ಕಳೆದ 5 ವರ್ಷಗಳಿಂದ ನೆನೆಗುದಿಗೆ ಬಿದ್ದಿದ ಫ್ಲೈ ಓವರ್ ಅಗಸ್ಟ್ 15 ರಂದು ಒನ್ ಸೈಡ್ ಓಪನ್ ಮಾಡಲಾಗಿದೆ. ಬಾಕಿಉಳಿದಿದ್ದ ಒಂದು ಪಥವೂ ಈ ತಿಂಗಳ ಅಂತ್ಯದೊಳಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪಾಲಿಕೆ ತಿಳಿಸಿದೆ.
ಈ ನಡುವೆ ಖಾದಿ ವಸ್ತ್ರದ ತ್ರಿವರ್ಣ ಧ್ವಜಕ್ಕೂ ಉತ್ತಮ ಬೇಡಿಕೆ ಇದೆ. ಈ ವರ್ಷ ಮನೆ ಮನೆ ತ್ರಿವರ್ಣ ಧ್ವಜದ ಅಭಿಯಾನದ ಹಿನ್ನಲೆ ಪ್ರತೀ ವರ್ಷಕ್ಕಿಂತ ಈ ಬಾರಿ ಮೂರು ಪಟ್ಟು ಹೆಚ್ಚು ವ್ಯಾಪಾರ ನಡೆದಿದೆ. ಈ ವರ್ಷ 34 ಲಕ್ಷ ವ್ಯಾಪಾರ ಆಗಷ್ಟ್ 12 ರವರೆಗೆ ನಡೆದಿದೆ ಎಂದು ತಿಳಿಸಿದ್ದಾರೆ.
60 ವರ್ಷದ ಮೇಲಿರುವವರು ಅತೀ ಬೇಗ ಮೂರನೇ ಡೋಸ್ ಪಡೆಯಬೇಕು. ಮಾಸ್ಕ್ ಕಡ್ಡಾಯ ಮಾಡಿಕೊಳ್ಳಿ. ಕೋವಿಡ್ ಅಂದರೆ ಭಯ ಹೋಗಿದೆ. ಶೀತ ಕೆಮ್ಮು, ಮೈಕೈನೋವು ಇರುತ್ತೇ ಒಂದು ವಾರದ ನಂತ್ರ ಹೋಗುತ್ತೆ ಅಂತ ಅಸಡೆ ಇದೆ. ಲಸಿಕೆ ಲಭ್ಯ ಇದ್ರೂ ತೆಗೆದುಕೊಳ್ಳದೇ ಇರುವುದು ಮಹಾ ಅಪರಾಧವಾಗುತ್ತದೆ ಎಂದು ಮನವಿ ಮಾಡಿದ್ದಾರೆ.
ಜೈಲಲ್ಲಿ ಮುದ್ದೆ ಮುರಿದು ಬಂದ್ರೂ ಬುದ್ದಿ ಕಲಿಯದ ಖತರ್ನಾಕ್ ಖದೀಮ ಈಗ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ. ಯಾಸೀನ್ ಖಾನ್ ಆಲಿಯಾಸ್ ಚೋರ್ ಇಮ್ರಾನ್ ಬಂಧಿತ ಆರೋಪಿ. ಈತ ನಗರದಲ್ಲಿ ನಿರಂತರವಾಗಿ ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿದ್ದ.
ಬೆಂಗಳೂರಿನ ಮಹದೇವಪುರದಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ರಾತ್ರಿಯಿಡೀ ಎಡಬಿಡದೆ ಸುರಿದ ಭಾರೀ ಮಳೆಯಿಂದಾಗಿ ಎರಡು ಅಡಿಗಿಂತ ಅಧಿಕ ನೀರು ನಿಂತಿತ್ತು, ಮಳೆಯಿಂದಾಗಿ ಸುತ್ತ-ಮುತ್ತಲಿನ ಭಾಗದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯೂ ತಲೆದೂರಿತ್ತು.
"ಈ ತಿಂಗಳ ಆರಂಭದಲ್ಲಿ ಬೆಂಗಳೂರಿಗೆ ಬಂದಿದ್ದ ಮಧ್ಯವಯಸ್ಕ ಇಥಿಯೋಪಿಯನ್ ಪ್ರಜೆಯೊಬ್ಬನಲ್ಲಿ ಮಂಕಿಪಾಕ್ಸ್ ಗುಣಲಕ್ಷಣಗಳಿವೆ ಎಂದು ಎಂದು ಶಂಕಿಸಿ ಆತನನ್ನು ಪರೀಕ್ಷೆಗೆ ಒಳಪಡಿಸಲಾಯಿತು. ಇದೀಗ ಆ ವರದಿಯು ವ್ಯಕ್ತಿಗೆ ಚಿಕನ್ ಪಾಕ್ಸ್ ಇದೆ ಎಂದು ತಿಳಿಸಿದೆ" ಅಂತ ಆರೋಗ್ಯ ಸಚಿವರು ಟ್ವೀಟ್ ಮೂಲಕ ಸ್ಷಷ್ಟನೆ ನೀಡಿದ್ದಾರೆ.
ರಾಜಧಾನಿಯಲ್ಲಿ ಮಂಕಿಪಾಕ್ಸ್ ಗುಣಲಕ್ಷಣ ಇರುವ ವ್ಯಕ್ತಿ ಪತ್ತೆಯಾಗಿದ್ದಾನೆ. ಆರೋಗ್ಯ ಇಲಾಖೆ ಅಧಿಕಾರಿಗಳು ಮಂಕಿ ಪಾಕ್ಸ್ ಲಕ್ಷಣಗಳು ಇರುವ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ. ಆಫ್ರಿಕಾ ಮೂಲದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಗುಣ ಲಕ್ಷಣಗಳು ಪತ್ತೆಯಾಗಿವೆ. ಕೂಡಲೇ ನಗರದ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗೆ ಹೆಚ್ಚಿನ ಶುಶ್ರೂಶೆ ಹಾಗೂ ನಿಗಾ ವಹಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.