ಹತ್ರಾಸ್ನಲ್ಲಿ ದಲಿತ ಮಹಿಳೆ ಮೇಲೆ ಮೇಲ್ಜಾತಿ ಠಾಕೂರ್ ಸಮುದಾಯಕ್ಕೆ ಸೇರಿದ ಯುವಕರಿಂದ ನಡೆದ ಸಾಮೂಹಿಕ ಅತ್ಯಾಚಾರದ ನಂತರ, ಬಾಲಿಯಾ ಮೂಲದ ಬಿಜೆಪಿ ಶಾಸಕ ಬಾಲಕಿಯರಿಗೆ 'ಸಂಸ್ಕಾರ' ಕಲಿಸಿದರೆ ಅತ್ಯಾಚಾರಗಳನ್ನು ನಿಲ್ಲಿಸಬಹುದು ಎಂದು ಹೇಳಿದ್ದಾರೆ.
ತೋಟಗಾರಿಕಾ ಸಚಿವ ನಾರಾಯಣಗೌಡ ಹಾಗೂ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ನಡುವೆ ವಿಧಾನಸಭೆ ಸದನದ ಹೊರಗೆ ಶಾಸಕರಿಗಾಗಿ ಇರುವ ಹೊಟೇಲ್ ನಲ್ಲಿ ಜಟಾಪಟಿ ನಡದಿದೆ. ಇದೇ ವೇಳೆ ಇವರಿಬ್ಬರು ಕೈ ಕೈ ಮಿಲಾಯಿಸಲು ಮುಂದಾಗಿದ್ದಾರೆ.
ಇತ್ತೀಚೆಗೆ ಶ್ರೀ ಮೋದಿಜಿ ಕಿ ಆರತಿ ಪ್ರಾರಂಭಿಸಿದ ಉತ್ತರಾಖಂಡ ಬಿಜೆಪಿ ಶಾಸಕ ಗಣೇಶ್ ಜೋಶಿ, ಲಾಕ್ ಡೌನ್ ಮುಗಿದ ನಂತರ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇವಸ್ಥಾನವನ್ನು ನಿರ್ಮಿಸುವುದಾಗಿ ಘೋಷಿಸಿದರು.
ಎಸ್ಸಿ ಮತ್ತು ಎಸ್ಟಿಗಳ ಮೇಲಿನ ದೌರ್ಜನ್ಯ ತಡೆಗಟ್ಟುವ ಕಾನೂನುಗಳು ಮತ್ತು ಅವರಿಗೆ ನೀಡುತ್ತಿರುವ ಮೀಸಲಾತಿ ಇಂದಿನ ಸಮಾಜದಲ್ಲಿ ಜಾತಿಪದ್ದತಿಯನ್ನು ಜೀವಂತವಾಗಿರಿಸಿದೆ ಎಂದು ಬಲ್ಲಿಯಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಳಿದ್ದಾರೆ.
ಉತ್ತರಪ್ರದೇಶದ ಚಂದೌಲಿಯಲ್ಲಿನ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಮಾಯಾವತಿ ಮಹಿಳೆ ಮತ್ತು ಪುರುಷ ಎರಡು ಅಲ್ಲ ಎಂದು ವಿವಾದಾತ್ಮಕ ಹೇಳಿಕೆ ಮೂಲಕ ಕೆಂಗಣ್ಣಿಗೆ ಗುರಿಯಾಗಿದ್ದ ಬಿಜೆಪಿ ಶಾಸಕಿ ಸಾಧನಾ ಸಿಂಗ್ ಈಗ ತಮ್ಮ ಹೇಳಿಕೆ ವಿಚಾರವಾಗಿ ಕ್ಷಮೆಯಾಚನೆ ಕೋರಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಮೀಟೂ ಅಭಿಯಾನ ಕುರಿತಾಗಿ ಬಿಜೆಪಿ ಶಾಸಕಿ ಉಷಾ ಠಾಕೂರ್ ಮಾತಾನಾಡುತ್ತಾ "ಮಹಿಳೆಯರು ತಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ ರಾಜೀ ಮಾಡಿಕೊಳ್ಳುತ್ತಾರೆ" ಎಂದು ಕಿಡಿಕಾರಿದ್ದಾರೆ.
ಬಿಜೆಪಿ ಶಾಸಕ ರಾಮ ಕದಂ ದಹಿ ಹಂಡಿ ಕಾರ್ಯಕ್ರಮದಲ್ಲಿ ಯುವಕರನ್ನು ಉದ್ದೇಶಿಸಿ ಮಾತನಾಡುತ್ತಾ " ನಿಮಗೆ ಕಿಡ್ನಾಪ್ ಮಾಡಿಯಾದರು ಹುಡುಗಿಯನ್ನು ನಿಮ್ಮ ಕೈ ಗೆ ಒಪ್ಪಿಸುತ್ತೇನೆ ಎಂದು ಹೇಳಿ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.
ಕಾರ್ಕಳ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ವಿ. ಸುನಿಲ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲೆಯ ಕೋಮುವಾದ ಸೂಕ್ಷ್ಮ ಬಂಟ್ವಾಳ ಕ್ಷೇತ್ರದ ಚುನಾವಣೆ "ಹಿಂದೂ ಸ್ವಾಭಿಮಾನದ ಪ್ರಶ್ನೆ" ಎಂದು ವಿವರಿಸಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.