ಸಿಲಿಕಾನ್ ಸಿಟಿಯಲ್ಲಿ ಬರುಬರುತ್ತಾ ಪುಡಿರೌಡಿಗಳ ಅಟ್ಟಹಾಸ ಹೆಚ್ಚಾಗುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಎಂಬತೆ ಇವತ್ತು ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಯೊಬ್ಬ ಹಲ್ಲೆ ನಡೆಸಿ ಕೊಲೆ ಜೀವ ಬೆದರಿಕೆ ಹಾಕಿದ್ದಾನೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಳಾಗಾಳದಲ್ಲಿ ಘಟನೆ ನಡೆದಿದ್ದು, ಬೇಕರಿ ಮಾಲೀಕ ರಘುನಾಥ್ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ.
Bangalore Crime News : ಇಸ್ಲಾಂಗೆ ಮತಾಂತರವಾಗಿ ಮದುವೆಯಾಗಿದ್ದ ಹಿಂದೂ ಮಹಿಳೆಯನ್ನು ಹೆರಿಗೆಗೆ ಎಂದು ತವರು ಮನೆಗೆ ಕಳುಹಿಸಿ ಅಬ್ದುಲ್ ರಹೀಂ ಎಂಬಾತ ಎರಡನೇ ಮದುವೆಯಾಗಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಸಂತ್ರಸ್ತೆ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ನೀವು ಯಾರಾದ್ರೂ ಲೇಡಿಯನ್ನು ಪರಿಚಯ ಮಾಡ್ಕೊಂಡು ಆಕೆಯ ಜೊತೆ ಸಲುಗೆಯಿಂದ ಇದ್ದೀರಾ.. ಹಾಗಾದ್ರೆ ಸ್ವಲ್ಪ ಎಚ್ಚರದಿಂದ ಇರಿ. ಹನಿಟ್ರಾಪ್ ಮಾಡಿ ಹಣ ಕಿತ್ತು ಎಸ್ಕೇಪ್ ಆಗುವ ಚಾನ್ಸ್ ಇರುತ್ತೆ. ಹೀಗೆ ಜನರನ್ನು ಯಾಮಾರಿಸುತ್ತಿದ್ದ ಶಾರ್ಟ್ ಮೂವಿ ಮಾಡುತ್ತಿದ್ದ ಗ್ಯಾಗೊಂದು ಅಂದರ್ ಆಗಿದೆ. ಹಾಗಾದ್ರೆ ಏನಿದು ಸ್ಟೋರಿ ಅಂತೀರಾ.. ನೀವೇ ನೋಡಿ.
ಕೈ ಹಿಡಿದ ಹೆಂಡತಿಗೆ ಮೋಸ ಮಾಡಿ ಪ್ರಿಯತಮೆ ಜೊತೆ ಓಡಿಹೋಗಿದ್ದವನು ಶವವಾಗಿ ಪತ್ತೆಯಗಿದ್ದಾನೆ. ನಾಗೇಶ್ ಮೃತಪಟ್ಟವನು. ಮೃತ ನಾಗೇಶ್ 6 ವರ್ಷದ ಹಿಂದೆ ಮಧುಶ್ರಿ ಎಂಬಾಕೆಯನ್ನ ಮದುವೆಯಾಗಿದ್ದ. ಕೊಮ್ಮಘಟ್ಟದ ವೀರಭದ್ರ ನಗರದಲ್ಲಿ ವಾಸವಾಗಿದ್ದ ನಾಗೇಶ್ ಗೆ ಸಹನಾ ಎಂಬಾಕೆಯ ಪರಿಚಯವಾಗಿತ್ತು.
Karnataka Election 2023 : ರಾಜ್ಯದಲ್ಲಿ ಚುನಾವಣೆ ಹತ್ತಿರ ಬರುತ್ತಿದೆ. ಸದ್ಯ ಕೆಲ ರೌಡಿಶೀಟರ್ ಗಳು ಫುಲ್ ಆಕ್ಟಿವ್ ಆಗಿದ್ದಾರೆ. ಯಾವುದಾದರೂ ಪಕ್ಷದಿಂದ ಬಿ ಫಾರಂ ಪಡೆದು ಚುನಾವಣೆಯಲ್ಲಿ ಒಂದು ಕೈ ನೋಡೋಣ ಎಂದು ತೊಡೆತಟ್ಟಿದ್ದಾರೆ. ಕೆಲ ರೌಡಿ ಶೀಟರ್ಸ್ ಗಳು ಎಲೆಕ್ಷನ್ ಮೇಲೆ ಕಣ್ಣಿಟ್ಟು ತಮ್ಮ ತಮ್ಮ ಕ್ಷೇತ್ರಗಳಲ್ಲಿ ವರ್ಕೌಟ್ ಶುರು ಮಾಡಿದ್ದಾರೆ.
ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂಟಿ ಮಹಿಳೆ ಕೊಂದು ಪರಾರಿಯಾಗಿದ್ದ ಆರೋಪಿಯನ್ನ ಬಂಧಿಸಲಾಗಿದೆ. ಮಂಡ್ಯ ಮೂಲದ ಕೌಸರ್ ಮುಬೀನಾಳನ್ನು ಹತ್ಯೆಗೈದ ಆರೋಪದಡಿ ಆಕೆಯ ಜೊತೆ ಲಿವಿಂಗ್ ರಿಲೇಷನ್ಶಿಪನಲ್ಲಿದ್ದ ನದೀಮ್ ಪಾಷ ಎಂಬಾತನನ್ನು ಬಂಧಿಸಲಾಗಿದೆ.
ಕಳ್ಳತನವಾದ ಬೈಕ್ ಪತ್ತೆಹಚ್ಚುವಂತೆ ಬೈಕ್ ಮಾಲೀಕ ದೂರು ನೀಡಿದರೂ ಸಹ ಎಫ್ಐಆರ್ ದಾಖಲಿಸದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ. ಟ್ವಿಟರ್ ನಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಕಳುವಾದ ಬೈಕ್ ಬಗ್ಗೆ
ಕ್ಷುಲ್ಲಕ ಕಾರಣಕ್ಕೆ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಇಕೋಸ್ಪೇಸ್ ಸಿಗ್ನಲ್ ಬಳಿ ಕಾರು ಚಾಲಕ ಹಾಗೂ ಆಟೋ ಡ್ರೈವರ್ ನಡುವೆ ರಸ್ತೆಯಲ್ಲೇ ಮಾರಾಮಾರಿ ನಡೆದಿದೆ. ಇಕೋಸ್ಪೇಸ್ ಸಿಗ್ನಲ್ ಬಳಿ ತೆರಳುತ್ತಿದ್ದಾಗ ಆಟೋ ರಿಕ್ಷಾಗೆ ಕಾರು ಟಚ್ ಆಗಿದೆ ಎನ್ನಲಾಗಿದೆ. ಇಷ್ಟಕ್ಕೇ ರೊಚ್ಚಿಗೆದ್ದ ಆಟೋ ಚಾಲಕ ಪಕ್ಕದಲ್ಲಿ ತೆರಳುತ್ತಿದ್ದ ಕಾರು ಚಾಲಕನ ಮೇಲೆ ರಸ್ತೆಯಲ್ಲೇ ಹಲ್ಲೆ ನಡೆಸಿದ್ದಾನೆ.
ಯುವತಿಗೆ ಮೆಸೇಜ್ ಮಾಡುತ್ತಿದ್ದ ಎಂಬ ಕಾರಣಕ್ಕೆ ಯುವಕನನ್ನು ಅಪಹರಿಸಿ ಕೊಲೆ ಮಾಡಿದ್ದ ಘಟನೆ ಮಾಸುವ ಮುನ್ನವೇ ನಗರದಲ್ಲಿ ಅಂಥಹದ್ದೇ ಮತ್ತೊಂದು ಘಟನೆ ನಡೆದಿದೆ. ನಕಲಿ ಖಾತೆ ಸೃಷ್ಟಿಸಿ ಯುವತಿಗೆ ಮೆಸೇಜ್ ಮಾಡುತ್ತಿದ್ದ ಎಂಬ ಕಾರಣಕ್ಕೆ ಆಕೆಯ ಸಹೋದರ ಯುವಕನಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಗೋವಿಂದರಾಜನಗರದಲ್ಲಿ ನಡೆದಿದೆ. ಸಿದ್ಧಾರ್ಥ್ ಚಾಕು ಇರಿತಕ್ಕೊಳಗಾದ ಯುವಕ.
ಒಂದು ಬಾರಿ ಅನುಮಾನ ಶುರುವಾದರೆ ಅದು ಹೋಗೊದೆ ಇಲ್ಲಾ ಎಂಬುದಕ್ಕೆ ಇಲ್ಲಿ ನಡೆದ ಕೊಲೆ ಸಾಕ್ಷಿಯಾಗಿದೆ. ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಗಂಡನೇ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಡನೆ ರಾಜಧಾನಿಯಲ್ಲಿ ನಡೆದಿದೆ.
Biker dragged an old man: ಇಂದು ಬೆಳಗ್ಗೆ ಮಾಗಡಿ ರೋಡ್ ಟೋಲ್ ಗೇಟ್ ಬಳಿ ಒನ್ ವೇ ಮಾರ್ಗದಲ್ಲಿ ವೇಗವಾಗಿ ಬಂದ ಸಾಹೀಲ್ ಎಂಬಾತ ಟಾಟಾ ಸುಮೋ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಬಗ್ಗೆ ಪ್ರಶ್ನಿಸಿದ ಚಾಲಕ ಮುತ್ತಪ್ಪನೊಂದಿಗೆ ಮಾತಿನ ಚಕಮಕಿ ನಡೆಸಿ ಬೈಕ್ ಹತ್ತಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ.
Crime News: ಕೊಲೆ ಮಾಡಿ ಬೈಕ್ ನಲ್ಲೇ ಹೆಣ ಸಾಗಿಸಿದ್ದ ಖತರ್ನಾಕ್ ಆರೋಪಿಗಳನ್ನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ. ದಂಪತಿ ರೀನಾ, ಬಿಜೋಯ್ ಹಾಗೂ ಸ್ನೇಹಿತ ಗಂಗೇಶ್ ಬಂಧಿತ ಆರೋಪಿಗಳಾಗಿದ್ದು, ಕಳೆದ 3ನೇ ತಾರೀಖು ನಿಬಾಶೀಸ್ ಪಾಲ್ ನ ಕೊಲೆ ಮಾಡಿ ಆರೋಪಿಗಳು ಶವ ಬಿಸಾಕಿ ಹೋಗಿದ್ದರು.
ಸಿಲಿಕಾನ್ ಸಿಟಿಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರಾತ್ರಿ ವೇಳೆ ಮನೆಗಳ್ಳತನ, ರಾಬರಿ, ರೇಪ್ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಆದರೆ ಸಮಾಧಾನಕಾರಿ ಸಂಗತಿ ಎಂದರೆ ಸರಗಳ್ಳತನ, ಡಕಾಯಿತಿಗೆ ಸಂಚು ಪ್ರಕರಣಗಳು ಇಳಿಕೆಯಾಗಿವೆ. ಕಳೆದ 11 ತಿಂಗಳಲ್ಲಿ ಬೆಂಗಳೂರಿನಲ್ಲಿಯೇ 145 ಆತ್ಯಾಚಾರ ಪ್ರಕರಣ ದಾಖಲಾಗಿವೆ. 2021ರಲ್ಲಿ 116 ಪ್ರಕರಣಗಳು ನಡೆದಿದ್ದು, ಪರಿಚಯಸ್ಥರಿಂದಲೇ ಆತ್ಯಾಚಾರ ನಡೆದಿವೆ ಎಂದು ಪೊಲೀಸ್ ವರದಿಗಳು ಹೇಳಿವೆ.
ಈ ವರ್ಷದ ಕ್ರೈಂ ಲೋಕದಲ್ಲಿ ಸ್ಟೂಡೆಂಟ್, ಬಿಸಿನೆಸ್ ಸೇರಿ ವಿವಿಧ ವೀಸಾದಡಿ ಭಾರತಕ್ಕೆ ಬರುವ ವಿದೇಶಿಯರು ಡ್ರಗ್ಸ್ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗಿದೆ. ಜೊತೆಗೆ ಸೈಬರ್ ಕ್ರೈಂ, ಗಡುವು ಮೀರಿ ಅಕ್ರಮ ವಾಸ ಸೇರಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ. ಕಳೆದ 11 ತಿಂಗಳಲ್ಲಿ 3398 ಕೇಸ್ ಗಳಲ್ಲಿ 4480 ಆರೋಪಿಗಳನ್ನ ಬಂಧಿಸಲಾಗಿದೆ.
Bangalore Crime News : ಸ್ಥಳೀಯ ದಂಧೆಕೋರರು ನೀಡಿದ ಮಾಹಿತಿಯನ್ವಯ ಕಾರ್ಯಾಚರಣೆ ನಡೆಸಿದ ಕೋಣನಕುಂಟೆ ಠಾಣಾ ಪೊಲೀಸರ ತಂಡ ಒಡಿಶಾದ ಕಾಡು ದಾರಿಯಲ್ಲೇ ಆರೋಪಿಗಳನ್ನ ಬಂಧಿಸಿದೆ. ಜಗದೀಶ್ ಜಟ್ಟಿ ಹಾಗೂ ಮುರುಳಿ ಬೆಹ್ರಾ ಬಂಧಿತ ಆರೋಪಿಗಳು.
14 ವರ್ಷದ ವಿಕಲಚೇತನ ಮಗಳನ್ನ ಹೆತ್ತ ತಾಯಿಯೇ ಕೊಂದು ತಾನು ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಾಂಕಾ ತಾಯಿಯಿಂದ ಹತ್ಯೆಯಾದ ಮಗಳಾಗಿದ್ದಾಳೆ. ಮಗಳನ್ನು ಕೊಂದು ತಾಯಿ ಸುಮಾ ಸದ್ಯ ಜೀವನ್ಮರಣದ ನಡುವೆ ಹೋರಾಡುತ್ತಿದ್ದಾಳೆ.
ಜವರಾಯ ಯಾರ ಪಾಲಿಗೆ ಯಾವ ರೀತಿ ವಕ್ಕರಿಸುತ್ತಾನೋ ಗೊತ್ತಿಲ್ಲ. ಜವರಾಯನ ಅಟ್ಟಹಾಸಕ್ಕೆ 15 ದಿನದ ಹಸುಗೂಸು ಅನಾಥವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ದೇವರ ಜೀವನಹಳ್ಳಿಯಲ್ಲಿ ನಡೆದಿದ್ದು, ಬಾವಿಯ ಜಾಲರ ಸರಿ ನೀರಿಗೆ ಬಿದ್ದು ದುರಂತ ನಡೆದಿದೆ.
ಸಿಗರೇಟ್ ಹಣ ಕೇಳಿದಕ್ಕೆ ಅಂಗಡಿ ಹುಡುಗರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ 1.90 ಲಕ್ಷ ರೂ. ಎಗರಿಸಿ ಪ್ರಾಣಬೆದರಿಕೆ ಹಾಕಿದ್ದ ಸಂಬಂಧ ಮೂವರು ಆರೋಪಿಗಳನ್ನು ಎಚ್ ಎಎಲ್ ಪೊಲೀಸರು ಬಂಧಿಸಿದ್ದಾರೆ. ಡೆಲಿವರಿ ಬಾಯ್ ಕಾರ್ತಿಕ್(20), ಅಲ್ಯೂಮಿನಿಯಂ ವರ್ಕ್ ಮಾಡುವ ಸಲ್ಮಾನ್(20) ಖಾಸಗಿ ಹೊಟೇಲ್ ಮ್ಯಾನೇಜರ್ ಕಾರ್ತಿಕ್(23) ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ವೈಟ್ಫೀಲ್ಡ್ ಡಿಸಿಪಿ ಗಿರೀಶ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು : ರಾತ್ರೋ ರಾತ್ರಿ ದೇವಸ್ಥಾನಕ್ಕೆ ನುಗ್ಗಿ ದೇವರ ಮೇಲಿದ್ದ ಬೆಳ್ಳಿ ಆಭರಣಗಳನ್ನು ಖತರ್ನಾಕ್ ಖದೀಮನೊಬ್ಬ ಕಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸತ್ಯ ಗಣಪತಿ ದೇವಸ್ಥಾನದಲ್ಲಿ ಕಳೆದ ತಿಂಗಳು 24ರಂದು ಅಪರಿಚಿತ ತನ್ನ ಕೈಚಳಕ ತೋರಿ ಪರಾರಿಯಾಗಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.