ಮಹತ್ವದ ಬೆಳವಣಿಗೆಯೊಂದರಲ್ಲಿ ನಿತೀಶ್ ಕುಮಾರ್ ಅವರನ್ನು ಬಿಹಾರ ಮುಖ್ಯಮಂತ್ರಿಯಾಗಿ ನೇಮಿಸುವ ಪ್ರಶ್ನೆಯೇ ಇಲ್ಲ ಎಂದು ಹಿರಿಯ ಬಿಜೆಪಿ ಮುಖಂಡ ಮತ್ತು ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಬುಧವಾರ ಹೇಳಿದ್ದಾರೆ.ಮೊದಲ ಬಾರಿಗೆ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಅವರ ಜೆಡಿಯುಗಿಂತ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆದ ಒಂದು ದಿನದ ನಂತರ ಮೋದಿ ಈ ಹೇಳಿಕೆ ನೀಡಿದ್ದಾರೆ.
ಬಿಹಾರ ವಿಧಾನಸಭೆ ಚುನಾವಣೆಗೆ ಇದೇ ನವೆಂಬರ್ 7(ಶನಿವಾರ)ರಂದು 3ನೇ ಹಂತದ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಹಾರ ರಾಜ್ಯದ ಜನತೆಗೆ ಬಹಿರಂಗ ಪತ್ರ ಬರೆದಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಗೆ (Bihar Election) ವೇದಿಕೆ ಸಜ್ಜಾಗಿದೆ. ಬುಧವಾರ ಮೊದಲ ಹಂತದ ಚುನಾವಣೆಯ ಮತದಾನ (voting) ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದ್ದು, ಜನರು ಸರತಿಯಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.
ಕೊವಿಡ್ ಕರಾಳ ಛಾಯೆ (COVID-19 )ಆವರಿಸಿರುವಂತೆಯೆ, ಬಿಹಾರ ವಿಧಾನಸಭಾ ಚುನಾವಣೆಗೆ (Bihar Election) ವೇದಿಕೆ ಸಜ್ಜಾಗಿದೆ. ಬುಧವಾರ ಮೊದಲ ಹಂತದ ಚುನಾವಣೆಯ ಮತದಾನ ನಡೆಯಲಿದೆ, 243 ವಿಧಾನ ಸಭಾ ಕ್ಷೇತ್ರಗಳ ಪೈಕಿ 71 ಕ್ಷೇತ್ರಗಳ ಮತದಾರರು 1066 ಅಭ್ಯರ್ಥಿಗಳ ಮತ ಭವಿಷ್ಯ ಬರೆಯಲಿದ್ದಾರೆ.
ಭಗವಾನ್ ರಾಮ್ ಸೀತಾ ದೇವಿಯಿಲ್ಲದೆ ಅಪೂರ್ಣ ಮತ್ತು ಬಿಹಾರದ ಸೀತಮಾರ್ಹಿಯಲ್ಲಿ ಸೀತೆಗಾಗಿ ದೇವಾಲಯವನ್ನು ನಿರ್ಮಿಸಲಾಗುವುದು ಎಂದು ಲೋಕ ಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಎಂದು ಹೇಳಿದರು.ಸೀತಾ ಅವರ ಜನ್ಮಸ್ಥಳವೆಂದು ನಂಬಲಾದ ಸೀತಾಮರ್ಹಿ ರಾಜ್ಯದ ಯಾತ್ರಿಕರಿಗೆ ದೊಡ್ಡ ಸ್ಥಳವಾಗಿದೆ.
ಅದು 2014 ರ ಸಾರ್ವತ್ರಿಕ ಚುನಾವಣಾ ಪ್ರಚಾರದ ಸಂದರ್ಭ,ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಲೋಕ ಜನಶಕ್ತಿ ಪಕ್ಷದ (ಎಲ್ಜೆಪಿ) ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಉದ್ದೇಶಿಸಿ ಶ್ರೇಷ್ಠ ಹವಾಮಾನ ತಜ್ಞ (ಮೌಸಮ್ ವೈಜ್ಞಾನಿಕ್) ಎಂದು ತಮಾಷೆ ಮಾಡಿದ್ದರು. ಇದಾದ ನಂತರ ಪಾಸ್ವಾನ್ ಮೋದಿ ಅಲೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದಲ್ಲಿನ ಎನ್ಡಿಎ ಸರ್ಕಾರದ ಭಾಗವಾಗಿದ್ದರು.
ಉತ್ತರ ಪ್ರದೇಶದ ಹತ್ರಾಸ್ನಲ್ಲಿ 20 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿರುದ್ಧ ರಾಷ್ಟ್ರವ್ಯಾಪಿ ಆಕ್ರೋಶದ ಮಧ್ಯೆ, ಬಿಹಾರದ ಗಯಾ ಜಿಲ್ಲೆಯ ದಲಿತ ಬಾಲಕಿಯೊಬ್ಬಳ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ನಂತರ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಅಪನಂಬಿಕೆಯ ವಾತಾವರಣವನ್ನು ಸೃಷ್ಟಿಸಲು ಭಯ, ಭಾವನೆಗಳು ಮತ್ತು ವದಂತಿಗಳನ್ನು ಹುಟ್ಟುಹಾಕುವ ಮೂಲಕ ಅವರನ್ನು ದಾರಿ ತಪ್ಪಿಸುವ ಏಕೀಕೃತ ಪ್ರಯತ್ನಗಳ ವಿರುದ್ಧ ಬಿಹಾರದ ಜನರು ಹೆಚ್ಚಿನ ಜಾಗರೂಕರಾಗಿರಿ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ಮನವಿ ಮಾಡಿದ್ದಾರೆ.
2020 ರ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು 2020 ರ ಬಿಹಾರ ವಿಧಾನಸಭಾ ಚುನಾವಣೆಗೆ ಉಸ್ತುವಾರಿಯನ್ನಾಗಿ ಬಿಜೆಪಿ ಬುಧವಾರ ನೇಮಕ ಮಾಡಿದೆ.
ಅಕ್ಷತ್ ಉತ್ಕರ್ಶ್ ಎಂಬ ಉದಯೋನ್ಮುಖ ನಟ ಮುಂಬೈನ ಅಂಧೇರಿಯಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ನಂತರ ಅಕ್ಷತ್ ಅವರ ಶವವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.
ಕರೋನವೈರಸ್ ಬಿಕ್ಕಟ್ಟಿನ ಮಧ್ಯೆ ಮುಂದಿನ ತಿಂಗಳು ವಿಧಾನಸಭೆಗೆ ಚುನಾವಣೆಗೆ ಯಾವುದೇ ಮೈತ್ರಿ ಮರುಹೊಂದಾಣಿಕೆಗೆ ಕಾಯ್ದು ನೋಡುವ ತಂತ್ರ ಅನುಸರಿಸುವುದಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಅಸ್ಸಾಂ ಮತ್ತು ಬಿಹಾರದಲ್ಲಿ ಶನಿವಾರದ ಪ್ರವಾಹ ಪರಿಸ್ಥಿತಿ ಕೂಡ ಭೀಕರವಾಗಿದೆ. ಅಸ್ಸಾಂ ಪ್ರವಾಹ ಮತ್ತು ಭೂಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 123ಕ್ಕೆ ತಲುಪಿದೆ. ಅದೇ ಸಮಯದಲ್ಲಿ ಬಿಹಾರದಲ್ಲಿ ಪ್ರವಾಹದಿಂದಾಗಿ 10 ಜನರು ಸಾವನ್ನಪ್ಪಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.