ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ ವಿಳಂಬವಾಗ್ತಿದೆ.. ಇಂದು ನಡೆಯಬೇಕಿದ್ದ ಸಭೆ ನಾಳೆಗೆ ಮುಂದೂಡಿಕೆ ಮಾಡಲಾಗಿದೆ. ನಾಳೆ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ 2ನೇ ಪಟ್ಟಿ ಬಗ್ಗೆ ಪರಿಶೀಲನೆ.
ಮಂಡ್ಯದ ಕೆ.ಆರ್.ಪೇಟೆ ಜೆಡಿಎಸ್ನಲ್ಲಿ ಬಂಡಾಯ ಭುಗಿಲೆದ್ದಿದ್ದು ತಾಲೂಕಿನ ರಾಜಕೀಯ ಅಖಾಡಕ್ಕೆ ಇಂದು ಎಚ್ಡಿಕೆ ಎಂಟ್ರಿಕೊಡಲಿದ್ದಾರೆ.. ಕಾರ್ಯಕರ್ತರು ಮತ್ತು ಮುಖಂಡ ಜೊತೆ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ.
ಆರ್ಥಿಕವಾಗಿ ದಿವಾಳಿಯಾಗ್ತಿರೋ ರಾಜ್ಯ ಉಳಿಸಲು ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡಲು ಕಾಂಗ್ರೆಸ್ಗೆ ಮತ ನೀಡಿ ಎಂದು ರಾಜ್ಯದ ಜನತೆಗೆ ಸಿದ್ದರಾಮಯ್ಯ ಕರೆ ನೀಡಿದ್ದಾರೆ.. ಜನಪರವಾದ ಆಡಳಿತ ನೀಡಲು ಮತ್ತು ನುಡಿದಂತೆ ನಡೆಯಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದಿದ್ದಾರೆ..
ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ. ಬಾಕಿ ಉಳಿದ 55 ಕ್ಷೇತ್ರಗಳ ಬಗ್ಗೆ ನಾಯಕರ ಸಮಾಲೋಚನೆ ನಡೆಯಲಿದೆ. ಈಗಾಗಲೇ 45 ʻಕೈʼ ಕಮಿಟಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ..
Karnataka Assembly Election: ಚುನಾವಣಾ ಕರ್ತವ್ಯದಲ್ಲಿರುವ ಎಲ್ಲ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಚುನಾವಣಾ ತರಬೇತಿ ನೀಡಲಾಗಿದೆ. ಈಗಾಗಲೇ ಚುನಾವಣೆಗೆ ಬೇಕಾದ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಕೆಲವು ಕಡೆ ಜಾಗದ ಕೊರತೆ ಇತ್ತು, ಇದನ್ನು ನಿವಾರಿಸಲಾಗಿದೆ. ಆರ್.ಓ, ಎ. ಆರ್. ಓ ಗಳು ಆಯಾ ವಿಧಾನಸಭಾ ಕ್ಷೇತ್ರದ ಎಲ್ಲ ಕೆಲಸಗಳಿಗೆ ಜವಬ್ದಾರರಾಗುತ್ತಾರೆ. ಜಿಲ್ಲಾಮಟ್ಟದಲ್ಲಿ ಮೇಲ್ಮಟ್ಟದ ಸಮಿತಿ ಇರಲಿದೆ ಎಂದು ಅವರು ತಿಳಿಸಿದರು.
Karnataka Assembly Election: ಜಿಲ್ಲೆಯಲ್ಲಿ 195 ಮಂದಿ ಸೇವಾ ಮತದಾರರು ಇದ್ದು 97 ಸೆಕ್ಟರ್ ಅಧಿಕಾರಿಗಳು, 12 ಪ್ಲೈಯಿಂಗ್ ಸ್ಕ್ವಾಡ್ ತಂಡ,16 ಜಿಲ್ಲಾ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜೊತೆಗೆ, ಮಾದರಿ ನೀತಿ ಸಂಹಿತೆ ಪಾಲನೆ ಮೇಲೆ ನಿಗಾ ಇಡುವ ಉದ್ದೇಶದಿಂದ 37 ಮಂದಿ ಇರಲಿದ್ದಾರೆ.
Karnataka Assembly Elections 2023: ಒಳಮೀಸಲಾತಿ ಹೆಚ್ಚಳ, ನೆನೆಗುದಿಗೆ ಬಿದ್ದ ಸಮಸ್ಯೆಗಳಿಗೆ ಪರಿಹಾರ, ಒಬಿಸಿ ಯಲ್ಲಿ ಬದಲಾವಣೆ ಜನಮಾನಸದಲ್ಲಿ ಪಕ್ಷ ಹಾಗೂ ಸರ್ಕಾರದ ಪರವಾಗಿ ಜನತಾ ಜನಾರ್ದನ ಇದೆ. ಈ ಬಾರಿ ನಮ್ಮ ಕೆಲಸಗಳ ಆಧಾರದ ಮೇಲೆ ಸಕಾರಾತ್ಮಕ ತೀರ್ಪನ್ನು ಕೇಳುತ್ತಿದ್ದೇವೆ. ಜನರ ಆಶೀರ್ವಾದ ನಮ್ಮ ಪರವಾಗಿದೆ - ಸಿಎಂ ಬಸವರಾಜ ಬೊಮ್ಮಾಯಿ
Karnataka Assembly Election 2023: ಆಮ್ ಆದ್ಮಿ ಪಾರ್ಟಿಯು ಸುಳ್ಳು ಆಶ್ವಾಸನೆಗಳನ್ನು ನೀಡುವ ಪಕ್ಷವಲ್ಲ. ನಾವು ಆಶ್ವಾಸನೆಗಳ ಬದಲು ಗ್ಯಾರೆಂಟಿ ಕಾರ್ಡ್ ನೀಡುತ್ತೇವೆ. ಇದೊಂದು ಕರಾರುಪತ್ರವಾಗಿದ್ದು, ಇವೆಲ್ಲವನ್ನೂ ಶೇ. 100ರಷ್ಟು ಈಡೇರಿಸುತ್ತೇವೆ- ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ವಕ್ತಾರ ಹಾಗೂ ರಾಜ್ಯಸಭಾ ಸದಸ್ಯರಾದ ಸಂಜಯ್ ಸಿಂಗ್
Karnataka Assembly Elections 2023: ರಾಜ್ಯದಲ್ಲಿ ಒಳಮೀಸಲಾತಿ ಬೆಂಕಿ ಧಗಧಗಿಸುತ್ತಿದೆ. ಬಾಗಲಕೋಟೆಯಲ್ಲಿ ಲಂಬಾಣಿ ಸಮುದಾಯ ಸರ್ಕಾರದ ವಿರುದ್ಧ ತಿರುಗಿಬಿದ್ದಿದೆ. ತಾಂಡಾದಲ್ಲಿ ಕಟ್ಟಿದ್ದ ಬಿಜೆಪಿ ಬಾವುಟ ಕಿತ್ತು ಹಾಕಿ ಆಕ್ರೋಶ ಹೊರ ಹಾಕಿದ್ದಾರೆ.
ಸಿದ್ದರಾಮಯ್ಯ ಕ್ಷೇತ್ರದ ಆಯ್ಕೆ ಸರ್ಕಸ್ ಇನ್ನೂ ಮುಗಿದಿಲ್ಲ. ಹೈಕಮಾಂಡ್ ಹೇಳಿದ ಕಡೆ ಸ್ಪರ್ಧೆ ಎಂದ ಮಾಜಿ ಸಿಎಂ ಹೇಳಿದ್ದಾರೆ. ಕಾಂಗ್ರೆಸ್ ಫಸ್ಟ್ ಲಿಸ್ಟ್ನಲ್ಲಿ ಸಿದ್ದು ಹೆಸರು ಅನೌನ್ಸ್ ಅನುಮಾನ ಎನ್ನಲಾಗ್ತಿದೆ.
ಚುನಾವಣೆ ರಣಾಂಗಣದಲ್ಲಿ ಬೊಮ್ಮಾಯಿ ಆರ್ಭಟ. ನಾನೇ ಮುಂದಿನ ಸಿಎಂ ಎಂದ ಬಸವರಾಜ ಬೊಮ್ಮಾಯಿ. ನಗುನಗುತ್ತಲೇ ಸಚಿವ ಮುರುಗೇಶ್ ನಿರಾಣಿ ಕಾಲೆಳೆದ ಸಿಎಂ. ಬೀಳಗಿ ಕ್ಷೇತ್ರದಲ್ಲಿ ನೂರಾರು ಅಭಿವೃದ್ಧಿ ಕಾರ್ಯಗಳು ಆಗಿವೆ. ಆದರೆ ಮುರುಗೇಶ್ ನಿರಾಣಿ ನನ್ನನ್ನೇ ಕರೆದುಕೊಂಡು ಹೋಗಿಲ್ಲ. ನನ್ನನ್ನು ಕರೆದುಕೊಂಡು ಹೋದರೆ ಎಲ್ಲವೂ ಗೊತ್ತಾಗುತ್ತೆ. ಚಿಂತೆ ಮಾಡಬೇಡಿ, ನಾನು ಮತ್ತೆ ಸಿಎಂ ಆಗಿ ಬೀಳಗಿಗೆ ಬರ್ತೀನಿ ಎಂದು ಬಾಗಲಕೋಟೆಯ ಮುಧೋಳದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ರು.
ವಿಧಾನಸಭಾ ಚುನಾವಣೆಗೆ ಇಂದು ಕಾಂಗ್ರೆಸ್ ಪಕ್ಷದ ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಈ ಬಗ್ಗೆ ನಿನ್ನೆ ಮಂಡ್ಯದಲ್ಲಿ ಮಾತನಾಡಿದ್ದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಭೇಟಿ ನೀಡಿ ದೆಹಲಿಗೆ ವಾಪಸ್ ಆದ ಮೇಲೆ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದರು. ಅದರಂತೆ ಇಂದು ಅಂದರೆ ಯುಗಾದಿ ದಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಡಿಕೆಶಿ ಹೇಳಿದ್ರು.
ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಚಾಮರಾಜನಗರ ಅಬಕಾರಿ ಇಲಾಖೆ ಹೈ ಅಲರ್ಟ್ ಆಗಿದ್ದು, ಮಿಂಚಿನ ಕಾರ್ಯಾಚರಣೆ ನಡೆಸುತ್ತಿದೆ. ಎಲೆಕ್ಷನ್ ಬಂತೆಂದರೆ ಎಣ್ಣೆ ಹಂಚೋದು ಮಾಮೂಲಿ. ಅಕ್ರಮ ಮದ್ಯ ಹಂಚಿಕೆ ಆಗಬಾರದೆಂದು ಈಗಿನಿಂದಲೇ ಅಬಕಾರಿ ಇಲಾಖೆ ಅಲರ್ಟ್ ಆಗಿದೆ. ಕಳೆದ ಒಂದು ತಿಂಗಳಿನಲ್ಲಿ 115 ದಾಳಿ ನಡೆಸಿ 58 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಳೆದ ಫೆ. 19ರಿಂದ ಮಾರ್ಚ್ 20ರವರೆಗೆ ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯು ಒಟ್ಟು 115 ದಾಳಿ ನಡೆಸಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ 58 ಮಂದಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ದೇಶದ ಅಭಿವೃದ್ಧಿಗೆ ಮೋದಿ, ರಾಜ್ಯಕ್ಕೆ ಸಿಎಂ ಬೊಮ್ಮಾಯಿ. ಈ ಇಬ್ಬರು ನಾಯಕರಿಗೆ ಅಭಿವೃದ್ದಿಗಾಗಿ ಕೈ ಬಲಪಡಿಸಬೇಕು ಎಂದು ಮತದಾರರ ಪ್ರಭುಗಳಲ್ಲಿ ಪರಿಪರಿಯಾಗಿ ಪ್ರಾರ್ಥಿಸಿದ ಗೋವಿಂದ ಕಾರಜೋಳ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.