BJP-JDS alliance: ದೇವೇಗೌಡರೇ, ಎಪ್ಪತ್ತು ವರ್ಷಗಳ ಕಾಲ ರಾಜಕೀಯದಲ್ಲಿದ್ದು ಕನ್ನಡಿಗರ ಪ್ರೀತಿ-ಅಭಿಮಾನವನ್ನು ಉಂಡು ಬೆಳೆದ ನೀವು ʼನಾವು ಪ್ರಧಾನಿ ಮೋದಿಯವರ ಹೆಸರಿನಲ್ಲಿಯೇ ಚುನಾವಣೆ ನಡೆಸುತ್ತೇವೆ” ಎಂಬ ಶರಣಾಗತಿಯ ಹೇಳಿಕೆಯನ್ನು ನೀಡುವಾಗ ಕನಿಷ್ಠ ನಿಮ್ಮ ಆತ್ಮಾಭಿಮಾನವೂ ಕುಟುಕಲಿಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Lok Sabha Election 2024: ಈ ಬಾರಿಯೂ ಮಂಡ್ಯ ಕ್ಷೇತ್ರದ ಲೋಕಸಭಾ ಚುನಾವಣಾ ರಣಕಣವು ರಾಷ್ಟ್ರಮಟ್ಟದಲ್ಲಿ ಮತ್ತೊಮ್ಮೆ ಸದ್ದು ಮಾಡಲಿದೆ. ಸುಮಲತಾರ ಪರ ಕಳೆದ ಬಾರಿ ದರ್ಶನ್-ಯಶ್ ಜೋಡಿಯಾಗಿ ಪ್ರಚಾರ ನಡೆಸಿದ್ದರು. ಈ ಬಾರಿಯೂ ಜೊಡೆತ್ತುಗಳು ಜೊತೆಯಾಗಿ ಪ್ರಚಾರ ನಡೆಸುತ್ತಾರಾ? ಕಾದು ನೋಡಬೇಕಿದೆ.
ಕುಮಾರಸ್ವಾಮಿಯವರೇ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಅನ್ಯ ರಾಜ್ಯದ ಪೇಶ್ವೆ ಎಂದು ನಿಂದಿಸಿದಿರಿ. 2.50 ಕೋಟಿಯಂತೆ ಸರಕಾರಿ ಹುದ್ದೆ ಮಾರಿಕೊಂಡ ಭ್ರಷ್ಟ ಎಂದಿರಿ. ಸಿಟಿ ರವಿಯನ್ನು ಲೂಟಿ ರವಿ ಎಂದು ನಾಮಕರಣ ಮಾಡಿದವರೂ ನೀವೇ. ಇವತ್ತು ಅವರದ್ದೇ ಅಂಗಿ ಚುಂಗು ಹಿಡಿದು ನಿಂತಿದ್ದೀರಲ್ಲಾ... ನಿಮಗೇನಾದರೂ ಆತ್ಮಗೌರವ ಇದೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
BJP-JDS Alliance: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ನಾನೇ ಜೆಡಿಎಸ್ ರಾಜ್ಯಾಧ್ಯಕ್ಷ ಪಕ್ಷದ ತೀರ್ಮಾನಗಳನ್ನು ತೆಗೆದುಕೊಳ್ಳುವುದು ಎಂದು ಕುಮಾರಸ್ವಾಮಿಯವರಿಗೆ ನೀವು "ಲೆಕ್ಕಕ್ಕಿಲ್ಲ" ಎಂದು ಹೇಳಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಕುಮಾರಸ್ವಾಮಿಯವರದ್ದು ಅಬ್ಬೇಪಾರಿ ಸ್ಥಿತಿಗಿಂತ ಭಿನ್ನವಾಗಿಲ್ಲವೆಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
HDD, HDK ನಡೆಗೆ ಸಿ.ಎಂ.ಇಬ್ರಾಹಿಂ ಅಸಮಾಧಾನ..!
ಯಾವುದೇ ಕಾರಣಕ್ಕೂ ಮೈತ್ರಿ ಒಪ್ಪಲ್ಲ ಎಂದ ಇಬ್ರಾಹಿಂ
ಯಾರ ಸಿದ್ಧಾಂತವನ್ನು ಯಾರು ಒಪ್ಪಿಕೊಂಡಿದ್ದಾರೆ..?
ಅಧ್ಯಕ್ಷನಾಗಿ ಮೈತ್ರಿಯನ್ನು ನಾನು ಒಪ್ಪೋದಿಲ್ಲ
92 ವಯಸ್ಸು ಆಗಿದೆ ನಿಮಗೆ ತಪ್ಪು ಹೆಜ್ಜೆ ಇಡಬೇಡಿ
ಅಲ್ಪಸಂಖ್ಯಾತ ನಾಯಕರೊಂದಿಗೆ ಸಂಪರ್ಕದಲ್ಲಿರುವ ಸಿ.ಎಂ.ಇಬ್ರಾಹಿಂ
ಜಾತ್ಯಾತೀತ ತತ್ವ ಸಿದ್ಧಾಂತ ಉಳಿಸಲು ಬೆಂಬಲ ನೀಡುವಂತೆ ಮನವಿ
ಬೆಂಗಳೂರಿನ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 11 ಗಂಟೆಗೆ ಇಬ್ರಾಹಿಂ ಸಭೆ
BJP-JDS alliance: ಚುನಾವಣೆಯ ಸಮಯದಲ್ಲಿ ಪ್ರಧಾನಿ ಮೋದಿ ತಿಂಗಳುಗಟ್ಟಲೇ ಕರ್ನಾಟಕದಲ್ಲಿ ಠಿಕಾಣಿ ಹೂಡಿದ್ದರೂ, ಹತ್ತಾರು ಕಿಲೋಮೀಟರ್ ರೋಡ್ ಶೋಕಿ ಮಾಡಿದರೂ ಮೋದಿ ಮುಖಕ್ಕೆ ಕನ್ನಡಿಗರು ಕಿಂಚಿತ್ ಬೆಲೆ ಕೊಡಲಿಲ್ಲ. ಮೋದಿ ಮುಖ ಎಂಬುದು ಈಗ ಚಲಾವಣೆಗೆ ಸಾಧ್ಯವಿಲ್ಲದ ಸವಕಲು ನಾಣ್ಯದಂತಾಗಿದೆ ಎಂಬ ಸತ್ಯ ಬಿಜೆಪಿಗರಿಗೆ ಅರ್ಥವಾದಂತಿದೆ! ಎಂದು ಕಾಂಗ್ರೆಸ್ ಟೀಕಿಸಿದೆ.
BJP-JDS alliance: ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ, ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ಇರುವುದು ಗುಲಾಮಗಿರಿ ಮಾಡಲು ಮಾತ್ರ. ಜೆಡಿಎಸ್ ರಾಜ್ಯಾಧ್ಯಕ್ಷ ಕುಟುಂಬದ ಗುಲಾಮರಿಗೆ, ಬಿಜೆಪಿ ರಾಜ್ಯಾಧ್ಯಕ್ಷ ಹೈಕಮಾಂಡ್ ಗುಲಾಮಗಿರಿಗೆ ಎಂದು ಕಾಂಗ್ರೆಸ್ ಟೀಕಿಸಿದೆ.
HD Kumaraswamy v/s Siddaramaiah: 2006ರಲ್ಲಿ ಬಿಜೆಪಿ ಜೊತೆ ಸರ್ಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ‘ಬಿ’ ಟೀಂ ಎಂದು ಜೆಡಿಎಸ್ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ‘ಬಿ’ ಟೀಂ ಜೊತೆ ಸರ್ಕಾರ ರಚಿಸಲು ಎಚ್.ಡಿ.ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ!! ಮರೆತಿರಾ ಛದ್ಮವೇಷಧಾರಿ?? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
BJP-JDS alliance: ಎಚ್.ಡಿ.ರೇವಣ್ಣ, ತುರುವೇಕೆರೆ ಕೃಷ್ಣಪ್ಪ, ಚಿ.ನಾ.ಹಳ್ಳಿ ಸುರೇಶ್ ಬಾಬು, ನಾಗನಗೌಡ ಕಂದಕೂರು, ದೇವದುರ್ಗ ಕರೆಮ್ಮ ತಮಗೆ ಮುಸ್ಲಿಂ ಸಮುದಾಯ ನಮಗೆ ಮತ ಹಾಕಿಲ್ಲ ಎಂದು ಹೇಳಲಿ ಎಂದು ಜಮೀರ್ ಅಹ್ಮದ್ ಸವಾಲು ಹಾಕಿದ್ದಾರೆ.
BJP-JDS Alliance: ಬಿಜೆಪಿಯ ‘ಬಿ’ ಟೀಮ್ ಜೆಡಿಎಸ್ ಎಂಬುದಕ್ಕೆ ಇಂದು ಅಧಿಕೃತ ಮುದ್ರೆ ಬಿದ್ದಿದೆ. ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕದ್ದುಮುಚ್ಚಿ ಅಫೇರ್ ಇಟ್ಟುಕೊಂಡಿದ್ದ ಜೆಡಿಎಸ್ ಇಂದು ಬಹುರಂಗವಾಗಿ ಜೊತೆಗೂಡಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
BJP-JDS Alliance: ಜೆಡಿಎಸ್ ನಲ್ಲಿನ ಅಲ್ಪಸಂಖ್ಯಾತ ಮುಖಂಡರು ಪಕ್ಷದ ಹೊಸಿಲಿನ ಹೊರಗೆ ಕಾಲಿಟ್ಟಿದ್ದಾರೆ, ಜೆಡಿಎಸ್ ಪಕ್ಷ ಮುಗಿಸಲೆಂದೇ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯ ಕನಸು ನನಸಾಗುವ ಕಾಲ ಬಂದಿದೆ! ಕರ್ನಾಟಕದ ಪಾಲಿಗೆ ಇನ್ನು ಜಾತ್ಯಾತೀತ ತತ್ವದ ಜೆಡಿಎಸ್ ಮುಗಿದ ಅಧ್ಯಾಯವೆಂದು ಕಾಂಗ್ರೆಸ್ ಕುಟುಕಿದೆ.
ಡಿ.ಕೆ.ಶಿವಕುಮಾರ್ ಒಬ್ಬ ನೀರಿನ ಕಳ್ಳ, ಅಯೋಗ್ಯನೆಂದು ಹೇಳಿದ್ದ ಕೆ.ಎಸ್.ಈಶ್ವರಪ್ಪಗೆ ಕಾಂಗ್ರೆಸ್ ತಿರುಗೇಟು ನೀಡಿರುವ ಕಾಂಗ್ರೆಸ್, ಅತೃಪ್ತ ಆತ್ಮದಂತೆ ಬಡಬಡಿಸುತ್ತಿರುವ ಈಶ್ವರಪ್ಪನವರೇ, ಯೋಗ್ಯರು ಯಾರು, ಅಯೋಗ್ಯರು ಯಾರು ಅಂತ ರಾಜ್ಯದ ಜನ ತೀರ್ಮಾನಿಸಿ ತೀರ್ಪು ಕೊಟ್ಟಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
BJP-JDS alliance: ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಜೆಡಿಎಸ್ ಈಗ ಅಮಿತ್ ಶಾ ಮನೆಯ ಬಾಗಿಲು ಬಡಿಯುತ್ತಿದ್ದಾರೆ. ಇಂತಹ ಆತ್ಮವಂಚನೆಯ ಕೆಲಸಕ್ಕಿಂತ ಎಚ್.ಡಿ.ಕುಮಾರಸ್ವಾಮಿಯವರೇ ಹೇಳಿದ್ದಂತೆ ಪಕ್ಷವನ್ನು ವಿಸರ್ಜಿಸಿವುದೇ ಉತ್ತಮ!ವೆಂದು ಕಾಂಗ್ರೆಸ್ ಟೀಕಿಸಿದೆ.
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು 'ದಳ'ಪತಿಗಳು ಭೇಟಿಯಾಗುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.