ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಬೋಗಸ ಕಾರ್ಡಗಳ ಬಿಡುಗಡೆ ಸರಣಿ ಆರಂಭಿಸಿದೆ. ಈಗಾಗಲೇ ಮೂರನ್ನು ಬಿಟ್ಟಿದೆ ಈಗ ನಾಲ್ಕನೇಯ ಬೋಗಸ್ ಕಾರ್ಡ್ ಬಿಡುಗಡೆ ಮಾಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು.
ಸಿಎಂ ಬೊಮ್ಮಾಯಿ ಶಿಗ್ಗಾಂವ ಕ್ಷೇತ್ರ ಬಿಡ್ತಾರೆ ಎಂಬ ವಿಚಾರ
ಯಾವನ್ ಅವನು ಹೇಳಿದ್ದು ಎಂದ ಸಿಎಂ ಬೊಮ್ಮಾಯಿ
ಯಾವುದೇ ಕಾರಣಕ್ಕೂ ಶಿಗ್ಗಾಂವ ಕ್ಷೇತ್ರ ಬಿಡಲ್ಲ ಎಂದ CM
ಈ ಹಿಂದೆ ಎಂದು ಆಗದ ಅಭಿವೃದ್ಧಿ ಕೆಲಸಗಳು ಇಲ್ಲಿ ಆಗಿವೆ
ಕ್ಷೇತ್ರದ ಜನರ ನಿರಿಕ್ಷೆಗೆ ತಕ್ಕಂತೆ ಎಲ್ಲ ಕೆಲಸ ಮಾಡಿದ್ದೇನೆ
ಸವಣೂರಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ
Karnataka Assembly Election: ಸಚಿವ ವಿ. ಸೋಮಣ್ಣಗೆ ಚಾಮರಾಜನಗರ ಜಿಲ್ಲೆಯಿಂದ ಟಿಕೆಟ್ ಏನಾದರೂ ಕೊಟ್ಟರೇ "ಗೋ ಬ್ಯಾಕ್ ಸೋಮಣ್ಣ" ಚಳವಳಿ ನಡೆಸಲಾಗುವುದು. ಜೊತೆಗೆ ಚುನಾವಣಾ ಉಸ್ತುವಾರಿಯನ್ನೂ ನೀಡಬಾರದು ಎಂದು ಒತ್ತಾಯಿಸಿರುವುದರಿಂದ ಬಿಜೆಪಿ ಪಾಳೇಯದಲ್ಲಿ ಮತ್ತೇ ಭಿನ್ನಮತ ಸ್ಪೋಟವಾಗಿದೆ.
ಸದ್ಯ ಕ್ರೀಡಾ ಮತ್ತು ಯುವಜನ ಸೇವೆ ಹಾಗೂ ರೇಷ್ಮೆ ಸಚಿವರಾಗಿರುವ ಡಾ.ನಾರಾಯಣ ಗೌಡ ಅವರ ಕಾರ್ಯಕ್ರಮಗಳ ಪಟ್ಟಿಯಲ್ಲಿ ಮಾರ್ಚ್ 21ರಂದು ಕ್ರೀಡಾಂಗಣ ಉದ್ಘಾಟನೆ ಕಾರ್ಯಕ್ರಮ ನಿಗದಿ ಆಗಿದೆ. ಇದಾದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಇಲ್ಲದಿದ್ದರೆ, ಚುನಾವಣೆ ಘೋಷಣೆ ಬಳಿಕ ಸಚಿವ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಹೆಚ್ಚಿನ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಸದ್ಯ ಕ್ರೀಡಾ ಮತ್ತು ಯುವಜನ ಸೇವೆ ಹಾಗೂ ರೇಷ್ಮೆ ಸಚಿವರಾಗಿರುವ ಡಾ.ನಾರಾಯಣ ಗೌಡ ಅವರ ಕಾರ್ಯಕ್ರಮಗಳ ಪಟ್ಟಿಯಲ್ಲಿ ಮಾರ್ಚ್ 21ರಂದು ಕ್ರೀಡಾಂಗಣ ಉದ್ಘಾಟನೆ ಕಾರ್ಯಕ್ರಮ ನಿಗದಿ ಆಗಿದೆ. ಇದಾದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಇಲ್ಲದಿದ್ದರೆ, ಚುನಾವಣೆ ಘೋಷಣೆ ಬಳಿಕ ಸಚಿವ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಹೆಚ್ಚಿನ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಮಾಣಿಕ್ ಸಹಾ ಮತ್ತೆ ತ್ರಿಪುರಾದ ಮುಖ್ಯಮಂತ್ರಿಯಾಗಲಿದ್ದಾರೆ. ಸೋಮವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಮಾಹಿತಿಯ ಪ್ರಕಾರ ಮಾರ್ಚ್ 8ರಂದು ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಪ್ರಧಾನಿ ಮೋದಿ ಕೂಡ ಭಾಗವಹಿಸಲಿದ್ದಾರೆ.
ಕೊಳ್ಳೇಗಾಲ ಕ್ಷೇತ್ರದ ಶಾಸಕ ಮಹೇಶ್ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಬಹುತೇಕ ಪಕ್ಕಾ ಆಗಿದ್ದು ಮತ್ತೊಂದು ಕಡೆ ಕಾಂಗ್ರೆಸ್ ನಲ್ಲಿ ಮೂವರು ಮಾಜಿ ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿರುವ ಮಾಜಿ ಶಾಸಕರು ಒಂದಾದರೇ ಸ್ಪರ್ಧೆ ಬಿರುಸಾಗಲಿದೆ ಎಂಬ ಚರ್ಚೆ ಸದ್ಯ ಶುರುವಾಗಿದೆ.
ಅರಿಶಿಣದ ಬೆಲೆ ಪಾತಾಳಕ್ಕೆ ಕುಸಿತ ಕಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮುಂದಿನ ದಿನಗಳಲ್ಲಿ ಅಧಿಕಾರಿಗಳನ್ನು ಚಾಮರಾಜನಗರಕ್ಕೆ ಕರೆತಂದು ಅರಿಶಿಣ ಉತ್ಪನ್ನ ತಯಾರಿಕೆ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ಕೊಟ್ಟರು.
ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ತಮ್ಮ ಭಾಷಣದುದ್ದಕ್ಕೂ ಕೆಂಡಕಾರಿದ ಅವರು, ಹಲವು ಪ್ರಶ್ನೆಗಳನ್ನು ಕೇಳುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಕಾಂಗ್ರೆಸ್ನ ಸುಳ್ಳಿನ ಸರದಾರ ಅಂದ್ರೆ ಸಿದ್ದರಾಮಯ್ಯ ಎಂದು ಸಿದ್ದರಾಮಯ್ಯ ವಿರುದ್ಧ ಸಚಿವ ಪ್ರಭು ಚವ್ಹಾಣ್ ವಾಗ್ದಾಳಿ ನಡೆಸಿದ್ದಾರೆ.. ಸಿದ್ದರಾಮಯ್ಯಗೆ ಕಣ್ಣು ಕಾಣಲ್ಲ.. ಕಿವಿಯೂ ಕೇಳಲ್ಲ. ಯಾರೋ ಕಿವಿಯಲ್ಲಿ ಹೇಳಿದ ಮಾತು ಕೇಳಿ ಹೇಳುತ್ತಾರೆ. ನನ್ನ ಬಗ್ಗೆ 40% ಕಮಿಷನ್ ಸತ್ಯ ಬಯಲು ಮಾಡಲು ವಿಫಲರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ..
ವಿಧಾನಸಭೆ ಚುನಾವಣೆಗೆ ಬಿಜೆಪಿ ನಾಯಕರು ರಣತಂತ್ರ ಹೆಣೆದಿದ್ದಾರೆ. ಬೆಳಗ್ಗೆ 10 ಗಂಟೆಗೆ ಚುನಾವಣೆ ಪ್ರಭಾರಿಗಳ ಜೊತೆ ಸಭೆ ನಡೆಯಲಿದೆ.. ಸಂಜೆ 7 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಮೀಟಿಂಗ್ ನಡೆಯಲಿದೆ.
ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸರ್ಕಾರ ಹಲವಾರು ಯೋಜನೆಗಳ ಪೂರ್ಣಗೊಳಿಸಿ, ಲೋಕಾರ್ಪಣೆ ಮಾಡುವ ಪ್ಲಾನ್ ಮಾಡಿದೆ. ಅದೇ ರೀತಿ ಶಿವಮೊಗ್ಗದ ಹೊಸ ಏರ್ಪೋರ್ಟ್ ಕಾಮಗಾರಿ ಭರದಿಂದ ಸಾಗಿದೆ. ಇದೇ ಫೆಬ್ರವರಿ 27 ರಂದು ಖುದ್ದು ಪ್ರಧಾನಿ ಇದಕ್ಕೆ ಚಾಲನೆ ನೀಡಲಿದ್ದಾರೆ. ಈ ವಿಮಾನ ನಿಲ್ದಾಣಕ್ಕೆ ಬಿಎಸ್ವೈ ಅವರ ಹೆಸರಿಡಲು ಸರ್ಕಾರ ಪಸ್ತಾವನೆ ಸಲ್ಲಿಸಲಿದೆ ಅಂತ ಬೊಮ್ಮಾಯಿ ಹೇಳಿದ್ದಾರೆ...
ಜೆಡಿಎಸ್ ಭದ್ರಕೋಟೆ ಮಂಡ್ಯಕ್ಕೆ ಲಗ್ಗೆ ಇಡಲು ಎಎಪಿ ಮುಂದಾಗಿದೆ.. ಬಂಡಾಯ ಎದ್ದಿರುವ ಜೆಡಿಎಸ್ ಮುಖಂಡ ತಗ್ಗಳ್ಳಿ ವೆಂಕಟೇಶ್ಗೆ ಗಾಳ ಹಾಕಲಾಗಿದೆ. ಶ್ರೀರಂಗಪಟ್ಟಣ ಕ್ಷೇತ್ರದ ಜೆಡಿಎಸ್ ಮುಖಂಡ ತಗ್ಗಳ್ಳಿ ವೆಂಕಟೇಶ್ ನಿವಾಸಕ್ಕೆ ಅಪ್ ರಾಜ್ಯ ನಾಯಕರು ಭೇಟಿ ಮಾತುಕತೆ ನಡೆಸಿದ್ದಾರೆ.. ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.