PSI ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮವಾಗಿ ಆಯ್ಕೆಯಾದವರ ವಿರುದ್ಧ ಕ್ರಮ ಜರುಗಿಸಬೇಕು.. ಆದ್ರೆ ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿ ಆದೇಶ ಪ್ರತಿ ನೀಡಬೇಕು ಎಂದು ಒತ್ತಾಯ ಕೇಳಿ ಬಂದಿದೆ. ಯಾರೋ ಕೆಲವ್ರು ಮಾಡಿದ ಆಕ್ರಮದಿಂದ ಪ್ರಾಮಾಣಿಕರಿಗೆ ತೊಂದರೆ ಆಗ್ತಿದೆ ಅಂತಾ ಅಸಮಾಧಾನ ಹೊರ ಹಾಕಿದ್ದಾರೆ.
ಬೆಂಗಳೂರಿನ ಜೆಜೆ ನಗರದಲ್ಲಿ ಚಂದ್ರು ಉರ್ದು ಮಾತನಾಡು ಕೇಳಿದ್ದಾರೆ, ಆದರೆ ಅವನು ಉರ್ದು ಮಾತನಾಡದೆ ಕನ್ನಡದಲ್ಲಿ ಪ್ರತಿಕ್ರಿಯಿಸಿದ್ದಾನೆ, ಆದ್ದರಿಂದ ಅಮಾನುಷವಾಗಿ ದಲಿತ ಯುವಕನನ್ನು ಕೊಲೆ ಮಾಡಲಾಗಿದೆ ಎಂದು ಹೇಳಿಕೆ ನೀಡಿ ಗೃಹ ಸಚಿವ ಆರಗ ಜ್ಞಾನೇಂದ್ರ (Aaraga Jnanendra) ಪೇಚಿಗೆ ಸಿಲುಕಿದ್ದಾರೆ. ಆದರೆ ಇದಾದ ಸ್ವಲ್ಪ ಸಮಯದ ನಂತರ ಅವರು ತಮ್ಮ ಹೇಳಿಕೆಯನ್ನು ತಪ್ಪು ಎಂದು ಹೇಳಿ ಕ್ಷಮೆಯಾಚಿಸಿದ್ದಾರೆ.
ಬೆಂಗಳೂರಿನ ಜೆಜೆ ನಗರದಲ್ಲಿ ಪರಸ್ಪರ ಬೈಕ್ ಸವಾರರ ನಡುವೆ ವಾಗ್ವಾದ ನಡೆದು ಚಂದ್ರು ಎಂಬ ಯುವಕ ಕೊಲೆಯಾಗಿದ್ದಾನೆ.ಘಟನೆಯ ಬಗ್ಗೆ ಸತ್ಯಾಸತ್ಯತೆಯನ್ನ ಪೊಲೀಸ್ ಕಮಿಷನರ್ ಕಮಲ್ ಪಂತ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ತಪ್ಪಿತಸ್ಥರನ್ನ ಬಂಧಿಸಲಾಗಿದೆ ಎಂದು ಹೇಳಿಯಾಗಿದೆ.
ಆಜಾನ್ ವಿಚಾರ ಪ್ರತಿಕ್ರಿಯೆ ನೀಡಿದ ಅರಗ, ಒಂದು ಬಸ್ ಓಡಿಸುವುದಕ್ಕೂ ಒಂದು ಡೆಸಿಬಲ್ ಲಿಮಿಟ್ ಅಂತ ಇರುತ್ತದೆ. ಸುಪ್ರೀಂ ಕೋರ್ಟ್ ಆದೇಶ ಪ್ರಕಾರವೇ ನಡೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ.
ಯಾರು ಯಾವ ವಸ್ತ್ರ ಉಡ್ತಾರೆ ಅನ್ನೋದು ಮುಖ್ಯ ಅಲ್ಲ. ಶಾಲೆ ಒಳಗೆ ಯೂನಿಫಾರಂ ಬೇಕಾ ಬೇಡವಾ ಅಂತ ಸಿದ್ದರಾಮಯ್ಯ ಹೇಳೋದೇ ಇಲ್ಲ. ಹಿಜಾಬ್ ಬಗ್ಗೆ ಬಾಯಿ ಬಿಡಬಾರದು ಅಂತ ಡಿಕೆಶಿ ತಮ್ಮ ಶಾಸಕರಿಗೆ ಹೇಳಿದ್ರು. ಹಿಜಾಬ್ ಬಗ್ಗೆ ಬಾಯಿ ಬಿಡಬಾರದು, ತುಷ್ಟೀಕರಣ ಕಾಂಗ್ರೆಸ್ ನಿಲುವು ಆಗಿದೆ ಎಂದರು.
ಕಾನೂನು ಸುವ್ಯವಸ್ಥೆ ಹಾಗೂ ಭ್ರಷ್ಟಾಚಾರದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ವಿಧಾನಸೌಧದ ಮೂರನೆ ಮಹಡಿಯಲ್ಲಿ ಮಂತ್ರಿಯೊಬ್ಬರು ಏನು ಮಾಡುತ್ತಿದ್ದರು ಎಂಬುದು ನಿಮಗೆ ಗೊತ್ತಿಲ್ಲವೇ? ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಕೊಡಗು ಜಿಲ್ಲೆಯ ನಾಗರಹೊಳೆ ಅರಣ್ಯ ವಾಸಿಗಳಿಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಂದ, ಅರಣ್ಯ ನಿವಾಸಿಗಳಿಗೆ, ಆಗುತ್ತಿರುವ ಕಿರುಕುಳ ತಪ್ಪಿಸುವಂತೆ, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರು, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯವರಿಗೆ ನಿರ್ದೇಶನ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.