ಆಗ್ನೇಯ ವಿಭಾಗದ ಪೊಲೀಸ್ ಅಧಿಕಾರಿಗಳು ತಮ್ಮ ಮೊಬೈಲ್ ಫೋನ್ಗೆ ಬರುವ ಕರೆಗಳನ್ನ ಸ್ವೀಕರಿಸದೇ ಇರಲಾಗದು. ಜೊತೆಗೆ ತಮ್ಮ ವಾಟ್ಸ್ಯಾಪ್ ಡಿಸ್ಪ್ಲೇ ಪಿಕ್ಚರ್ ನಲ್ಲಿ ತಮ್ಮ ಫೋಟೋ ಸಹ ಹಾಕುವಂತಿಲ್ಲ. ಕರೆ ಸ್ವೀಕರಿಸದೇ ಇದ್ದಲ್ಲಿ ಸಿಬ್ಬಂದಿಗೆ ಸಂಕಷ್ಟ ಎದುರಾಗಲಿದೆ.
ಸಾರ್ವಜನಿಕರು ಪೊಲೀಸರ ಮೇಲೆ ಒಂದಿಲ್ಲೊಂದು ಆರೋಪವನ್ನು ಮಾಡುತ್ತಲೇ ಇದ್ದಾರೆ. ಇದಕ್ಕೆ ಕಾರಣ ಕೆಲ ಪೊಲೀಸರ ಕಾರ್ಯವೈಖರಿಯೂ ಕಾರಣವಾಗಿದೆ. ಖಾಕಿ ಮೇಲೆ ಅನೇಕ ಬಾರಿ ಹಣ ವಸೂಲಿ, ಅನುಚಿತ ವರ್ತನೆಯ ಆರೋಪ ಕೇಳಿ ಬಂದಿವೆ.
ಶಾಸಕ ಸತೀಶ್ ರೆಡ್ಡಿ ಕೊಲೆಗೆ ರೌಡಿ ವಿಲ್ಸನ್ ಗಾರ್ಡನ್ ನಾಗಾನಿಗೆ ಸುಪಾರಿ ಕೊಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಬೊಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಮಲಯಾಳಂನ ಖ್ಯಾತ ಥ್ರಿಲ್ಲರ್ ಸಿನಿಮಾ 'ಕೋಲ್ಡ್ ಕೇಸ್'ನ ಕಥಾಹಂದರ ನೆನಪಿಸುವಂತೆ ನಿರ್ಜನ ಪ್ರದೇಶದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ಅಸ್ಥಿಪಂಜರದ ಮೂಲವನ್ನು ಹುಳಿಮಾವು ಪೊಲೀಸರು ಪತ್ತೆ ಹಚ್ಚಿದ್ದಾರೆ.
ರಾಜ್ಯದಿಂದ ಎಸ್ಕೇಪ್ ಆಗಿದ್ದ ಸ್ಯಾಂಟ್ರೋ ರವಿಯನ್ನು ಗುಜರಾತ್ನ ಅಹಮದಾಬಾದ್ ಬಳಿ ಬಂಧಿಸಲಾಗಿದೆ. ರಾಮನಗರ ಮತ್ತು ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಸ್ಯಾಂಟ್ರೋ ರವಿಯನ್ನು ಬಂಧಿಸಿದ್ದಾರೆಂದು ಅಲೋಕ್ ಕುಮಾರ್ ಹೇಳಿದ್ದಾರೆ.
Happy New Year 2023: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ದೇಶದಾದ್ಯಂತ ಹೊಸ ವರ್ಷವನ್ನು ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ಬರಮಾಡಿಕೊಳ್ಳಲಾಯಿತು. 12 ಗಂಟೆಯ ಬೆಲ್ ಬಾರಿಸುತ್ತಿದ್ದಂತೆಯೇ ಲಕ್ಷಾಂತರ ಜನರು 2022ಕ್ಕೆ ಗುಡ್ ಬೈ ಹೇಳಿ 2023ನೇ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಿದರು.
Happy New Year 2023: ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಚರ್ಚ್ ಸ್ಟ್ರೀಟ್, ಕಮರ್ಷಿಯಲ್ ಸ್ಟ್ರೀಟ್ & ಎಲೆಕ್ಟ್ರಾನಿಕ್ ಸಿಟಿಯಲ್ಲಿ ಲಕ್ಷಾಂತರ ಜನರು ಕುಣಿದು ಕುಪ್ಪಳಿಸುವ ಮೂಲಕ ಹೊಸ ವರ್ಷವನ್ನು ಬರಮಾಡಿಕೊಂಡು ಸಂಭ್ರಮಿಸಿದರು.
New Year's celebrations in Bengaluru: ಸಾವಿರಾರು ಮಂದಿ ಹಾಡು, ನೃತೃ, ಶಿಳ್ಳೆ ಚಪ್ಪಾಳೆ ಮೂಲಕ ‘ಹ್ಯಾಪಿ ನ್ಯೂ ಇಯರ್’, ‘ಹೊಸ ವರ್ಷದ ಶುಭಾಶಯಗಳು’ ಎಂದು ಹರ್ಷೋದ್ಗಾರದ ಮೂಲಕ ಹೊಸ ವರ್ಷವನ್ನು ಬರಮಾಡಿಕೊಂಡರು. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಹಾಗೂ ಕಮರ್ಷಿಯಲ್ ಸ್ಟ್ರೀಟ್ಗಳು ವಿಶೇಷ ವಿದ್ಯುತ್ ದೀಪಗಳಿಂದ ಕಂಗೊಳಿಸಿದವು.
ಬೆಂಗಳೂರು ಕೇಂದ್ರ ವಿಭಾಗವೊಂದರಲ್ಲೇ 31 ಪಬ್, 5 ಡಿಸ್ಕೋಥೆಕ್, 26 ಲೇಡಿಸ್ ಬಾರ್, 13 ಕ್ಲಬ್ ಹಾಗೂ 71 ರೆಸ್ಟೋರೆಂಟ್ ಗಳಿದ್ದು ಅವುಗಳ ಮಾಲೀಕರಿಗೆ ನಿಯಮಾವಳಿಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
ಕೆ.ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಯುವಕನನ್ನ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ ಆರೋಪದಡಿ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಆರು ಮಂದಿ ಆರೋಪಿಗಳ ಬಂಧನ ಪ್ರಕರಣಕ್ಕೆ ಸಂಬಂಧ ಸ್ಫೋಟಕ ತಿರುವು ಸಿಕ್ಕಿದೆ.
ಸಿಬ್ಬಂದಿ ವರ್ತನೆ ನಡವಳಿಕೆ ಸರಿಯಿಲ್ಲದಿದ್ದರೂ ಮುಕ್ತವಾಗಿ ತಮ್ಮ ಅಭಿಪ್ರಾಯ ತಿಳಿಸಬಹುದಾಗಿದೆ. ನೂತನ QR ಕೋಡ್ ವ್ಯವಸ್ಥೆಯು ದೂರುದಾರರ ಪಾಲಿಗೆ ಆಶಾಕಿರಣವಾಗಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.