ಹೆಂಡ ಕುಡಿದವರಿಗಿಂತಲೂ ಕಡೆಯಾಗಿ ಮಾತಾಡುವ ಸಿ.ಟಿ.ರವಿಯವರನ್ನು ಜನರು ಸುಮ್ಮನೆ O.T.ರವಿ ಎನ್ನುತ್ತಾರೆಯೇ? OT ಕುಡಿಯದೆ ರವಿಯವರ ಬಾಯಿಂದ ಇಂತಹ ಕೊಳಕು ಹೇಳಿಕೆಗಳು ಹೇಗೆ ಬರಲು ಸಾಧ್ಯವೆಂದು ದಿನೇಶ್ ಗುಂಡೂರಾವ್ ಕುಟುಕಿದ್ದಾರೆ.
ಹಾಲಿ & ಮಾಜಿ ಶಾಸಕರ ಸಂಬಂಧಿಕರು, ಪುತ್ರರಿಗೆ ಆಶ್ರಯ ಆಗುತ್ತಾ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಚರ್ಚೆ ಕೂಡ ಪ್ರಾರಂಭವಾಗಿದೆ. ಜೊತೆಗೆ ಜೆಡಿಎಸ್ನಿಂದ ಅಂತರ ಕಾಯ್ದುಕೊಂಡು ಶಾಸಕರತ್ತ ಇವರು ಸಂಪರ್ಕ ಮಾಡಲಿದ್ದಾರೆಂತೆ.
40% Commission Case: ಡಿ.ಕೆಂಪಣ್ಣ ವಿರುದ್ಧ ಸಚಿವ ಮುನಿರತ್ನ ಅವರು ಮಾನಹಾನಿ ಕೇಸ್ ಹಾಕಿದ್ದರು. ಕೋರ್ಟ್ಗೆ ಗೈರಾಗಿದ್ದ ಡಿ.ಕೆಂಪಣ್ಣ ವಿರುದ್ಧ ವಾರೆಂಟ್ ಜಾರಿಯಾಗಿತ್ತು. 8ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು.
NFSA ಅಡಿಯಲ್ಲಿ ಬಡವರಿಗೆ ಉಚಿತವಾಗಿ ಆಹಾರ ಧಾನ್ಯಗಳನ್ನು ನೀಡಲಾಗುವುದು ಎಂದು ಸಂಪುಟ ಸಭೆಯ ನಂತರ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಹೇಳಿದರು. ಆದರೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY)ಗೆ ಗಡುವನ್ನು ವಿಸ್ತರಿಸಲು ಸರ್ಕಾರ ನಿರಾಕರಿಸಿದೆ.
Congress V/S BJP: ಈ ಸಿದ್ದರಾಮಯ್ಯ ಅಬ್ಬರಿಸಿ ಬೊಬ್ಬಿರಿಯುವುದಕ್ಕೆ ಮತ್ತೊಂದು ಗುಪ್ತ ಕಾರಣವೇ ಹುಬ್ಬಳ್ಳಿ-ಧಾರವಾಡದಲ್ಲಿ ಅಭಿವೃದ್ಧಿ ಕಾರ್ಯಗಳು ಆಗಬಾರದು ಎಂಬ ದುರುದ್ದೇಶವೆಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
545 ನೇಮಕಾತಿ ಪ್ರಕ್ರಿಯೆ ಹಗರಣದ ವಿಚಾರ ಎಲ್ಲರಿಗೂ ಗೊತ್ತಿದೆ. ಇನ್ನು 402 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ದೈಹಿಕ ಪರೀಕ್ಷೆ ನಡೆಸಲಾಗಿದ್ದು, ಈಗ ಅದನ್ನು ಮುಂದುವರಿಸಲು ಆದೇಶ ನೀಡಿದೆ.
Transport Workers Strike: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘದ ರಾಜ್ಯ ಗೌರವಾಧ್ಯಕ್ಷರೂ ಆಗಿರುವ ಮಾಜಿ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಮತ್ತು KSRTC ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಅನಂತ್ ಸುಬ್ಬರಾವ್ ಮಹತ್ವದ ಸಭೆಯನ್ನು ಕರೆದಿದ್ದಾರೆ.
ಬಿಜೆಪಿ ಸರ್ಕಾರದ ವಿರುದ್ಧ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅಸಮಾಧಾನ. ಬಿಜೆಪಿ ಸರ್ಕಾರ ಅನುದಾನ ಕೊಡೋದ್ರಲ್ಲಿ ತಾರತಮ್ಯ ಮಾಡ್ತಿದೆ. ಸಚಿವರ ಬಳಿ ಭಿಕ್ಷೆ ಬೇಡಿದ್ರು ಕಾಂಗ್ರೆಸ್ ಶಾಸಕರಿಗೆ ಅನುದಾನ ಕೊಡ್ತಿಲ್ಲ ಎಂದು ಕಿಡಿಕಾರಿದ್ದಾರೆ.
Bhupendra Patel Oath Ceremony: ಗಾಂಧಿನಗರದಲ್ಲಿ ನಡೆದ ಸಮಾರಂಭದಲ್ಲಿ ಭೂಪೇಂದ್ರ ಪಟೇಲ್ ಸತತ 2ನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿಯ ಹಲವು ಪ್ರಮುಖ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.