ಮುಖ್ಯಮಂತ್ರಿ ಬೊಮ್ಮಾಯಿ ಅವರ ಅಧಿಕಾರವಧಿಯ ಎರಡನೇ ಬಜೆಟ್ ಮಂಡನೆ ಮಾಡಲಿದ್ದಾರೆ. ನಾಳೆ ಬೆಳಗ್ಗೆ 10.15ಕ್ಕೆ ಸಿಎಂ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಘೋಷಣೆ ಪ್ರಕ್ರಿಯೆ ಪ್ರಾರಂಭ ಆಗಲಿದೆ. 2022-23 ಸಾಲಿನಲ್ಲಿ 2.7 ಲಕ್ಷ ಕೋಟಿ ಆಯವ್ಯಯ ಮಂಡಿಸಿದ್ದ ಸಿಎಂ ಬೊಮ್ಮಾಯಿ ಈ ಬಾರಿ 3 ಲಕ್ಷ ಕೋಟಿಗೂ ಅಧಿಕ ಗಾತ್ರದ ಬಜೆಟ್ ಮಂಡಿಸಲು ತಯಾರಿ ನಡೆಸಿದ್ದಾರೆ.
karnataka Budget : ರಾಜ್ಯ ಬಿಜೆಪಿ ಸರ್ಕಾರದ ಬಜೆಟ್ ಫೆ. 17 ರಂದು ಮಂಡನೆಯಾಗಲಿದೆ, ಕೊನೆಯ ಬಜೆಟ್ ಇದಾಗಿದ್ದು, ಅಂದು ಬೆಳಗ್ಗೆ 10:15ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಈ ಬಗ್ಗೆ ಅಧಿಕೃತ ಮಾಹಿತಿ ಲಭಿಸಿದ್ದು, ಸುಮಾರು 1 ಗಂಟೆಗಳ ಕಾಲ ಬಜೆಟ್ ಭಾಷಣ ಮಾಡಲಿದ್ದಾರೆ.
Karnataka Budget 2023 Time: ಕರ್ನಾಟಕ ಬಜೆಟ್ ಮೇಲೆ ರಾಜ್ಯದ ಜನರ ದೃಷ್ಟಿ ನೆಟ್ಟಿದ್ದು, ಭಾರೀ ನಿರೀಕ್ಷೆಗಳನ್ನಿಟ್ಟಿದ್ದಾರೆ. ಇನ್ನು ಅದಾಗಲೇ ಬಜೆಟ್ ಅಧಿವೇಶನ ಫೆಬ್ರವರಿ 10 ರಿಂದ ಆರಂಭವಾಗಿದ್ದು, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯುತ್ತಿದೆ. ಇನ್ನು ಫೆಬ್ರವರಿ 17 ರಂದು ಬಜೆಟ್ ಮಂಡನೆಯಾಗಿ ಫೆಬ್ರವರಿ 20 ರಿಂದ 22ರವರೆಗೂ ಅದರ ಮೇಲೆ ಚರ್ಚೆ ನಡೆಯಲಿದೆ.
Budget 2023 : ಕೇಂದ್ರ ಬಜೆಟ್ 2023 ಅನ್ನು ಪ್ರಸ್ತುತಪಡಿಸುವಾಗ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ಯಾನ್ ಲಿಂಕ್ ಮಾಡದ ಪ್ರಕರಣಗಳಿಗೆ ನೌಕರರ ಭವಿಷ್ಯ ನಿಧಿ (ಇಪಿಎಫ್) ಹಿಂಪಡೆಯುವಿಕೆಯ ಮೇಲಿನ ಟಿಡಿಎಸ್ ದರವನ್ನು ಕಡಿತಗೊಳಿಸುವುದಾಗಿ ಘೋಷಿಸಿದ್ದರು.
ಕೇಂದ್ರ ಸರ್ಕಾರದಿಂದ ನಿನ್ನೆ ಬಜೆಟ್ ಮಂಡನೆ ಹಿನ್ನೆಲೆ ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿ. ಬೆಳಗ್ಗೆ 11 ಗಂಟೆಗೆ ಕೇಂದ್ರ ಬಜೆಟ್ ಸಂಬಂಧ ಮಾಹಿತಿ. ಕರ್ನಾಟಕಕ್ಕೆ ನೀಡಿರುವ ಅನುದಾನ, ʻಭದ್ರಾʼ ಅನುದಾನ ಸೇರಿ ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡಲಿರುವ ಸಿಎಂ
Pension Scheme : ಪಿಂಚಣಿದಾರರಿಗೆ ಕೇಂದ್ರ ಸರ್ಕಾರದಿಂದ ದೊಡ್ಡ ಮಾಹಿತಿ ನೀಡಲಾಗಿದೆ. ನೀವೂ ಪಿಂಚಣಿ ಲಾಭ ಪಡೆಯುತ್ತಿದ್ದರೆ, ಈಗ ನಿಮಗೆ ಭಾರಿ ಲಾಭ ಸಿಗಲಿದೆ. ಕೇಂದ್ರ ಬಜೆಟ್ 2023-24 ರಲ್ಲಿ, ಒಂದು ಶ್ರೇಣಿಯ ಒಂದು ಪಿಂಚಣಿ (OROP) ಯೋಜನೆಯಡಿಯಲ್ಲಿ ಸಶಸ್ತ್ರ ಪಡೆಗಳ ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರ ಪರಿಷ್ಕರಣೆಗಾಗಿ ಮತ್ತು ಎಲ್ಲಾ ಅವಶ್ಯಕತೆಗಳನ್ನು ಪೂರೈಸಲು 28,138 ಕೋಟಿ ರೂ. ಪಿಂಚಣಿ ಪಡೆಯುವವರು ಇದರಿಂದ ಹೆಚ್ಚಿನ ಪ್ರಯೋಜನ ಪಡೆಯಲಿದ್ದಾರೆ.
ಚುನಾವಣೆ ಹೊಸ್ತಿಲಲ್ಲ ಮೋದಿ 2ನೇ ಅವಧಿಯ ಸರ್ಕಾರದ ಕೊನೆಯ ಬಜೆಟ್ ಮಂಡನೆಯಾಗಿದೆ.. ನಿರೀಕ್ಷೆಯಂತೆ ಬಜೆಟ್ನಲ್ಲಿ ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ... ತೆರಿಗೆ ವಿನಾಯಿತಿ ಮಿತಿ ಹೆಚ್ಚಳ ಮಾಡಲಾಗಿದೆ.. ರಕ್ಷಣಾ ವಲಯಕ್ಕೆ ಬಜೆಟ್ನಲ್ಲಿ ಒತ್ತು ನೀಡಲಾಗಿದೆ.. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಸತತ 5ನೇ ಬಜೆಟ್ ಹೈಲೈಟ್ಸ್ ಏನು..? ಯಾರಿಗೆ ಸಿಹಿ.. ಯಾರಿಗೆ ಕಹಿ..? ಇಲ್ಲಿದೆ ನೋಡಿ.
Income Tax Latest Update: ಬಜೆಟ್ ಮಂಡನೆಯ ಬಳಿಕ 7 ಲಕ್ಷದ ವರೆಗೆ ಆದಾಯ ಹೊಂದಿದವರು ಯಾವುದೇ ರೀತಿಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ ಎಂಬುದು ಪ್ರಸ್ತುತ ಎಲ್ಲೆಡೆ ಹೆಚ್ಚಿಗೆ ಚರ್ಚೆಯಾಗುತ್ತಿರುವ ವಿಷಯ. ಆದರೆ, 7 ಲಕ್ಷಕ್ಕಿಂತ ಹೆಚ್ಚು ಆದಾಯ ಇರುವವರೂ ಕೂಡ ಯಾವುದೇ ರೀತಿಯ ತೆರಿಗೆಯನ್ನು ಪಾವತಿಸಬೇಕಾಗಿಲ್ಲ. ಬನ್ನಿ ಲೆಕ್ಕಾಚಾರ ಹೇಗಿದೆ ತಿಳಿದುಕೊಳ್ಳೋಣ.
ಆಟೋಮೊಬೈಲ್ ಕ್ಷೇತ್ರಕ್ಕೆ ಸಂಬಂಧಿಸಿದ ಘೋಷಣೆ ಕಾರು ಗ್ರಾಹಕರನ್ನು ಬೆಚ್ಚಿಬೀಳಿಸಬಹುದು. ಕಾರುಗಳ ಮೇಲಿನ ಆಮದು ಸುಂಕವನ್ನು ಹೆಚ್ಚಿಸುವ ಬಗ್ಗೆ ಬಜೆಟ್ನಲ್ಲಿ ಹೇಳಲಾಗಿದೆ. ಈ ಶುಲ್ಕ ಎಲೆಕ್ಟ್ರಿಕ್ ವಾಹನಗಳಿಗೂ ಅನ್ವಯಿಸುತ್ತದೆ.
ಭಾರತೀಯ ವಾಯುಪಡೆಗೆ ಬಂಡವಾಳ ಹಂಚಿಕೆಯ ಸಿಂಹಪಾಲು ಲಭ್ಯವಾಗಲಿದ್ದು, 1.62 ಲಕ್ಷ ಕೋಟಿ ರೂಪಾಯಿಗಳ ರಕ್ಷಣಾ ಬಜೆಟ್ನ 57,137 ಕೋಟಿ ರೂಪಾಯಿ ವಾಯುಪಡೆಗೆ ಲಭ್ಯವಾಗಲಿದೆ. ಕಳೆದ ಬಜೆಟ್ನಲ್ಲಿ ವಾಯುಪಡೆಗೆ 53,749 ಕೋಟಿ ಲಭಿಸಿತ್ತು.
ಧಾರವಾಡ ಕಸೂತಿ ಸೀರೆಯುಟ್ಟು ನಿರ್ಮಲಾ ಬಜೆಟ್ ಮಂಡನೆ. ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ನೀಡಿದ ನಿರ್ಮಲಾ ಸೀತಾರಾಮನ್. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ಘೋಷಣೆ. ಬಜೆಟ್ನಲ್ಲಿ ರೈಲ್ವೆ ಇಲಾಖೆಗೆ 2.4 ಲಕ್ಷ ಕೋಟಿ ರೂ. ಮೀಸಲು.
ನಮೋ ಲೆಕ್ಕಾಚಾರದಿಂದ ರೈತರ ಬಾಳಲ್ಲಿ ಬೆಳಕು. ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಖುಷಿ ತಂದಿದೆ. ಈ ಯೋಜನೆಯನ್ನು ರಾಷ್ಟೀಯ ಯೋಜನೆಯಾಗಿ ಘೋಷಣೆ ಮಾಡಲಾಗಿದೆ. ಇದು ರೈತರ ಬಾಳಿನಲ್ಲಿ ಗುಣಾತ್ಮಕ ಬದಲಾವಣೆ ತರಲು ಪರಿಣಾಮಕಾರಿಯಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ರು.
FM Nirmala Sitharaman : ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ಹಣಕಾಸು ಸಚಿವರು ಹಿರಿಯ ನಾಗರಿಕರಿಗೆ ಬಿಗ್ ಗಿಫ್ಟ್ ನೀಡಿದ್ದಾರೆ. ಕೇಂದ್ರ ಬಜೆಟ್ 2023-24 ಅನ್ನು ಇಂದುರ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ನೀವು ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ ಖಾತೆಯನ್ನು ತೆರೆದಿದ್ದರೆ ಅಥವಾ ಅದನ್ನು ತೆರೆಯಲು ಯೋಜಿಸಿದ್ದರೆ, ಇನ್ನು ಮುಂದೆ ನಿಮಗೆ ಭಾರಿ ಲಾಭ ಸಿಗುತ್ತದೆ ಎಂದು ಹೇಳಿದರು. ಸರ್ಕಾರ ಈಗ ಹಿರಿಯ ನಾಗರಿಕರ ಯೋಜನೆಯ ಮಿತಿಯನ್ನು 15 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಿಸಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ..
ಇಂದು ಬಹುನೀಕ್ಷಿತ ಕೇಂದ್ರ ಬಜೆಟ್ 2023 ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದರು. ಮಧ್ಯಮ ವರ್ಗದವರಿಗೆ ಈ ಬಜೆಟ್ ಸ್ವಲ್ಪ ಸಮಾಧಾನ ತಂದಿದೆ. ಮೂಲಸೌಕರ್ಯ, ಪ್ರವಾಸೋದ್ಯಮ, ಐಟಿ ಮತ್ತು ತೋಟಗಾರಿಕೆಯಂತಹ ಕ್ಷೇತ್ರಗಳ ಮೇಲೆ ಪರಿಣಾಮ ಬಿದ್ದರೂ ಸಹ, ಮನರಂಜನಾ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಚಿತ್ರ ನಿರ್ಮಾಪಕ ಅಶೋಕ್ ಪಂಡಿತ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Mahila Samman Saving Certificate Scheme: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2023-24 ಅನ್ನು ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಹಣಕಾಸು ಸಚಿವರು ಮಹಿಳೆಯರಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ. ಬಜೆಟ್ ಮಂಡಿಸುವಾಗ ಹಣಕಾಸು ಸಚಿವರು ಮಹಿಳಾ ಸನ್ಮಾನ ಉಳಿತಾಯ ಪ್ರಮಾಣಪತ್ರ ಯೋಜನೆ ಆರಂಭಿಸುವುದಾಗಿ ಘೋಷಿಸಿದ್ದಾರೆ.
Budget 2023: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2023ನೇ ಸಾಲಿನ ಆರ್ಥಿಕ ಆಯವ್ಯಯ ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಹಣಕಾಸು ಸಚಿವರು ಅಗ್ನಿಪಥದಲ್ಲಿ ಯೋಜನೆ 2022 ರಲ್ಲಿ ದಾಖಲಾದ ಅಗ್ನಿವೀರರಿಗೆಂದೇ ನಿರ್ಮಿಸಲಾಗಿರುವ ಅಗ್ನೀವೀರ್ ಕಾರ್ಪಸ್ ಫಂಡ್ ನಿಂದ ಪಡೆದ ಪಾವತಿಗೆ ತೆರಿಗೆ ವಿನಾಯ್ತಿ ಘೋಷಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.