ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾಜರಾಜೇಶ್ವರಿ ನಗರ ವಲಯದ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಇಂದು ಮಾಗಡಿ ರಸ್ತೆಯಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅಧಿಕಾರಿಗಳಿಗೆ ರಸ್ತೆ ಡಾಂಬರೀಕರಣ, ಚರಂಡಿ ನೀರು ನಿರ್ವಹಣೆ, ಪಾದಾಚಾರಿ ಮಾರ್ಗ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.
ದಿನದಿಂದ ದಿನಕ್ಕೆ ಸೈಬರ್ ಚೋರರ ಹಾವಳಿ ಜೋರಾಗುತ್ತಿದೆ. ಹೊಸ ಹೊಸ ತಂತ್ರಗಳನ್ನು ಬಳಸಿ ಅಮಾಯಕರನ್ನು ವಂಚಿಸುತ್ತಿದ್ದಾರೆ. ಇನ್ಮುಂದೆ ನೀವೇನಾದ್ರೂ ಪರಿಶೀಲಿಸಿ ಕಳುಹಿಸಿರುವ ಕೊರಿಯರ್ ಬಗ್ಗೆ ಆಕ್ಷೇಪಣೆ ಹೇಳಿಕೊಂಡು ಯಾರಾದರೂ ಕರೆ ಮಾಡಿದರೆ, ನಂಬುವ ಮುನ್ನ ಎಚ್ಚರವಿರಲಿ. ವಿದೇಶಕ್ಕೆ ಕಳುಹಿಸಿದ್ದ ಕೊರಿಯರ್ ನಲ್ಲಿ ಮಾದಕ ಪದಾರ್ಥ ಪತ್ತೆಯಾಗಿದೆ ಎಂದು ಬೆದರಿಸುವ ಸೈಬರ್ ವಂಚಕರು ಮುಂಬೈ ಪೊಲೀಸರ ಸೋಗಿನಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ.
ಕಾಲೇಜಿನ ಮಹಿಳಾ ಶೌಚಾಲಯದ ಒಳನುಗ್ಗಿದ ಕಿಡಿಗೇಡಿಯೊಬ್ಬ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರಿಶಿಷ್ಟರ ಒಳಮೀಸಲಾತಿ ಕುರಿತು ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ನೀಡಿರುವ ವರದಿ ಅವಾಸ್ತವಿಕ, ಅವೈಜ್ಞಾನಿಕ, ಅಂವಿಧಾನಿಕವಾಗಿದ್ದು, ಈ ವರದಿಯನ್ನು ತಿರಸ್ಕರಿಸುವಂತೆ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಆಗ್ರಹಿಸಿದೆ.
ಸೋಷಿಯಲ್ ಮೀಡಿಯಾದಲ್ಲಿ ಪರಿಚಯವಾದವರನ್ನ ನಂಬಿ ಭೇಟಿಗೆ ಆಹ್ವಾನಿಸುವ ಮುನ್ನ ಸ್ವಲ್ಪ ಎಚ್ಚರವಾಗಿದ್ದರೆ ಒಳಿತು. ಆ್ಯಪ್ ಮೂಲಕ ವ್ಯಕ್ತಿಗೆ ಗಾಳ ಹಾಕಿ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಸೋಲದೇವನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸುನಿಲ್ ಹಾಗೂ ಲಕ್ಷ್ಮಿಪ್ರಿಯ ಬಂಧಿತ ಆರೋಪಿಗಳು. ಮೋಸ ಹೋದ 26 ವರ್ಷದ ವ್ಯಕ್ತಿಯೊಬ್ಬ ನೀಡಿದ ದೂರಿನನ್ವಯ ಆರೋಪಿಗಳನ್ನ ಬಂಧಿಸಲಾಗಿದೆ.
ಹೊಸ ವರ್ಷದ ಸಂಭ್ರಮಾಚರಣೆ ನೆಪದಲ್ಲಿ ಕುಡಿದು ವಾಹನ ಚಲಾಯಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಟ್ರಾಫಿಕ್ ಸ್ಪಷಲ್ ಕಮಿಷನರ್ ಡಾ. ಎಂ.ಎ ಸಲೀಂ ಎಚ್ಚರಿಕೆ ನೀಡಿದ್ದಾರೆ. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮತನಾಡಿದ ಅವರು, ನ್ಯೂ ಇಯರ್ ಸಲೆಬ್ರೇಷನ್ ಮಾಡಿ ಜನರು ಸೇಫ್ ಆಗಿ ಮನೆಗೆ ತೆರಳಬೇಕು.
ಬೈಕ್ ʻಶೋಕಿವಾಲʼರಿಗೆ ಪೊಲೀಸರು ಶಾಕ್ ನೀಡಿದ್ದಾರೆ. ಕರ್ಕಶ ಹಾರ್ನ್, ಸೈಲೆನ್ಸರ್ ನಾಶ ಮಾಡಿದ್ದಾರೆ. ಈ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಮಾಡ್ತಿದ್ದ ಬೈಕ್ ಸವಾರರಿಗೆ ಬಿಸಿ ಮುಟ್ಟಿಸಿದ್ದಾರೆ.
14 ವರ್ಷದ ವಿಕಲಚೇತನ ಮಗಳನ್ನ ಹೆತ್ತ ತಾಯಿಯೇ ಕೊಂದು ತಾನು ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಾಂಕಾ ತಾಯಿಯಿಂದ ಹತ್ಯೆಯಾದ ಮಗಳಾಗಿದ್ದಾಳೆ. ಮಗಳನ್ನು ಕೊಂದು ತಾಯಿ ಸುಮಾ ಸದ್ಯ ಜೀವನ್ಮರಣದ ನಡುವೆ ಹೋರಾಡುತ್ತಿದ್ದಾಳೆ.
ಸಿಗರೇಟ್ ಹಣ ಕೇಳಿದಕ್ಕೆ ಅಂಗಡಿ ಹುಡುಗರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ 1.90 ಲಕ್ಷ ರೂ. ಎಗರಿಸಿ ಪ್ರಾಣಬೆದರಿಕೆ ಹಾಕಿದ್ದ ಸಂಬಂಧ ಮೂವರು ಆರೋಪಿಗಳನ್ನು ಎಚ್ ಎಎಲ್ ಪೊಲೀಸರು ಬಂಧಿಸಿದ್ದಾರೆ. ಡೆಲಿವರಿ ಬಾಯ್ ಕಾರ್ತಿಕ್(20), ಅಲ್ಯೂಮಿನಿಯಂ ವರ್ಕ್ ಮಾಡುವ ಸಲ್ಮಾನ್(20) ಖಾಸಗಿ ಹೊಟೇಲ್ ಮ್ಯಾನೇಜರ್ ಕಾರ್ತಿಕ್(23) ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ವೈಟ್ಫೀಲ್ಡ್ ಡಿಸಿಪಿ ಗಿರೀಶ್ ಮಾಹಿತಿ ನೀಡಿದ್ದಾರೆ.
ಗೂಡ್ಸ್ ವಾಹನಗಳನ್ನ ಬೆಳಗಿನ ಅವಧಿಯಲ್ಲಿ ಸಂಚಾರ ನಿಷೇಧ ಹಿನ್ನೆಲೆಯಲ್ಲಿ ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್ ಕಡಿಮೆಯಾಗಿದ್ದು ಈ ಹಿಂದೆ 25 ನಿಮಿಷಗಳ ಪ್ರಯಾಣವನ್ನ ಏಳೆಂಟು ನಿಮಿಷಗಳಿಗೆ ಇಳಿಸಲಾಗಿದೆ ಎಂದು ಸಂಚಾರಿ ವಿಭಾಗದ ವಿಶೇಷ ಆಯುಕ್ತ ಡಾ.ಎಂ.ಸಲೀಂ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.