ನೂತನ ರಾಜ್ಯಸಭಾ ಸದಸ್ಯರ ವಿಜಯೋತ್ಸವದ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿರುವವರು ಬಿಜೆಪಿ ಆರ್.ಎಸ್.ಎಸ್ ನಿಂದ ತರಬೇತಿ ಪಡೆದವರೇ ಆಗಿದ್ದಾರೆ ಎಂದು ಬಿಎಸ್ಪಿ ರಾಜ್ಯ ಉಸ್ತುವಾರಿ ಕೃಷ್ಣಮೂರ್ತಿ ಗಂಭೀರ ಆರೋಪ ಮಾಡಿದ್ದಾರೆ.
ಬಿಎಸ್ಪಿ ತನ್ನ ಲೋಕಸಭಾ ಸಂಸದ ಡ್ಯಾನಿಶ್ ಅಲಿಯನ್ನು ಪಕ್ಷದಿಂದ ಅಮಾನತುಗೊಳಿಸಿದೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ ಅವರ ಆದೇಶದ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ಈ ಆದೇಶಕ್ಕೆ ಸಂಬಂಧಿಸಿದ ಪತ್ರವನ್ನು ಪಕ್ಷವು ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಎಕ್ಸ್ನಲ್ಲಿ ಬಿಡುಗಡೆ ಮಾಡಿದೆ.
ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ವರಿಷ್ಠೆ ಮಾಯಾವತಿ ಭಾನುವಾರ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಬೆಂಬಲಿಸಿದ್ದಾರೆ ಮತ್ತು ಅದು ಭಾರತೀಯರನ್ನು 'ಒಗ್ಗೂಡಿಸುತ್ತದೆ' ಎಂದು ಹೇಳಿದ್ದಾರೆ.
UP Assembly Election 2022: ಫೆಬ್ರವರಿ 10 ಮತ್ತು ಮಾರ್ಚ್ 7 ರ ನಡುವೆ ಏಳು ಹಂತಗಳಲ್ಲಿ ನಡೆಯಲಿರುವ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮಾಯಾವತಿ ಸ್ಪರ್ಧಿಸುವುದಿಲ್ಲ ಎಂದು ಬಹುಜನ ಸಮಾಜ ಪಕ್ಷದ ಹಿರಿಯ ನಾಯಕ ಮಿಶ್ರಾ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರದಂದು ಎಸ್ಪಿ ಮತ್ತು ಬಿಎಸ್ಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಉತ್ತರ ಪ್ರದೇಶದಲ್ಲಿ ಅವರ ಸರ್ಕಾರಗಳು ಕೆಲವೇ ಜಾತಿಗಳಿಗೆ ಮಾತ್ರ ಕಾರ್ಯನಿರ್ವಹಿಸುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿ ಬಡವರು ಮತ್ತು ಹಿಂದುಳಿದವರಿಗಾಗಿ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಪಂಜಾಬ್ನ ಹೊಸ ಮುಖ್ಯಮಂತ್ರಿಯಾಗಿ ದಲಿತ ನಾಯಕ ಚರಣಜಿತ್ ಸಿಂಗ್ ಚನ್ನಿ ಪ್ರಮಾಣವಚನ ಸ್ವೀಕರಿಸಿದ ನಂತರ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಮಾಯಾವತಿ ದಲಿತರು ಕಾಂಗ್ರೆಸ್ ನ ದ್ವಿಮುಖ ನೀತಿ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಹೇಳಿದರು.
ಮುಂದಿನ ವರ್ಷ ಅತ್ಯಂತ ಮಹತ್ವದ ಉತ್ತರ ಪ್ರದೇಶ ಚುನಾವಣೆಗೆ ಮುನ್ನ, ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ವರಿಷ್ಠೆ ಮಾಯಾವತಿ ಶುಕ್ರವಾರ (ಸೆಪ್ಟೆಂಬರ್ 10) ತಮ್ಮ ಪಕ್ಷವು ಮುಂಬರುವ ಚುನಾವಣೆಯಲ್ಲಿ 'ಬಾಹುಬಲಿ' ಅಥವಾ ಮಾಫಿಯಾ ಅಭ್ಯರ್ಥಿಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.
ಹೊಸ ಕಾನೂನಿನಲ್ಲಿ ಮುಸ್ಲಿಂ ಸಮಾಜವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಇದು ಸಂಪೂರ್ಣವಾಗಿ ವಿಭಜನೆಯಾಗಿದೆ. ನಮ್ಮ ಪಕ್ಷವು ಅದನ್ನು ಸಂಪೂರ್ಣವಾಗಿ ವಿಭಜಿಸುವ, ಅಸಂವಿಧಾನಿಕವೆಂದು ಪರಿಗಣಿಸುತ್ತದೆ ಎಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದರು.
ಸಾವರ್ಕರ್ ವಿಷಯದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಸ್ಥಿತಿ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿರುವ ಮಾಯಾವತಿ, ಒಂದು ವೇಳೆ ಪಕ್ಷ ತನ್ನ ಸ್ಥಿತಿ ಸ್ಪಷ್ಟಪಡಿಸದೇ ಹೋದಲ್ಲಿ ಇದನ್ನು ಕೇವಲ ನಾಟಕ ಎಂದೇ ಪರಿಗಣಿಸಲಾಗುವುದು ಎಂದಿದ್ದಾರೆ.
ಕಾಂಗ್ರೆಸ್ ಅನ್ನು ದಲಿತ ವಿರೋಧಿ ಪಕ್ಷ ಎಂದು ಕರೆದ ಮಾಯಾವತಿ, ಹಿರಿಯ ಪಕ್ಷವು ಹಿಂದುಳಿದವರ ಹಕ್ಕುಗಳನ್ನು ಕಾಪಾಡುವ ವಿಚಾರದಲ್ಲಿ ಗಂಭೀರವಾಗಿಲ್ಲ ಎಂದು ಮಾಯಾವತಿ ವಾಗ್ದಾಳಿ ನಡೆಸಿದ್ದಿದಾರೆ.
ವಿಶ್ವಾಸಮತಯಾಚನೆ ವೇಳೆ ನಮ್ಮ ಪಕ್ಷದ ರಾಜ್ಯಸಭಾ ಸದಸ್ಯ ಡಾ. ಅಶೋಕ್ ಸಿದ್ಧಾರ್ಥ ಜೊತೆ ಮಾತನಾಡಿದ್ದೆ. ತಟಸ್ಥವಾಗಿರುವಂತೆ ಮಾಯಾವತಿ ಹೇಳಿದ್ದಾರೆ ಎಂದು ಅಶೋಕ್ ಹೇಳಿದರು. ಅದಕ್ಕೆ ನಾನು ವಿಶ್ವಾಸ ಮತಯಾಚನೆ ವೇಳೆ ವಿಧಾನಸಭೆಗೆ ಭಾಗವಹಿಸಿಲ್ಲ ಎಂದು ಎನ್.ಮಹೇಶ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.