PM Modi: ಕರ್ನಾಟಕದ ರಾಜ್ಯದ ಕಟ್ಟೆ ಕಡೆಯ ರೈಲ್ವೆ ನಿಲ್ದಾಣವಾದ ಚಾಮರಾಜನಗರ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಅಮೃತ ಭಾರತ ಸ್ಟೇಷನ್ ಯೋಜನೆ ವ್ಯಾಪ್ತಿಗೆ ತರಲಾಗಿದ್ದು ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಶಂಕು ಸ್ಥಾಪನೆ ನೆರವೇರಿಸಿದರು.
ರಾಜ್ಯದ 27 ಲೋಕಸಭಾ ಕ್ಷೇತ್ರಗಳದ್ದು ಒಂದೊಂದು ರೀತಿಯ ರಾಜಕಾರಣವಾದರೆ ಮಂಡ್ಯ ಕ್ಷೇತ್ರದ ರಾಜಕಾರಣ ಕಳೆದ ಚುನಾವಣೆಯಿಂದ ಬೇರೆ ರೂಪವನ್ನೇ ಪಡೆದುಕೊಂಡಿದೆ. ಸಂಸದರಾಗಿ 5 ವರ್ಷ ಪೂರೈಕೆ ಹಿನ್ನೆಲೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ಸಂಸದೆ ಸುಮಲತಾ ನಿವಾಸದಲ್ಲಿ ಬೆಂಬಲಿಗರ ಸಭೆ ಮಾಡಿದ್ದಾರೆ. ಮಂಡ್ಯ ಕ್ಷೇತ್ರದಿಂದ ಸುಮಲತಾ ಸ್ಪರ್ಧೆ ಸಂಬಂಧ ಬೆಂಬಲಿಗರೊಂದಿಗೆ ಸಭೆ ಮಾಡಿದ್ದಾರೆ.
Basavaraj Bommaiah: ಮಹಾದಾಯಿ ಯೋಜನೆಗೆ ಹಿನ್ನಡೆಯಾಗಲು ಕಾಂಗ್ರೆಸ್ ಪಕ್ಷವೇ ನೇರ ಕಾರಣವಾಗಿದ್ದು, ಅವರು ಟ್ರಿಬ್ಯುನಲ್ ಗೆ ಹೋಗಿದ್ದರಿಂದ 8-10 ವರ್ಷ ವಿಳಂಬವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
“ನಮ್ಮ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯದ ವಿರುದ್ದ ನಿರ್ಣಯ ಮಂಡಿಸಿದ್ದೇವೆ. ಬಿಜೆಪಿಯವರು ರಾಜ್ಯದ ಬೆಂಬಲಕ್ಕೆ ನಿಲ್ಲಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.
Basavaraja Bommaiah: ಸ್ವಾತಂತ್ರ್ಯ ಬಂದಾಗಿನಿಂದ 55 ವರ್ಷ ದೇಶ ಆಳಿರುವ ಕಾಂಗ್ರೆಸ್ ಅವಧಿಯಲ್ಲಿ ರಾಜ್ಯಗಳಿಗೆ ಕೇವಲ ಶೇ 20 ರಷ್ಟು ಮಾತ್ರ ಅನುದಾನ ಬರುತ್ತಿತ್ತು, ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ರಾಜ್ಯಗಳಿಗೆ ಶೇ 42% ರಷ್ಟು ಅನುದಾನ ಬರುತ್ತಿದೆ. ಕಾಂಗ್ರೆಸ್ ನವರು ಕೇಂದ್ರದ ವಿರುದ್ದ ಅನಗತ್ಯ ಆರೋಪ ಮಾಡಿ ರಾಜ್ಯದ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಸೇಂದಿ ಬದಲಾಗಿ ನೀರಾ ಬಂದಿದ್ದು ನೀರಾ ಮಳಿಗೆಗಳ ಸ್ಥಾಪನೆಗೆ ಅನುಮತಿ ನೀಡಬೇಕು. ಈ ಸಮುದಾಯದವರಿಗೆ ಎಂಎಸ್ಐಎಲ್ ನಲ್ಲಿ ಅವಕಾಶ ನೀಡಬೇಕು” ಎಂದು ಕೋಟಾ ಶ್ರೀನಿವಾಸ ಪೂಜಾರಿ ಸರ್ಕಾರಕ್ಕೆ ಸಲಹೆ ನೀಡಿದರು.
ಸೀಟು ಹಂಚಿಕೆ ಬಗ್ಗೆ JDS-BJP ನಡುವೆ ಯಾವುದೇ ಗೊಂದಲ ಇಲ್ಲ
ರಾಜ್ಯದ 28 ಕ್ಷೇತ್ರಗಳನ್ನ ಗೆಲ್ಲಬೇಕು ಎನ್ನುವುದೇ ನಮ್ಮ ಗುರಿ
ಕೆಂಪೇಗೌಡ ಏರ್ಪೋರ್ಟ್ನಲ್ಲಿ H.D.ಕುಮಾರಸ್ವಾಮಿ ಹೇಳಿಕೆ
ಶೀಘ್ರ ಸೀಟು ಹಂಚಿಕೆ ಗೊಂದಲ ನಿವಾರಣೆ- ನಿಖಿಲ್ ಕುಮಾರಸ್ವಾಮಿ
ರಾಷ್ಟ್ರನಾಯಕರು ಹಾಗೂ HDK-HDD ತೀರ್ಮಾನಿಸುತ್ತಾರೆ- ನಿಖಿಲ್
ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಆದರೆ, ಯಾವುದೇ ಟಿಕೆಟ್ ಹಂಚಿಕೆ ಬಗ್ಗೆ ತೀರ್ಮಾನ ಆಗಿಲ್ಲ ಎಂದು ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.