ವಿಧಾನಸಭೆ ಚುನಾವಣೆ ಗೆಲ್ಲಲು ಬಿಜೆಪಿ ರಣವ್ಯೂಹ. ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ. ಅಭಿವೃದ್ದಿ ಹೆಸರಲ್ಲಿ ಮತಬೇಟೆ ಮಾಡಲಿರುವ ನಮೋ. ಇಂದು ಬೆಂಗಳೂರು, ತುಮಕೂರಿನಲ್ಲಿ ಕಾರ್ಯಕ್ರಮ. ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಮಾಡಲಿರೋ ಮೋದಿ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜ್ಯ ಬಿಜೆಪಿ ರಣಕಹಳೆ ಮೊಳಗಿಸಿದೆ. ಸಮಾವೇಶಗಳ ಮೇಲೆ ಸಮಾವೇಶ ಆಯೋಜಿಸಲು ತೀರ್ಮಾನ ಮಾಡಲಾಗಿದೆ. ಗುಜರಾತ್ ಮಾದರಿಯ ಸಮಾವೇಶ, ಯಾತ್ರೆಗೆ ಸಕಲ ಸಿದ್ಧತೆ ನಡೀತಿದೆ.
ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಭ್ರಷ್ಟಾಚಾರ ಬಡಿದಾಟ ಜೋರಾಗಿಬಿಟ್ಟಿದೆ.. ಲಂಗು-ಲಗಾಮಿಲ್ಲದೇ ಪರಸ್ಪರ ವಾಗ್ದಾಳಿಗಿಳಿದಿದ್ದಾರೆ.. ಕಾಂಗ್ರೆಸ್ ಅವಧಿಯಲ್ಲಿನ ಕೇಸ್ಗಳನ್ನ ಸಿಎಂ ಹಾಗೂ ಸಚಿವರು ರೀ ಓಪನ್ ಮಾಡ್ತಿದ್ದಾರೆ. ಸಿದ್ದರಾಮಯ್ಯನವ್ರನ್ನ ಟಾರ್ಗೆಟ್ ಮಾಡಿ, ಜೈಲಿಗೆ ತಳ್ಳೋ ಲೆಕ್ಕಾಚಾರವೂ ಹಾಕಿಕೊಂಡಂತೆ ಕಾಣುತ್ತೆ..
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಭ್ರಷ್ಟಾಚಾರ ವಿಚಾರದಲ್ಲಿ ಆರೋಪ- ಪ್ರತ್ಯಾರೋಪದ ಟಾಕ್ ಫೈಟ್ ಜೋರಾಗಿದೆ. ನಿಮ್ಮ ಕಾಲದಲ್ಲಿ ಅತೀ ಹೆಚ್ಚು ಭ್ರಷ್ಟಾಚಾರ ಆಗಿದ್ದು ಎಂದು ಬಿಜೆಪಿ ಆರೋಪ ಮಾಡುತ್ತಿದ್ರೆ, ನಿಮ್ದು 40 % ಕಮಿಷನ್ ಸರ್ಕಾರ ಎಂದು ಕಾಂಗ್ರೆಸ್ ನಿನ್ನೆ ವಿನೂತನವಾಗಿ ಪ್ರತಿಭಟನೆ ಮಾಡಿದೆ. ಬಿಜೆಪಿ-ಕಾಂಗ್ರೆಸ್ ಭ್ರಷ್ಟಾಚಾರದ ಟಾಕ್ ಫೈಟ್ ಹೇಗಿತ್ತು..? ಇಲ್ಲಿದೆ ನೋಡಿ
ವಿಧಾನಸಭಾ ಚುನಾವಣೆಗೆ ಇನ್ನೇನು 3 ತಿಂಗಳು ಬಾಕಿ ಇರುವಾಗಲೇ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆ ಆರಂಭಿಸಿದೆ. ಅದರ ಭಾಗವಾಗಿ ಕೊಪ್ಪಳ ಜಿಲ್ಲೆಯಲ್ಲಿ ನಿನ್ನೆ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಕಾಂಗ್ರೆಸ್ ನಾಯಕರು ನೇರವಾಗಿ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಬಳಿಕ ಬಸವೇಶ್ವರ ವೃತ್ತದಿಂದ ತಾಲೂಕ ಕ್ರೀಡಾಂಗಣದವರೆಗೂ ರೋಡ್ ಶೋ ನಡೆಸಲಾಯಿತು.
ರಾಜ್ಯದಲ್ಲಿ ಶತಾಯಗತಾಯವಾಗಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕೆಂದು ಪಣತೊಟ್ಟಿರುವ ಬಿಜೆಪಿ ನಾಯಕರು ಚುನಾವಣೆ ಮೂರ್ನಾಲ್ಕು ತಿಂಗಳು ಬಾಕಿ ಇರುವಾಗಲೇ ಈಗಿಂದಲೇ ಪ್ರಧಾನಿ ಮೋದಿ ಅವ್ರನ್ನ ರಾಜ್ಯದ ನಾನಾ ಭಾಗಗಳಿಗೆ ಕರೆ ತಂದು ಬಿಜೆಪಿ ವರ್ಚಸ್ಸು ಹೆಚ್ಚಿಸಿಕೊಳ್ಳಲು ಮುಂದಾಗಿದ್ದಾರೆ.
ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ರಣಕಹಳೆ. ಇಂದಿನಿಂದ ಸಿದ್ದರಾಮಯ್ಯ, ಡಿಕೆಶಿ ಬಸ್ ಯಾತ್ರೆ. ಬೆಳಗಾವಿಯಿಂದ ಪ್ರಜಾಧ್ವನಿ ಜಂಟಿ ಯಾತ್ರೆ ಆರಂಭ. ಬಸ್ ಮೂಲಕ 10 ದಿನ, 20 ಜಿಲ್ಲೆಗಳಲ್ಲಿ ಸಂಚಾರ.
ಮುನಿಯಪ್ಪ, ರಮೇಶ್ ಕುಮಾರ್ ಎದುರೇ ಸ್ಪಷ್ಟನೆ
ಬಾದಾಮಿಗೆ ಬೈ.. ಕೋಲಾರಕ್ಕೆ ಜೈ ಎಂದ ‘ಟಗರು’
ಕ್ಷೇತ್ರ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ಸಿದ್ದರಾಮಯ್ಯ
ಬಿಜೆಪಿಯ ವರ್ತೂರು ಪ್ರಕಾಶ್ ವಿರುದ್ಧ ಸ್ಪರ್ಧೆ ಖಚಿತ
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಜನವರಿ 11 ರಿಂದ ಬಸ್ ಯಾತ್ರೆ ಆರಂಭಗೊಳ್ಳಲಿದೆ. ಬೆಳಗಾವಿ ಸೇರಿ ಒಟ್ಟು 21 ಜಿಲ್ಲೆಗಳಲ್ಲಿ ಕಾಂಗ್ರೆಸ್ ಜಂಟಿ ಬಸ್ ಯಾತ್ರೆ ಸಂಚಾರ ಮಾಡಲಿದೆ. ಜಂಟಿ ಬಸ್ ಯಾತ್ರೆಯಲ್ಲಿ ಕಾಂಗ್ರೆಸ್ ನ ಹಲವು ನಾಯಕರು ಭಾಗಿಯಾಗಲಿದ್ದಾರೆ.
ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡ್ತೇವೆ!
ಜನವರಿ 9ರಿಂದ ಜಿಲ್ಲಾ ಕೇಂದ್ರಗಳಿಗೆ ಹೋಗುತ್ತೇವೆ. ಎಲ್ಲರೂ ಒಟ್ಟಾಗಿ ರಾಜ್ಯ ಪ್ರವಾಸ ಮಾಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಳಿಕ ನಾನು ಉತ್ತರ ಕರ್ನಾಟಕ ಪ್ರವಾಸ ಮಾಡ್ತೇನೆ. ಡಿಕೆಶಿ ತಂಡ ದಕ್ಷಿಣ ಕರ್ನಾಟಕ ಪ್ರವಾಸ ಮಾಡುತ್ತೆ ಅಂತಾ ಹೇಳಿದ್ದಾರೆ. tour..
Congress complaint: ಬೆಂಗಳೂರಿನ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಬುಧವಾರ ಭೇಟಿ ನೀಡಿ ಚುನಾವಣಾ ಆಯುಕ್ತರಾದ ಮನೋಜ್ ಕುಮಾರ್ ಮೀನಾ ಅವರಿಗೆ ಈ ದೂರು ನೀಡಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಕಾಂಗ್ರೆಸ್ ನಾಯಕಿ ಕುಸುಮ ಹೆಚ್, ಹನುಮಂತರಾಯಪ್ಪ, ಲಗ್ಗೆರೆ ಬ್ಲಾಕ್ ಅಧ್ಯಕ್ಷ ಅಮರನಾಥ್, ರಾಜರಾಜೇಶ್ವರಿ ನಗರ ಬ್ಲಾಕ್ ಅಧ್ಯಕ್ಷ ರಾಂಪುರ ನಾಗೇಶ್, ಯಶವಂತಪುರ ಬ್ಲಾಕ್ ಅಧ್ಯಕ್ಷ ಗೋಪಾಲ ಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಗುಬ್ಬಿಯಲ್ಲಿ ಸ್ಪರ್ಧಿಸುವಂತೆ ಹೆಚ್ಡಿಕೆಗೆ ಎಸ್.ಆರ್. ಶ್ರೀನಿವಾಸ್ ಆಹ್ವಾನ ವಿಚಾರ. ಕ್ಷೇತ್ರ ಹುಡಿಕೊಂಡು ಹೋಗೋಕೆ ನಾನೇನ್ ಟೂರಿಂಗ್ ಟಾಕೀಸಾ..? ನಾನು ಎಲ್ಲಿ ನಿಲ್ಲಬೇಕು ಅಂತಾ ಅವರ ಪರ್ಮಿಷನ್ ತಗೊಂಡು ನಿಲ್ಲಬೇಕಾ? ನಾನ್ ಎಲ್ಲಿ ನಿಲ್ಬೇಕು ಅಂತ ಜನ ತೀರ್ಮಾನಿಸ್ತಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ಗುಡುಗಿದ್ದಾರೆ.
ಇಂದು ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ್, ಗುಜರಾತ್ ಚುನಾವಣೆ ಏನಾಗುತ್ತದೆ ಎಂದು ಎಲ್ಲರೂ ಕುತೂಹಲದಿಂದ ನೋಡುತ್ತಿದ್ದಾರೆ. ಈಗಾಗಲೇ ಸಮೀಕ್ಷೆಗಳು ಬಿಜೆಪಿ ಪರವಾಗಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉತ್ತಮ ಆಡಳಿತ ಗುಜರಾತ್ ಚುನಾವಣೆ ಮೇಲೆ ಪ್ರಭಾವ ಬೀರಿದೆ. ಅದು ಕರ್ನಾಟಕದ ವಿಧಾನಸಭಾ ಚುನಾವಣೆ ಮೇಲೂ ಪ್ರಭಾವ ಬೀರಲಿದೆ ಎಂದರು.
ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೇರಲು ಮೋದಿ ರಣತಂತ್ರ ಹೆಣೆದಿದ್ದಾರೆ. ಗುಜರಾತ್ ಬಳಿಕ ಕರುನಾಡಿನತ್ತ ಮೋದಿ ಚಿತ್ತ ಹರಿಸಿದ್ದಾರೆ. ದೆಹಲಿಯಲ್ಲಿ ಇಂದಿನಿಂದ ಪದಾಧಿಕಾರಿಗಳ ಸಭೆ ನಡೆಯಲಿದೆ.
ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೋಲಾರ ಜಿಲ್ಲೆಯ ಮಾಲೂರು ಅಖಾಡ ರಂಗೇರುತ್ತಿದೆ. ಮಾಲೂರಿನಲ್ಲಿ ಮಾಜಿ ಹಾಗೂ ಹಾಲಿ ಶಾಸಕರ ನಡುವೆ ಸಮರ ಶುರುವಾಗಿದೆ.. ಸ್ಥಳೀಯ ಚುನಾವಣೆಗಳಿಗೂ ಹಾಗೂ ಹಾಲು ಉತ್ಪಾದಕರ ಚುನಾವಣೆಗೂ ಭಾರೀ ಪೈಪೋಟಿ ನಡೆದಿದೆ..
Karnataka Assembly Elections: ಕೆಪಿಸಿಸಿ ಮೂಲಗಳು ನೀಡಿರುವ ಮಾಹಿತಿ ಪ್ರಕಾರ, ಒಟ್ಟು 1311 ಮಂದಿ ಆಕಾಂಕ್ಷೆಗಳು ಟಿಕೆಟ್ ಗಾಗಿ ಅರ್ಜಿ ಪಡೆದಿದ್ದರು. ಆ ಪೈಕಿ 1230 ಅರ್ಜಿಗಳು ಸ್ವೀಕಾರವಾಗಿವೆ. ಇದರಲ್ಲಿ ಸಾಮಾನ್ಯ ವರ್ಗದ 889 ಅರ್ಜಿಗಳು, ಎಸ್ ಟಿ, ಎಸ್ ಸಿ ವರ್ಗದಿಂದ 341 ಅರ್ಜಿಗಳನ್ನು ಭರ್ತಿ ಮಾಡಿ, ಡಿಡಿ ಪಡೆದು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.