ಕರ್ನಾಟಕ ಮತ್ತು ಕನ್ನಡಿಗರಿಗೆ ತಾರತಮ್ಯವಾಗುತ್ತಿರುವುದು, ಗುಜರಾತ್ ಮೇಲೆ ಅತಿಯಾದ ಪ್ರೀತಿ ತೋರುತ್ತಿರುವುದು ಕೇಂದ್ರದ ಆರೋಗ್ಯ ಇಲಾಖೆ ನೀಡಿರುವ ಅಂಕಿ ಅಂಶಗಳಿಂದಲೇ ಬಹಿರಂಗವಾಗಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲೂ ಕೇಂದ್ರದಿಂದ ಆಗುತ್ತಿರುವ ಈ ತಾರತಮ್ಯ ಮನುಷ್ಯತ್ವ ವಿರೋಧಿ.
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಂತೆ ಮೋದಿ ಸರ್ಕಾರ ಪ್ರತಿ ವರ್ಷ ಅರ್ಹ ರೈತರ ಖಾತೆಗೆ 6000 ರೂಪಾಯಿ ಮೂರು ಕಂತುಗಳಲ್ಲಿ ವರ್ಗಾಯಿಸುತ್ತದೆ. ಪ್ರತಿ ವರ್ಷ ಮೊದಲು ಕಂತು 1 ಏಪ್ರಿಲ್ನಿಂದ 31 ಜುಲೈ ಅವಧಿಗೆ, ಎರಡನೇ ಕಂತು ಆಗಸ್ಟ್ - ನವೆಂಬರ್, ಮೂರನೇ ಕಂತು ಡಿಸೆಂಬರ್ - ಮಾರ್ಚ್ ಅವಧಿಗೆ ರಿಲೀಸ್ ಆಗುತ್ತದೆ.
SC Asks For National Plan - ದೇಶಾದ್ಯಂತ ಕೊರೊನಾ ವೈರಸ್ ನ ಎರಡನೇ ಅಲೆಯ ಹಿನ್ನೆಲೆ ಉದ್ಭವಿಸಿರುವ ಗಂಭೀರ ಪರಿಸ್ಥಿತಿಯ ಹಿನ್ನೆಲೆ Suo Moto Cognizance ತೆಗೆದುಕೊಂಡಿರುವ ಸರ್ವೋಚ್ಛ ನ್ಯಾಯಾಲಯ, ಆಕ್ಸಿಜನ್ ಸಪ್ಲೈ, ಚಿಕಿತ್ಸೆಗಾಗಿ ಬೇಕಾಗುವ ಅತ್ಯಾವಶ್ಯಕ ಔಷಧಿಗಳು ಸೇರಿದಂತೆ ಇತರೆ ವಿಷಯಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ನೀತಿ ಸಾದರುಪಡಿಸಲು ಕೇಂದ್ರ ಸರ್ಕಾರವನ್ನು ಕೇಳಿದೆ.
ಭಾರತದಲ್ಲಿ ಕೋವಿಡ್ -19ರ ಹೊಸ ಪ್ರಕರಣಗಳು ಇದೇ ಮೊದಲ ಬಾರಿಗೆ ದಿನವೊಂದರಲ್ಲಿ 3 ಲಕ್ಷ ದಾಟಿದೆ. ಇದು ಅಮೇರಿಕಾದ ದೈನಂದಿನ ದಾಖಲೆಗಳ ದಾಖಲೆಯನ್ನು ಮುರಿದಿದೆ. ಇದಕ್ಕೂ ಮೊದಲು ಜನವರಿ 8 ರಂದು ಅಮೇರಿಕಾದಲ್ಲಿ 3,07,581 ಹೊಸ ಪ್ರಕರಣಗಳು ದಾಖಲಾಗಿದ್ದವು.
Coronavirus Airborne - ಕೊರೊನಾ ವೈರಸ್ ನ ಹೊಸ ರೂಪಾಂತರಿ ಗಾಳಿಯ ಮೂಲಕ ಹರಡುತ್ತಿದೆ ಎಂದು ಇದೆ ಮೊದಲ ಬಾರಿಗೆ ಭಾರತ ಸರ್ಕಾರ ಒಪ್ಪಿಕೊಂಡಿದೆ. ಇತ್ತೀಚೆಗಷ್ಟೇ 'ಜರ್ನಲ್ ದಿ ಲ್ಯಾನ್ಸೆಟ್' ಕೂಡ ಇದೆ ರೀತಿಯ ವರದಿಯೊಂದನ್ನು ಇತ್ತೀಚಿಗೆ ನೀಡಿದೆ.
ಭಾರತದಲ್ಲಿ ಕೊರೊನಾವೈರಸ್ನ ರುದ್ರ ನರ್ತನ ಮುಂದುವರೆದಿದೆ ಮತ್ತು ಕಳೆದ 24 ಗಂಟೆಗಳಲ್ಲಿ 2.75 ಲಕ್ಷ ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ, ವೇಗವಾಗಿ ಹೆಚ್ಚುತ್ತಿರುವ ಸಾವಿನ ಅಂಕಿ ಅಂಶಗಳು ಸರ್ಕಾರದ ಕಳವಳವನ್ನು ಹೆಚ್ಚಿಸಿವೆ.
ದೇಶವ್ಯಾಪಿ ಕೊರೊನಾ ಪ್ರಕರಣಗಳ ಹೆಚ್ಚಳದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಸ್ಮಾರಕ ಹಾಗೂ ಮ್ಯೂಸಿಯಂಗಳು ಮೇ 15 ರವರೆಗೆ ಬಂದ್ ಆಗಿರುತ್ತವೆ ಎಂದು ಕೇಂದ್ರ ಸರ್ಕಾರದ ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವರಾದ ಪ್ರಲ್ಹಾದ್ ಸಿಂಗ್ ಪಟೇಲ್ ಅವರು ತಿಳಿಸಿದ್ದಾರೆ.
ವಾಣಿಜ್ಯ ನಗರಿ ಮುಂಬೈಯಲ್ಲಿ ಪರಿಸ್ಥಿತಿ ತೀರಾ ವಿಕೋಪಕ್ಕೆ ಹೋಗಿರುವುದರಿಂದ ಬೇರೆ ವಿಧಿಯಿಲ್ಲದೆ ಮತ್ತೆ ಲಾಕ್ಡೌನ್ ಜಾರಿಗೆ ತರಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರೋನಾ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆ ಕಂಡು ಬಂದಿರುವ ಹಿನ್ನಲೆಯಲ್ಲಿ ಎಪ್ರಿಲ್ 6ರಿಂದ ಜಾರಿಗೆ ಬರುವಂತೆ ರಾತ್ರಿ ಕರ್ಫ್ಯೂ ಘೋಷಿಸಲಾಗಿದೆ.
ಇಡೀ ದೇಶದಲ್ಲಿ ಹೈಬ್ರಿಡ್ 4 ಜಿ ಸೇವೆಯನ್ನು (Hybrid 4G Service) ಜಾರಿಗೆ ತರಲು ಬಿಎಸ್ಎನ್ಎಲ್ ಆದ್ಯತೆ ನೀಡಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಒಬ್ಬ ಸೋಂಕಿತ ವ್ಯಕ್ತಿಯು 30 ದಿನಗಳಲ್ಲಿ ಸರಾಸರಿ 406 ಜನರಿಗೆ ಸೋಂಕು ತಗುಲಿಸಬಹುದು ಎಂದು ಸಚಿವಾಲಯ ತಿಳಿಸಿದೆ. ಮೇ 2020 ರ ನಂತರ , ಕೋವಿಡ್ -19 ಸೋಂಕು ಮತ್ತು ಸಾವಿನ ಪ್ರಕರಣಗಳು ಈ ವಾರದಲ್ಲಿ ಅತಿ ಹೆಚ್ಚು ಏರಿಕೆ ಕಂಡಿದೆ ಎಂದು ಸರ್ಕಾರ ಹೇಳಿದೆ.
ಹಬ್ಬಗಳ ಸಮಯದಲ್ಲಿ ಕಿಕ್ಕಿರಿದು ತುಂಬಿರುವ ಮಾರುಕಟ್ಟೆಗಗಳಿಗೆ ಶಾಪಿಂಗ್ ಗಾಗಿ ತೆರಳುವುದು ಎಂದರೆ ಕರೋನಾವೈರಸ್ ಅನ್ನು ಆಹ್ವಾನಿಸಿದಂತೆಯೇ ಸರಿ. ಇದಕ್ಕೆ ಸಾಕ್ಷಿ ಎಂಬಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾರುಕಟ್ಟೆಗಳು ಸೇರಿದಂತೆ ಈ ಐದು ಸ್ಥಳಗಳನ್ನು ಕರೋನಾ ಸೂಪರ್ ಸ್ಪ್ರೆಡರ್ ಎಂದು ಹೇಳಲಾಗುತ್ತಿದೆ.
Bharat Bandh by Farmers: ಹೊಸ ಕೃಷಿ ಕಾನೂನುಗಳಿಗೆ (New Agriculture Laws) ವಿರುದ್ಧವಾಗಿ ಮಾರ್ಚ್ 26 ರಂದು ಭಾರತ್ ಬಂದ್ ಸಮಯದಲ್ಲಿ ರಸ್ತೆ ಮತ್ತು ರೈಲು ಸಾರಿಗೆ, ಮಾರುಕಟ್ಟೆಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳನ್ನು ಮುಚ್ಚಲಾಗುವುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.