ಒಂದು ಕಡೆ ಮಳೆ ಇಲ್ಲ, ಇನ್ನೊಂದು ಕಡೆ ಅನ್ನಭಾಗ್ಯ ಇಲ್ಲ.. 10 ಕೆಜಿ ಅಕ್ಕಿ ನೀಡ್ತೀವಿ ಎಂದು ಹೇಳಿದ್ದ ಕಾಂಗ್ರೆಸ್ ಸರ್ಕಾರ.. ಅಕ್ಕಿ ಬದಲು ಹಣ.. ಸರಿಯಾಗಿ ಅಕೌಂಟ್ಗೆ ಹಣ ಬರಲಿಲ್ಲ..
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ’ ಯೋಜನೆಯಡಿ 05 ಕೆಜಿ ಅಕ್ಕಿ ಜತೆಗೆ ಉಳಿದ 05 ಕೆಜಿ ಅಕ್ಕಿಗೆ ಪ್ರತಿ ಕೆಜಿಗೆ 34 ರೂ.ನಂತೆ ದರ ನಿಗದಿಪಡಿಸಿದಂತೆ ಪಡಿತರ ಚೀಟಿಯಲ್ಲಿರುವ ಪ್ರತಿ ಸದಸ್ಯನಿಗೆ ತಲಾ 170 ರೂ. ಹಣವನ್ನು ಡಿಬಿಟಿ ಮೂಲಕ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ಪಾವತಿಗೆ ರಾಜ್ಯ ಸರ್ಕಾರವು ಈಗಾಗಲೇ ಚಾಲನೆ ನೀಡಿದೆ.
ಅಕ್ಕಿ ಲಭ್ಯವಾಗುವವರೆಗೆ ಪ್ರತಿ ಕೆಜಿ ಅಕ್ಕಿಗೆ 34 ರೂ. ನಂತೆ 5 ಕೆಜಿ ಅಕ್ಕಿಯ ಮೊತ್ತ ರೂ.170 ನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಡಿಬಿಟಿ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದರು. ಅಕ್ಕಿ ದಾಸ್ತಾನು ದೊರೆತ ತಕ್ಷಣದಿಂದ ಹಣದ ಬದಲು ಅಕ್ಕಿಯನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಹಣ ನೀಡುವ ಬಗ್ಗೆ ವಿವರಿಸಿದ ಸಚಿವ ಮುನಿಯಪ್ಪ, ಈ ಯೋಜನೆ ಅನುಷ್ಠಾನ ಮಾಡಲು (ಪರ್ಯಾಯವಾಗಿ ಹಣ ನೀಡಲು) ಸುಮಾರು ₹700 ಕೋಟಿ ಆಗಲಿದೆ. ಇದು ಪರ್ಯಾಯ ವ್ಯವಸ್ಥೆ ಅಷ್ಟೇ, ಮುಂದೆ ಸರ್ಕಾರ ಟೆಂಡರ್ ಮೂಲಕ ಅಕ್ಕಿ ಪಡೆದು ಅನ್ನ ಭಾಗ್ಯ ಮೂಲಕ ಕಾಂಗ್ರೆಸ್ ಹೇಳಿದಂತೆ ಹೆಚ್ಚುವರಿ ಐದು ಕೆಜಿ ಅಕ್ಕಿ ನೀಡಲಾಗುವುದು ಎಂದು ಸಂಪುಟ ತೀರ್ಮಾನ ಬಗ್ಗೆ ವಿವರಿಸಿದರು.
ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಕ್ಕಿ ಅಸ್ತ್ರ ..!
ಪಡಿತರ ನೀಡಲು ನಿರಾಕರಣೆ ಮಾಡಿದನ್ನ ಖಂಡಿಸಿ ಪ್ರೊಟೆಸ್ಟ್
ಇಂದು ರಾಜ್ಯದ ಜಿಲ್ಲೆ ಜಿಲ್ಲೆಯಲ್ಲೂ ʻಕೈʼ ರೈಸ್ ರಾಜಕೀಯ
ಬಿಜೆಪಿ ನಾಯಕರ ವಿರುದ್ಧ ಹೋರಾಟಕ್ಕೆ ಮೆಗಾ ಪ್ಲ್ಯಾನ್..!
ಅಕ್ಕಿ ಅಸ್ತ್ರ ಪ್ರಯೋಗಿಸಿ ಬಿಜೆಪಿ ವಿರುದ್ಧ ಹೋರಾಟಕ್ಕೆ ಸ್ಕೆಚ್
ಈ ಮೊದಲು ಎಫ್ಸಿಐ ಅವರು ಅಕ್ಕಿ ಕೊಡುವುದಾಗಿ ಹೇಳಿದ್ದರು. ಈ ಸಂಬಂಧ ಎಫ್ಸಿಐ ಅವರು ಜೂನ್ 12 ಕ್ಕೆ ಪತ್ರ ಬರೆದಿದ್ದರು. ಎಲ್ಲವೂ ಒಪ್ಪಿಗೆ ಆದ ಮೇಲೆ ಕೇಂದ್ರ ಸರ್ಕಾರ ಎಂಟ್ರಿ ಆಗಿದ್ದಾರೆ. ಅವರು ಮಧ್ಯ ಪ್ರವೇಶ ಮಾಡಿ ಜೂನ್ 13 ಕ್ಕೆ ಪತ್ರ ಬರೆದಿದ್ದಾರೆ. ಜೂನ್ 14 ಕ್ಕೆ ಮತ್ತೆ ರಾಜ್ಯ ಸರ್ಕಾರಕ್ಕೆ ಎಫ್ಸಿಐ ಅವರು ಪತ್ರ ಬರೆದರು. ಇದು ರಾಜಕೀಯ ಅಲ್ಲವಾ ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ದ ಸಿಎಂ ಕಿಡಿ ಕಾರಿದರು.
ಸಚಿವ ವೆಂಕಟೇಶ್ ಮಾತನಾಡಿ, ಅಕ್ಕಿ ಕೊಡಲು ಮೊದಲು ಒಪ್ಪಿಗೆ ಕೊಟ್ಟಿದ್ದರು. ಬಳಿಕ, ಇದ್ದಕ್ಕಿದ್ದಂತೆ ನಿರಾಕರಿಸಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡಲು ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಸರ್ಕಾರದ ಮೇಲೆ ಸಾಕಷ್ಟು ಹೊರ ಆಗುತ್ತಿದ್ದರೂ, ರಾಜ್ಯದ ಜನಸಾಮಾನ್ಯರ ಹೊರೆ ಇಳಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Basavaraj Bommai: ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಡ ಶಾಲೆ ಕಟ್ಟಡದ ಭೂಮಿ ಪೂಜೆ ನೇರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೇಸ್ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.