ವಿಧಾನಸಭಾ ಚುನಾವಣೆಯಲ್ಲಿ ಕುಕ್ಕರ್ & ಐರನ್ ಬಾಕ್ಸ್ ಹಂಚಿಕೆ ನಿಜವೇ ಆಗಿದ್ದರೆ ಇದು ಗಂಭೀರ ಪ್ರಕರಣ ಆಗಲಿದೆ. ಇಂತಹ ಸೂಕ್ಷ್ಮ ವಿಚಾರಗಳನ್ನು ಚುನಾವಣಾ ಆಯೋಗ ಗಮನಿಸಬೇಕಾಗುತ್ತದೆ ಅಂತಾ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
BS Yediyurappa Karnataka Tour: ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ಬಿಜೆಪಿಯು ಇದೀಗ ಪಕ್ಷ ಸಂಘಟನೆಗೆ ಮತ್ತೆ ಒತ್ತು ನೀಡಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಲಾಗಿದೆ.
ಸರ್ವಪಕ್ಷ ಸಬೆ ಕರೆದಿದ್ದು ನೋಡಿದರೆ, ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ಪ್ರತಿಪಾದಿಸಲು ಸಾದ್ಯವಾಗುತ್ತಿಲ್ಲ. ಮತ್ತೆ ಒತ್ತಡಕ್ಕೆ ಸಿಲುಕಿಕೊಂಡಿದ್ದಾರೆ. ನಾವು ಸರಕಾರದ ಜೊತೆಗಿದ್ದೇವೆ, ಸರಕಾರ ತಮಿಳುನಾಡಿನ ಒತ್ತಡಕ್ಕೆ ಮಣಿಯಬಾರದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
Kaveri River water dispute: ತಮಿಳುನಾಡಿನವರು 12 ಸಾವಿರ ಕ್ಯೂಸೆಕ್ಸ್ ಬೇಡಿಕೆ ಇಟ್ಟಿದ್ದರು. ಅದನ್ನು 5 ಸಾವಿರ ಕ್ಯೂಸೆಕ್ಸ್ ಗೆ ಇಳಿಸಿದ್ದಾರೆ. ಮೊದಲು ಕುಡಿಯುವ ನೀರಿಗೆ ಆದ್ಯತೆ ನೀಡಿ ನಂತರ ರೈತರಿಗೆ ಹರಿಸುವ ಬಗ್ಗೆ ಯೋಚನೆ ಮಾಡುತ್ತೇವೆ. ಬೆಂಗಳೂರಿಗೆ ಮಳೆ ಬಿದ್ದಾಗ ಆಶಾಭಾವನೆ ಮೂಡಿತ್ತು, ಈಗ ಮಳೆ ಬರದೆ ಸಂಕಷ್ಟ ಎದುರಾಗಿದೆ ಎಂದು ಡಿಕೆಶಿ ತಿಳಿಸಿದರು.
Kaveri River water dispute: ಮುಂದಿನ ವಾರ ಸುಪ್ರೀಂಕೊರ್ಟ್ನಲ್ಲಿ ವಿಚಾರಣೆ ಇದೆ. ಅಲ್ಲಿಯೂ ಸರ್ಕಾರ ಬಲವಾಗಿ ವಾದ ಮಾಡಲಿ, ನಮ್ಮ ಕಾವೇರಿ ಮಕ್ಕಳ ಹಿತ ಬಲಿ ಕೊಟ್ಟು ನೀರು ಬಿಡಬೇಡಿ. ಕಾನೂನು ತಂಡ ಮರು ಚಿಂತನೆ ಮಾಡಬೇಕು ಎಂದು ಬೊಮ್ಮಾಯಿ ಸಲಹೆ ನೀಡಿದರು.
Hubballi News : ಕಾಂಗ್ರೆಸ್ ಸರ್ಕಾರದ ದುರಾಡಳಿತ ಹೆಚ್ಚಾಗಿದೆ. ಅದರ ವಿರುದ್ದ ವಿರೋಧ ಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕೆಂಬುದು ರಾಜ್ಯದ ಜನರ ಅಪೇಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.