ಇಂದು ಬಿಜೆಪಿ ರಾಜ್ಯ ಕಚೇರಿಯಲ್ಲಿ ಸೋತ ಹಾಗೂ ಗೆದ್ದ ಅಭ್ಯರ್ಥಿಗಳ ಜೊತೆ ಚರ್ಚೆ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ನೂತನವಾಗಿ ಚುನಾಯಿತರಾದ ಬಿಜೆಪಿ ಶಾಸಕರ ಸಭೆ, ನಂತರ ಮಧ್ಯಾಹ್ನ 3.00 ಗಂಟೆಗೆ ಎಲ್ಲಾ ಸೋತ ಅಭ್ಯರ್ಥಿಗಳ ಸಭೆ ನಡೆಯಲಿದೆ. ಇದಾದ ಬಳಿಕ ಸಂಜೆ 6ಕ್ಕೆ ಕೋರ್ ಕಮಿಟಿ ಸಭೆ ನಡೆಯಲಿದೆ.
Basavaraja Bommai: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮೊನ್ನೆ ಮೊದಲ ಸಚಿವ ಸಂಪುಟ ಸಭೆ ಅಯಿತು. ಮೊದಲ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ನೀಡಿದ್ದ ಎಲ್ಲ ಗ್ಯಾರಂಟಿಗೆ ಆದೇಶ ಮಾಡುತ್ತೇವೆ ಎಂದಿದ್ದರು.
ನಮ್ಮ ಜನಪರ ಕಾರ್ಯಗಳಲ್ಲಿ ಕಾಂಗ್ರೆಸ್ ರಿವರ್ಸ್ ಹೋಗುತ್ತಿದೆ.. ಎಲ್ಲವೂ ಬದಲಾವಣೆ ಮಾಡುತ್ತೇವೆ ಎನ್ನುವುದು ದುರಂಕಾರ ಮಾತು.
ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ. ಯಾವ ಕ್ರಮ ಕೈಗೊಳ್ಳತಾರೆ ಎನ್ನುವ ಕುರಿತು ಜನರಿಗೆ ಗೊತ್ತಾಗುತ್ತದೆ. ಒಂದು ಸರ್ಕಾರ ಎಲ್ಲದರಲ್ಲೂ ಪರಿಶೀಲನೆ ಮಾಡುವುದು ಸರಿಯಲ್ಲ. ಅಧಿಕಾರ ಬಂದಾಗ ಸ್ವಚ್ಛಾಚಾರ ಕುರಿತು ಹೇಳೋದು ದುರಂಕಾರ.
Basavaraja Bommai: ನಗರದಲ್ಲಿ ಸುರಿದ ಕೆಲವೇ ಗಂಟೆಗಳ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿಯವರು ಈ ವರ್ಷ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಅನ್ನೋದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಕೊನೆಗೂ ಜಯನಗರ ಕೇತ್ರದ ಚುನಾವಣಾ ಫಲಿತಾಂಶ ಪಕ್ರಟ. ಮರು ಎಣಿಕೆಯಲ್ಲಿ ಸೌಮ್ಯರೆಡ್ಡಿ ವಿರುದ್ಧ ಗೆದ್ದ ಬಿಜೆಪಿ ಅಭ್ಯರ್ಥಿ. ಸಿ.ಕೆ.ರಾಮಮೂರ್ತಿ, ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ. ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ 57797 ಮತ. ಕಾಂಗ್ರೆಸ್ನ ಪಕ್ಷದ ಅಭ್ಯರ್ಥಿ ಸೌಮ್ಯರೆಡ್ಡಿ 57781 ಮತ. 16 ಮತಗಳ ಅಂತರದಿಂದ ಬಿಜೆಪಿಯ ರಾಮಮೂರ್ತಿ ಗೆಲುವು. ಮಧ್ಯರಾತ್ರಿ ಜಯನಗರ ಕ್ಷೇತ್ರದ ಫಲಿತಾಂಶಕ್ಕೆ ತೆರೆ.
ಲಿಂಗಾಯತ ಸಿಎಂ ಹೇಳಿಕೆ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.. ನನ್ನ ಹೇಳಿಕೆಯನ್ನ ಬಿಜೆಪಿಯವ್ರು ತಿರುಚಿದ್ದಾರೆ. ನಾನು ಬೊಮ್ಮಾಯಿ ಸಿಎಂ ಆದ ಬಳಿಕ ಭ್ರಷ್ಟರಾದ್ರು ಅಂದಿದ್ದೆ. ಆ ಹೇಳಿಕೆಯನ್ನ ತಿರುಚಲಾಗಿದೆ ಎಂದ ಸಿದ್ದರಾಮಯ್ಯ ಹೇಳಿದ್ದಾರೆ..
ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ 8000 ಶಾಲಾ ಕೊಠಡಿ ನಿರ್ಮಾಣ, 17,000 ಶಿಕ್ಷಕರ ನೇಮಕ ಯಾವುದೇ ಹಗರಣವಿಲ್ಲದೆ ನೇಮಕ ಮಾಡಲಾಗಿದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅರ್ಜಿ ಹಾಕದವರಿಗೂ ಶಿಕ್ಷಕರ ನೇಮಕ ಮಾಡಿ ಭ್ರಷ್ಟಾಚಾರ ಮಾಡಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.