Karnataka Assembly Elections 2023: ಏಪ್ರಿಲ್ 1ರಂದು ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ಅಂದಾಜು 10 ಲಕ್ಷ ರೂ. ಮೌಲ್ಯದ ಅಕ್ಕಿ, ಬೇಳೆ, ಎಣ್ಣೆ, ಶಾವಿಗೆ, ಸಕ್ಕರೆ ಮತ್ತು ಇತರೆ ವಸ್ತುಗಳಿದ್ದ 500 ಬ್ಯಾಗ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
Karnataka Election Date 2023: ದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ‘2023ರೊಳಗೆ ಹೊಸ ಸರ್ಕಾರ ರಚನೆಯಾಗಬೇಕು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಆಯೋಗ ಸಿದ್ಧವಿದೆ' ಎಂದು ಹೇಳಿದ್ದಾರೆ.
Karnataka Assembly Elections 2023: 224 ಸದಸ್ಯ ಬಲ ಹೊಂದಿರುವ ಕರ್ನಾಟಕ ವಿಧಾನಸಭೆಯ ಅವಧಿ ಮೇ ತಿಂಗಳಲ್ಲಿ ಕೊನೆಗೊಳ್ಳಲಿದೆ. ಇದಕ್ಕೂ ಮುನ್ನವೇ ಸಾರ್ವತ್ರಿಕ ಚುನಾವಣೆ ನಡೆದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ.
Karnataka Assembly Elections 2023: ರಾಜ್ಯದಲ್ಲಿ ಒಳಮೀಸಲಾತಿ ಬೆಂಕಿ ಧಗಧಗಿಸುತ್ತಿದೆ. ಬಾಗಲಕೋಟೆಯಲ್ಲಿ ಲಂಬಾಣಿ ಸಮುದಾಯ ಸರ್ಕಾರದ ವಿರುದ್ಧ ತಿರುಗಿಬಿದ್ದಿದೆ. ತಾಂಡಾದಲ್ಲಿ ಕಟ್ಟಿದ್ದ ಬಿಜೆಪಿ ಬಾವುಟ ಕಿತ್ತು ಹಾಕಿ ಆಕ್ರೋಶ ಹೊರ ಹಾಕಿದ್ದಾರೆ.
ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಅಪಾರ ಜನ ಬೆಂಬಲ ಸಿಗುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 135-140 ಸ್ಥಾನಗಳನ್ನು ಗೆದ್ದು ನಾವೇ ಸರ್ಕಾರ ರಚನೆ ಮಾಡುತ್ತೇವೆ ಎಂದು ಬಿಎಸ್ವೈ ಹೇಳಿದರು.
ಸದ್ಯ ಕ್ರೀಡಾ ಮತ್ತು ಯುವಜನ ಸೇವೆ ಹಾಗೂ ರೇಷ್ಮೆ ಸಚಿವರಾಗಿರುವ ಡಾ.ನಾರಾಯಣ ಗೌಡ ಅವರ ಕಾರ್ಯಕ್ರಮಗಳ ಪಟ್ಟಿಯಲ್ಲಿ ಮಾರ್ಚ್ 21ರಂದು ಕ್ರೀಡಾಂಗಣ ಉದ್ಘಾಟನೆ ಕಾರ್ಯಕ್ರಮ ನಿಗದಿ ಆಗಿದೆ. ಇದಾದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಇಲ್ಲದಿದ್ದರೆ, ಚುನಾವಣೆ ಘೋಷಣೆ ಬಳಿಕ ಸಚಿವ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಹೆಚ್ಚಿನ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಸದ್ಯ ಕ್ರೀಡಾ ಮತ್ತು ಯುವಜನ ಸೇವೆ ಹಾಗೂ ರೇಷ್ಮೆ ಸಚಿವರಾಗಿರುವ ಡಾ.ನಾರಾಯಣ ಗೌಡ ಅವರ ಕಾರ್ಯಕ್ರಮಗಳ ಪಟ್ಟಿಯಲ್ಲಿ ಮಾರ್ಚ್ 21ರಂದು ಕ್ರೀಡಾಂಗಣ ಉದ್ಘಾಟನೆ ಕಾರ್ಯಕ್ರಮ ನಿಗದಿ ಆಗಿದೆ. ಇದಾದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಇಲ್ಲದಿದ್ದರೆ, ಚುನಾವಣೆ ಘೋಷಣೆ ಬಳಿಕ ಸಚಿವ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಹೆಚ್ಚಿನ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ವಿಧಾನಸಭೆ ಚುನಾವಣೆ ಗೆಲ್ಲಲು ಬಿಜೆಪಿ ರಣವ್ಯೂಹ. ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ. ಅಭಿವೃದ್ದಿ ಹೆಸರಲ್ಲಿ ಮತಬೇಟೆ ಮಾಡಲಿರುವ ನಮೋ. ಇಂದು ಬೆಂಗಳೂರು, ತುಮಕೂರಿನಲ್ಲಿ ಕಾರ್ಯಕ್ರಮ. ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಮಾಡಲಿರೋ ಮೋದಿ.
ವಿಧಾನಸಭಾ ಚುನಾವಣೆಗೆ ಇನ್ನೇನು 3 ತಿಂಗಳು ಬಾಕಿ ಇರುವಾಗಲೇ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆ ಆರಂಭಿಸಿದೆ. ಅದರ ಭಾಗವಾಗಿ ಕೊಪ್ಪಳ ಜಿಲ್ಲೆಯಲ್ಲಿ ನಿನ್ನೆ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಕಾಂಗ್ರೆಸ್ ನಾಯಕರು ನೇರವಾಗಿ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಬಳಿಕ ಬಸವೇಶ್ವರ ವೃತ್ತದಿಂದ ತಾಲೂಕ ಕ್ರೀಡಾಂಗಣದವರೆಗೂ ರೋಡ್ ಶೋ ನಡೆಸಲಾಯಿತು.
ರಾಜ್ಯದಲ್ಲಿ ಶತಾಯಗತಾಯವಾಗಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕೆಂದು ಪಣತೊಟ್ಟಿರುವ ಬಿಜೆಪಿ ನಾಯಕರು ಚುನಾವಣೆ ಮೂರ್ನಾಲ್ಕು ತಿಂಗಳು ಬಾಕಿ ಇರುವಾಗಲೇ ಈಗಿಂದಲೇ ಪ್ರಧಾನಿ ಮೋದಿ ಅವ್ರನ್ನ ರಾಜ್ಯದ ನಾನಾ ಭಾಗಗಳಿಗೆ ಕರೆ ತಂದು ಬಿಜೆಪಿ ವರ್ಚಸ್ಸು ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ.
ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ರಣಕಹಳೆ. ಇಂದಿನಿಂದ ಸಿದ್ದರಾಮಯ್ಯ, ಡಿಕೆಶಿ ಬಸ್ ಯಾತ್ರೆ. ಬೆಳಗಾವಿಯಿಂದ ಪ್ರಜಾಧ್ವನಿ ಜಂಟಿ ಯಾತ್ರೆ ಆರಂಭ. ಬಸ್ ಮೂಲಕ 10 ದಿನ, 20 ಜಿಲ್ಲೆಗಳಲ್ಲಿ ಸಂಚಾರ.
ಮುನಿಯಪ್ಪ, ರಮೇಶ್ ಕುಮಾರ್ ಎದುರೇ ಸ್ಪಷ್ಟನೆ
ಬಾದಾಮಿಗೆ ಬೈ.. ಕೋಲಾರಕ್ಕೆ ಜೈ ಎಂದ ‘ಟಗರು’
ಕ್ಷೇತ್ರ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ಸಿದ್ದರಾಮಯ್ಯ
ಬಿಜೆಪಿಯ ವರ್ತೂರು ಪ್ರಕಾಶ್ ವಿರುದ್ಧ ಸ್ಪರ್ಧೆ ಖಚಿತ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.