2020 ರಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಬಿಹಾರದಲ್ಲಿ ಅಧಿಕಾರದಿಂದ ಕಿತ್ತೊಗೆಯಲು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಶನಿವಾರ ಕರೆ ನೀಡಿದ್ದು, ಜೆಡಿಯು ಸರ್ಕಾರದ ಮೇಲೆ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಎರಡು ಹಸುಗಳು ಮತ್ತು ಒಂದು ಕರು - ಇದು ಕಳೆದ ವರ್ಷದಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಸ್ತಿಯಲ್ಲಿನ ಪ್ರಮುಖ ಹೆಚ್ಚಳವಾಗಿದೆ ಎಂದು ಬಿಹಾರ ಸಚಿವರ ವಾರ್ಷಿಕ ಆಸ್ತಿ ಹೇಳಿಕೆ ತೋರಿಸುತ್ತದೆ.
ಬಿಹಾರದ ಬಕ್ಸಾರ್ ಜಿಲ್ಲೆಯ ಕುಕ್ಧಾ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಸೋಮವಾರ ರಾತ್ರಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಸುಟ್ಟುಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದುರ್ಗಾವತಿ ಪೊಲೀಸ್ ಠಾಣೆ ಪ್ರದೇಶದ ತಿರೋಜ್ಪುರ ಗ್ರಾಮದ ನಿವಾಸಿ ಕಮಲಾ ದೇವಿ ಕೋಳಿ ಫಾರ್ಮ್ ತೆರೆದಿದ್ದಾರೆ. ಪಕ್ಕದ ಮನೆಯವರು ಓಡಿ ಹೋಗಿ ಕೋಳಿಯನ್ನು ಹಿಡಿದು ಕೊಂದರು ಎಂದು ಆರೋಪಿಸಲಾಗಿದೆ. ಇದರ ನಂತರ, ವಿವಾದ ಪ್ರಾರಂಭವಾದಾಗ, ಕೋಳಿ ಫಾರ್ಮ್ ನಡೆಸುತ್ತಿದ್ದ ಕಮಲಾ ದೇವಿ ಮತ್ತು ಆಕೆಯ ಮಗ ಇಂದಾಲ್ ಅವರನ್ನು ಆರೋಪಿಗಳು ಥಳಿಸಿದ್ದಾರೆ.
ಬಿಹಾರದ ಮೋತಿಹಾರಿ ಜಿಲ್ಲೆಯ ಎನ್ಜಿಒವೊಂದರ ಅಡುಗೆಮನೆಯಲ್ಲಿ ಶನಿವಾರ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ ಈ ದುರಂತ ಮೋತಿಹರಿಯ ಸುಗೌಲಿಯಲ್ಲಿ ನಡೆದಿದೆ ಎನ್ನಲಾಗಿದೆ.
ಬಿಹಾರ ಮುಖ್ಯಮಂತ್ರಿಯ ಪ್ರತಿನಿಧಿಗಳು ನಿತೀಶ್ ಕುಮಾರ್ ಪರವಾಗಿ ರಾಷ್ಟ್ರ ರಾಜಧಾನಿಯಲ್ಲಿರುವ ರಾಷ್ಟ್ರೀಯ ಚುನಾವಣಾ ಅಧಿಕಾರಿ ಅನಿಲ್ ಹೆಗ್ಡೆ ಅವರಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗುರುವಾರ ರಾತ್ರಿ ಮಹಾನಂದ್ ನದಿಯಲ್ಲಿ ಏರ್ಪಡಿಸಿದ್ದ ದೋಣಿ ಸ್ಪರ್ಧೆಯಲ್ಲಿ ಭಾಗವಹಿಸಲು ಸುಮಾರು 40 ರಿಂದ 50 ಪ್ರಯಾಣಿಕರು ಜಗದೀಶ್ಪುರ ಜೆಟ್ಟಿಯಿಂದ ಬಿಹಾರಕ್ಕೆ ದೋಣಿಯಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಆರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಹಾರದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ನ ಸುಮಾರು 18 ತಂಡಗಳನ್ನು ರಚಿಸಲಾಗಿದೆ.
ನಿರಂತರ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬಿಹಾರದಲ್ಲಿ ಜನರ ಬದುಕು ಅಕ್ಷರಶಃ ಈಗ ನೀರಿನಲ್ಲಿ ನಿಂತಿದೆ.ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಸೈಕಲ್ ರಿಕ್ಷಾ ಎಳೆಯುವ ವ್ಯಕ್ತಿಯೊಬ್ಬ ನೀರಿನಲ್ಲಿ ಸಿಕ್ಕ ರಿಕ್ಷಾಗೊಸ್ಕರ್ ಕಣ್ಣೀರಿಡುತ್ತಿರುವ ದೃಶ್ಯ ಸೆರೆಯಾಗಿದೆ.
ನಿರಂತರ ಮಳೆಯಿಂದಾಗಿ ರಸ್ತೆ, ರೈಲು ಸಂಚಾರ ಮತ್ತು ವಿಮಾನ ಕಾರ್ಯಾಚರಣೆಯ ಮೇಲೂ ಪರಿಣಾಮ ಬೀರಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಭಾರತೀಯ ರೈಲ್ವೆ ಹಲವು ರೈಲುಗಳ ಸಂಚಾರವನ್ನು ರದ್ದುಪಡಿಸಿದೆ.
ಕಳೆದ 24 ಗಂಟೆಗಳಲ್ಲಿ ರಾಜ್ಯ ರಾಜಧಾನಿ ಭಾರೀ ಮಳೆಯಾಗಿದ್ದರಿಂದ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿದೆ. ಇದರಿಂದಾಗಿ ಇಂದು ಎಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.