ಗೋಪಾಲ್ಗಂಜ್ ಮತ್ತು ಪೂರ್ವ ಚಂಪಾರಣ್ಗಳನ್ನು ಸಂಪರ್ಕಿಸುವ ಹೊಸ ಸೇತುವೆಯ ಒಂದು ಭಾಗವು ಭಾರಿ ಮಳೆಯ ನಂತರ ಬುಧವಾರ ಕುಸಿದಿದ್ದರಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ (ಜುಲೈ 16) ವಿರೋಧ ಪಕ್ಷದ ನಾಯಕರ ತೀವ್ರ ಟೀಕೆಗಳನ್ನು ಎದುರಿಸಬೇಕಾಯಿತು. ಗೋಪಾಲ್ಗಂಜ್ ಜಿಲ್ಲೆಯ ಗಂಡಕ್ ನದಿಯಲ್ಲಿರುವ ಸತ್ತರ್ಘಾಟ್ ಸೇತುವೆಯನ್ನು ಮುಖ್ಯಮಂತ್ರಿ ಜೂನ್ 16 ರಂದು ಉದ್ಘಾಟಿಸಿದರು.
ಗುಡುಗು ಸಿಡಿಲು ಸಹಿತ ಭಾರಿ ಮಳೆಯಿಂದಾಗಿ ಗುಜರಾತ್ನ ಸೌರಾಷ್ಟ್ರ ಪ್ರದೇಶದಲ್ಲಿ ಕನಿಷ್ಠ ಏಳು ಜನರು ಪ್ರಾಣ ಕಳೆದುಕೊಂಡರೆ, 11 ಜನರು ಮಂಗಳವಾರ (ಜೂನ್ 30) ಬಿಹಾರದಲ್ಲಿ ಸಾವನ್ನಪ್ಪಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಬಿಹಾರದ ವಿವಿಧ ಜಿಲ್ಲೆಗಳಲ್ಲಿ ಮಿಂಚು ಕನಿಷ್ಠ 83 ಮಂದಿ ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಗೋಪಾಲ್ಗಂಜ್ನಲ್ಲಿ 13 ಮಂದಿ, ಮಧುಬನಿ ಮತ್ತು ನವಾಡಾದಲ್ಲಿ ತಲಾ 8, ಬಾಗಲ್ಪುರ ಮತ್ತು ಸಿವಾನ್ನಲ್ಲಿ ತಲಾ 6, ದರ್ಬಂಗಾ, ಬಂಕಾ, ಪೂರ್ವ ಚಂಪಾರನ್ನಲ್ಲಿ ತಲಾ 5 ಮತ್ತು ಖಗರಿಯಾ ಮತ್ತು ಔರಂಗಾಬಾದ್ನಲ್ಲಿ ತಲಾ 3 ಜನರು ಸಾವನ್ನಪ್ಪಿದ್ದಾರೆ.
ಬಿಹಾರದಲ್ಲಿ ವಿಧಾನ ಪರಿಷತ್ ಚುನಾವಣೆಗೆ ಮುನ್ನ ಮಂಗಳವಾರ (ಜೂನ್ 23) ರಾಷ್ಟ್ರೀಯ ಜನತಾದಳ (ಆರ್ಜೆಡಿ) ಗೆ ದೊಡ್ಡ ಹೊಡೆತ ಬಿದ್ದಿದ್ದು, ಅದರ ಎಂಟು ಎಂಎಲ್ಸಿಗಳಲ್ಲಿ ಐವರು ಪಕ್ಷವನ್ನು ತೊರೆದು ನಿತೀಶ್ ಕುಮಾರ್ ಅವರ ಜನತಾದಳ (ಸಂಯುಕ್ತ) ಗೆ ಸೇರ್ಪಡೆಗೊಂಡರು.
ಸುಶಾಂತ್ ಸಿಂಗ್ ರಜಪೂತ್ ಸಾವಿನ ಸುದ್ದಿಯಿಂದ ಪ್ರಚೋದಿಸಲ್ಪಟ್ಟ ಸ್ವಜನಪಕ್ಷಪಾತದ ಬಗೆಗಿನ ಚರ್ಚೆ ಮತ್ತು ಬಾಲಿವುಡ್ ಹೊರಗಿನ ನಟರನ್ನು ಪರಿಗಣಿಸುವ ರೀತಿ ಮಧ್ಯೆ ಬಿಹಾರದ ಮುಜಾಫರ್ಪುರದಲ್ಲಿ ಚಲನಚಿತ್ರೋದ್ಯಮದ ಹಲವಾರು ಪ್ರಭಾವಿ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಇಂಡೋ-ನೇಪಾಳ ಗಡಿಯಲ್ಲಿ ಬಿಹಾರದ ಸೀತಮಾರ್ಹಿಯ ಸೋನ್ಬರ್ಸಾ ಪೊಲೀಸ್ ಠಾಣೆ ಪ್ರದೇಶದ ಲಾಲ್ಬಂಡಿ ಗಡಿಯ ಬಳಿ ಗುಂಡಿನ ದಾಳಿ ನಡೆದಿದೆ. ನೇಪಾಳಿ ಪೊಲೀಸರು ಮತ್ತು ಸ್ಥಳೀಯ ಭಾರತೀಯ ಪ್ರಜೆಯೊಂದಿಗೆ ಹಿಂಸಾತ್ಮಕ ಘರ್ಷಣೆ ನಡೆದಿದ್ದು ಇದರಲ್ಲಿ ನೇಪಾಳ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ನಟ ಸೋನು ಸೂದ್ ಅವರು ವಲಸೆ ಕಾರ್ಮಿಕರಿಗೆ ಮನೆಗೆ ತಲುಪಲು ಸಹಾಯ ಮಾಡಿದ್ದರಿಂದಾಗಿ ಈಗ ಸುದ್ದಿಯಲ್ಲಿದ್ದಾರೆ.ಮುಂಬೈಯಲ್ಲಿ ಸಿಲುಕಿಕೊಂಡಿರುವ ಜನರನ್ನು ಬಸ್ಗಳ ಮೂಲಕ ಮನೆಗೆ ವಾಪಸ್ ಕಳುಹಿಸುವಲ್ಲಿ ಅವರ ನಿರಂತರ ಪ್ರಯತ್ನವನ್ನು ಮಾಡುತ್ತಿದ್ದಾರೆ. ಅವರ ಈ ಕ್ರಮಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.
ಪ್ರಶಾಂತ್ ಕಿಶೋರ್ ವಿರುದ್ಧ ಬಿಹಾರದಲ್ಲಿ ನಡೆದ 'ಬಾತ್ ಬಿಹಾರ ಕಿ' ಅಭಿಯಾನದಲ್ಲಿ ಕೃತಿಚೌರ್ಯ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಪ್ರಶಾಂತ್ ಕಿಶೋರ್ ಬಿಹಾರದಲ್ಲಿ 'ಬಾತ್ ಬಿಹಾರ ಕಿ' ಅನ್ನು ಪ್ರಾರಂಭಿಸಿದ್ದಾರೆ ಎಂಬುದು ಗಮನಾರ್ಹ ಸಂಗತಿ.
ನಿತೀಶ್ ಕುಮಾರ್ ಅವರ ಜನತಾದಳ (ಸಂಯುಕ್ತ) ನಿಂದ ಇತ್ತೀಚೆಗೆ ವಜಾಗೊಳಿಸಲ್ಪಟ್ಟ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಬಿಹಾರದ ಯುವಕರನ್ನು ಸಂಪರ್ಕಿಸಲು ಗುರುವಾರ ತಮ್ಮ ‘ಬಾತ್ ಬಿಹಾರ ಕಿ’ ಅಭಿಯಾನವನ್ನು ಪ್ರಾರಂಭಿಸಿದರು.
ಮಾಜಿ ವಿದ್ಯಾರ್ಥಿ ಮುಖಂಡ ಕನ್ಹಯ್ಯ ಕುಮಾರ್ ಅವರ ಬೆಂಗಾವಲು ಮೇಲೆ ಬಿಹಾರದಲ್ಲಿ ಸಾರ್ವಜನಿಕ ಸಭೆಯ ನಂತರ ಹಿಂದಿರುಗುತ್ತಿದ್ದಾಗ ಹಲ್ಲೆ ನಡೆಸಲಾಗಿದೆ.ಈಗ ಸಿಪಿಐನ ಭಾಗವಾಗಿರುವ 33 ವರ್ಷದ ಕನ್ನಯ್ಯಕುಮಾರ್ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಇತರ ಸಿಎಎ ವಿರೋಧಿ ಪ್ರತಿಭಟನಾಕಾರರೊಂದಿಗೆ ಮಾತನಾಡುತ್ತಿದ್ದರು.
ದ್ವೇಷಪೂರಿತ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪೊಲೀಸರು ಶರ್ಜಿಲ್ ಇಮಾಮ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಹಾರ ರಾಜಧಾನಿ ಪಟ್ನಾ ಸಮೀಪ ಇರುವ ಕಾಕೋ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಬಿಹಾರ ರಾಜಧಾನಿ ಪಾಟ್ನಾದಲ್ಲಿ ಮತ್ತೊಮ್ಮೆ ರಾಜಕೀಯ ಪೋಸ್ಟರ್ಗಳು ರಾರಾಜಿಸುತ್ತಿವೆ. ಈ ಬಾರಿ ಜೆಡಿಯು ಪೋಸ್ಟರ್ಗಳನ್ನು ಹಾಕಿದೆ. ಜೆಡಿಯು ಲಾಲು ಯಾದವ್ ಹಗರಣದ ಕಥೆಯನ್ನು ಪೋಸ್ಟರ್ಗಳ ಮೂಲಕ ತೋರಿಸಿದೆ.
ಮುಜಫ್ಫರ್ ಪುರ್ ಆಶ್ರಯ ಮನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಸಾಕೆತ್ ನ್ಯಾಯಾಲಯ ಇಂದು ತನ್ನ ತೀರ್ಪು ಪ್ರಕಟಿಸಿದ್ದು, ಪ್ರಕರಣದ ಪ್ರಮುಖ ಆರೋಪಿ ಮತ್ತು NGO ವೊಂದರ ಮಾಲೀಕ ಬ್ರಜೇಶ್ ಠಾಕೂರ್ ಸೇರಿದಂತೆ ಒಟ್ಟು 19 ಆರೋಪಿಗಳನ್ನುಪ್ರಕರಣದ ದೋಷಿಗಳು ಎಂದು ತೀರ್ಪು ನೀಡಿದೆ.
ಬಿಹಾರದಲ್ಲಿ ನಡೆಯಲಿರುವ ವಿಧಾನಸಭೆಯನ್ನು ಎನ್ಡಿಎ ಒಕ್ಕೂಟ ನಿತೀಶ್ ಕುಮಾರ್ ನೇತೃತ್ವದಲ್ಲೇ ಎದುರಿಸಲಿದೆ ಎಂದು ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದರು.
ಗುತ್ತಿಗೆದಾರ ಅಜಯ್ ಕುಮಾರ್ ಸಿಂಗ್ ಅವರು ಕೆನರಾ ಬ್ಯಾಂಕಿನಿಂದ 10 ಲಕ್ಷ ರೂ. ಡ್ರಾ ಮಾಡಿಕೊಂಡು ಆಗಷ್ಟೇ ಹೊರಬಂದಿದ್ದರು. ಅದೇ ಸಮಯದಲ್ಲಿ, ಅಪರಿಚಿತ ಯುವಕ ಗುತ್ತಿಗೆದಾರನ ವಾಹನದಿಂದ 10 ಲಕ್ಷ ರೂ. ತುಂಬಿದ್ದ ಬ್ಯಾಗ್ ತೆಗೆದುಕೊಂಡು ಪರಾರಿಯಾಗಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.