Australia vs India: ಆಸ್ಟ್ರೇಲಿಯಾ ತಮ್ಮ ತಂಡದಲ್ಲಿ ಗಾಯಗೊಂಡಿದ್ದ ಆಷ್ಟನ್ ಅಗರ್ ಬದಲಿಗೆ ಬೇರೆ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಆಸೀಸ್ ಇದೀಗ ತನ್ನ 15 ಸದಸ್ಯರ ತಂಡದಲ್ಲಿ ಮಾರ್ನಸ್ ಲ್ಯಾಬುಶೇನ್ಗೆ ಅವಕಾಶ ನೀಡಿದೆ.
WTC 2023 ರ ಫೈನಲ್ನಲ್ಲಿ ವಿರಾಟ್ ಕೊಹ್ಲಿ ಊಟ ಮಾಡುವಾಗ ಸಹ ಆಟಗಾರರೊಂದಿಗೆ ಚಾಟ್ ಮಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಅಲ್ಲದೆ, ಈ ವಿಡಿಯೋಗೆ ಟೀಕೆಗಳ ಸುರಿಮಳೆ ಬರುತ್ತಿದೆ. ಇದೀಗ ತಮ್ಮ ಇನ್ಸ್ಟಾಗ್ರಾಮನ್ನಲ್ಲಿ ಸ್ಟೇಟಸ್ನಲ್ಲಿ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ಟ್ರೋಲ್ ಮಾಡುವವರಿಗೆ ತಿರುಗೇಟು ನೀಡಿದ್ದಾರೆ ಕಿಂಗ್ ಕೊಹ್ಲಿ.
ಮುಂಬೈನ ವಾಂಖೆಡೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಗೆದ್ದು ಬೀಗಿದೆ. ಆಸ್ಟ್ರೇಲಿಯಾ ನೀಡಿದ 189 ರನ್ಗಳ ಸಾಧಾರಣ ಮೊತ್ತದ ಗುರಿಯನ್ನು ಬೆನ್ನತ್ತಿದ ಟೀಂ ಇಂಡಿಯಾ 40 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 191 ರನ್ ಬಾರಿಸಿ ಗೆದ್ದಿದೆ. ಮೊದಲ ಏಕದಿನ ಪಂದ್ಯದಲ್ಲಿ 5 ವಿಕೆಟ್ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ಭಾರತದ ಫೀಲ್ಡಿಂಗ್ ತರಬೇತುದಾರ ಆರ್.ಶ್ರೀಧರ್ ಅವರು ಭಾರತದ ನಾಯಕ ವಿರಾಟ್ ಕೊಹ್ಲಿಯಿಂದ ಸ್ವೀಕರಿಸಿದ ಅಚ್ಚರಿಯ ಮಧ್ಯರಾತ್ರಿ ಕರೆ ಹೇಗೆಲ್ಲಾ ಪಂದ್ಯದ ಕುರಿತಾಗಿ ಕಾರ್ಯಸೂಚಿಯನ್ನು ಸಿದ್ಧಪಡಿಸಲು ನೆರವಾಯಿತು ಎನ್ನುವ ವಿಚಾರದ ಕುರಿತಾಗಿ ಮಾತಾಡಿದ್ದಾರೆ.
ಭಾರತ ಕ್ರಿಕೆಟ್ ತಂಡವು ಆಸಿಸ್ ವಿರುದ್ಧ ಸಾಧಿಸಿರುವ ಐತಿಹಾಸಿಕ ಗೆಲುವಿನ ಕುರಿತಾಗಿ ಪ್ರತಿಕ್ರಿಯಿಸಿರುವ ಆಸ್ಟ್ರೇಲಿಯಾದ ಮುಖ್ಯ ತರಬೇತುದಾರ ಜಸ್ಟಿನ್ ಲ್ಯಾಂಗರ್ ಆ ದೇಶದ ತಂಡವನ್ನು ಎಂದೆಂದಿಗೂ ಲಘುವಾಗಿ ಪರಿಗಣಿಸಬೇಡಿ' ಎಂದು ಪ್ರತಿಕ್ರಿಯಿಸಿದ್ದಾರೆ.
ಭಾರತ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ವಿರುದ್ಧ 2-1 ರಿಂದ ಟೆಸ್ಟ್ ಸರಣಿ ಗೆದ್ದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಭಾರತ ತಂಡದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಕುರಿತು ಮೆಚ್ಚುಗೆಯ ಸುರಿಮಳೆಗಳೇ ಹರಿದು ಬಂದಿವೆ.
ಟೆಸ್ಟ್ ಕ್ರಿಕೆಟ್ನಲ್ಲಿ ಓಪನರ್ ರೋಹಿತ್ ಶರ್ಮಾ ಸ್ಥಿರ ಬ್ಯಾಟ್ಸ್ಮನ್ ಆಗಲು ಬಯಸಿದರೆ,ಅವರು ಆರಂಭದಲ್ಲಿಯೇ ವಿಕೆಟ್ ಒಪ್ಪಿಸಲು ಸಾಧ್ಯವಿಲ್ಲ ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಶನಿವಾರ ಹೇಳಿದ್ದಾರೆ.
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಗುರುವಾರ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ 1 ನೇ ದಿನದಂದು ರಿಶಬ್ ಪಂತ್ ಕೆಲವು ಕ್ಯಾಚ್ ಗಳನ್ನು ಡ್ರಾಪ್ ಮಾಡಿರುವುದು ಈಗ ಅವರ ವಿಕೆಟ್ ಕೀಪಿಂಗ್ ಸಾಮರ್ಥ್ಯವನ್ನು ಪ್ರಶ್ನಿಸುವಂತೆ ಮಾಡಿದೆ.
ಆಸ್ಟ್ರೇಲಿಯಾ ವಿರುದ್ಧದ ಉಳಿದ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತದ ಆರಂಭಿಕ ಮತ್ತು ಸೀಮಿತ ಓವರ್ಗಳ ಉಪನಾಯಕ ರೋಹಿತ್ ಶರ್ಮಾ ಅವರನ್ನು ಉಪನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.
ರೋಹಿತ್ ಸೇರ್ಪಡೆಯಿಂದಾಗಿ ಈಗ ಟೆಸ್ಟ್ ಸರಣಿಯಲ್ಲಿ ಭಾರತ ತಂಡಕ್ಕೆ ಮತ್ತಷ್ಟು ಗೆಲುವಿನ ಅವಕಾಶವನ್ನು ಹೆಚ್ಚಿಸಿದೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಎರಡು ವಿಕೆಟ್ ಗಳನ್ನು ಕಬಳಿಸಿ ಬೌಲಿಂಗ್ ಮೂಲಕ ಮಿಂಚಿದ ಜಸ್ಪ್ರಿತ್ ಬುಮ್ರಾ ಏಕಾಏಕಿ ಮೂರನೇ ಕ್ರಮಾಂಕದಲ್ಲಿ ರಾತ್ರಿ ಕಾವಲುಗಾರನಾಗಿ ಕಣಕ್ಕೆ ಇಳಿದಿದ್ದು, ಒಂದು ಕ್ಷಣ ಎಲ್ಲರಲ್ಲಿಯೂ ಅಚ್ಚರಿ ಮೂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.