ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು, ದಲಿತರ ಹಣವನ್ನು ಲೂಟಿ ಹೊಡೆದ ಸರಕಾರವಿದು. ನೀವು ಈ ಸರಕಾರದ ರಾಜೀನಾಮೆ ಪಡೆಯಲು ಬಂದಿದ್ದೀರಾ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರನ್ನು ಕೇಳಿದರು.
ದೇವರಾಜ ಅರಸು ಸಮಾಜದ ತಳವರ್ಗದ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಮೇಲಕ್ಕೆತ್ತುವ, ಮುಖ್ಯವಾಹಿನಿಗೆ ತರಲು ಪ್ರಯತ್ನ ಮಾಡಿದರು. ಹಾವನೂರು ಆಯೋಗವನ್ನು ರಚಿಸಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೆ ತಂದರು- ಸಿಎಂ ಸಿದ್ದರಾಮಯ್ಯ
ಮನೆಯ ಯಜಮಾನಿಯು ಕಾರ್ಯಕ್ರಮದ ದಿನದಂದು ಅವರ ಮನೆಯ ಮುಂದೆ ರಂಗೋಲಿ ಹಾಕಬೇಕು. ಮನೆಯ ಮುಂದೆ ರಂಗೋಲಿಯಲ್ಲಿ 'ನಾನು ಗೃಹಲಕ್ಷ್ಮೀ, ಮನೆಯ ಯಜಮಾನಿ' ಎಂದು ಬರೆಯುವಂತೆ ಸಚಿವ ಬಿ.ನಾಗೇಂದ್ರ ತಿಳಿಸಿದರು.
ಬಣಜಿಗ ಸಮಾಜ ಹಿಂದಿನ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ತಮ್ಮ ಸಮಾಜಕ್ಕೆ ದಕ್ಕೆಯಾದರೆ ಎಲ್ಲರೂ ಒಗ್ಗಟ್ಟಾಗಿ ಹೋರಾಡುವ ಗುಣ ಅವರಲ್ಲಿದೆ. ಬಣಜಿಗ ಸಮುದಾಯದ 2ಎ ಸಮಸ್ಯೆಯನ್ನು ಆದಷ್ಟು ಬೇಗ ಬಗೆ ಹರಿಸುತ್ತೆನೆ ಎಂದು ಸಚಿವ ಬಿ. ನಾಗೇಂದ್ರ ಹೇಳಿದರು.
ದುರಸ್ತಿಯಾಗಿರುವ ಏರ್ಕ್ರಾಫ್ಟ್ ಗಳನ್ನು ಕೂಡಲೇ ಸರಿಪಡಿಸಿ ಒಟ್ಟು 6 ಏರ್ ಕ್ರಾಫ್ಟ್ಗಳ ಹಾರಾಟಕ್ಕೆ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ಸಚಿವ ಬಿ.ನಾಗೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.