೆ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಆರಂಭಿಸಿದೆ. ನಿನ್ನೆ ಕಿತ್ತೂರ ಮತ ಕ್ಷೇತ್ರದ MK ಹುಬ್ಬಳ್ಳಿ ಪಟ್ಟಣದಲ್ಲಿ ಜನ ಸಂಕಲ್ಪ ಸಮಾವೇಶದಲ್ಲಿ ಅಮಿತ ಶಾ ಭರ್ಜರಿ ಪ್ರಚಾರ ನಡೆಸಿದ್ರು. ಅಲ್ಲದೇ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು
ಬಿ.ಎಸ್.ಯಡಿಯೂರಪ್ಪ ಹೇಳಿದ ಪ್ರತಿ ಶಬ್ದವೇ ನಮ್ಮ ಮಾತು ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ರು. ಅಮಿತ್ ಶಾ ಅವರು 15 ಕ್ಷೇತ್ರ ಗೆಲ್ಲಲು ಸಲಹೆ ಕೊಟ್ಟಿದ್ದಾರೆ. ಅಮಿತ್ ಶಾ ಸಲಹೆಯಂತೆ ನಾವು ಕೆಲಸ ಮಾಡ್ತೇವೆ ಎಂದ್ರು.
ಹುಬ್ಬಳ್ಳಿಗೆ ಬಂದಿಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ. ತಡರಾತ್ರಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಶಾ ಆಗಮನ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಶಾ ಆಗಮನ. ಅಮಿತ್ ಶಾಗೆ ಸ್ವಾಗತ ಕೋರಿದ ರಾಜ್ಯ ನಾಯಕರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನವರಿ 27ರಂದು ರಾತ್ರಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. 28ರಂದು ಬೆಳಿಗ್ಗೆ 10.30ಕ್ಕೆ ಕೆಎಲ್ಇ ಸಂಸ್ಥೆಯ ಬಿವ್ಹಿಬಿ ಇಂಜಿನಿಯರಿಂಗ್ ಕಾಲೇಜಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಧಾರವಾಡಕ್ಕೆ ತೆರಳಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.