ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ 75 ವರ್ಷ ಮೇಲ್ಪಟ್ಟವರ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದ್ದಾರೆ. ನಿರ್ಮಲಾ ಸೀತಾರಾಮನ್ ಘೋಷಣೆ ನಂತ್ರ ಈ ಬಗ್ಗೆ ಸಾಕಷ್ಟು ಚರ್ಚೆಯಾಗ್ತಿದೆ. ಇದ್ರ ಷರತ್ತಿನ ಬಗ್ಗೆ ತಿಳಿಯುವ ಅಗತ್ಯವಿದೆ.
ಕೇಂದ್ರ ಸರ್ಕಾರ ಅವಸರದಲ್ಲಿ ಕೃಷಿ ಬಿಲ್ ಗಳನ್ನು ಪಾಸ್ ಮಾಡಬಾರದಿತ್ತು. ಕೃಷಿ ಕಾನೂನುಗಳ ಬಗ್ಗೆ ಇನ್ನೂ ಎರಡ್ಮೂರು ತಿಂಗಳ ಕಾಲಾವಕಾಶ ತಗೊಳ್ಳಿ. ಚರ್ಚೆ ಮಾಡಿ ಅಂತಿಮ ನಿರ್ಧಾರ ಕೈಗೊಳ್ಳಿ- ಎಚ್.ಡಿ. ದೇವೇಗೌಡ
ಹೊಸ ಕೃಷಿ ಕಾನೂನುಗಳ ವಿರುದ್ಧ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಇಂದು 3 ಗಂಟೆಗಳ ರಾಷ್ಟ್ರವ್ಯಾಪಿ ಚಕ್ಕಾ ಜಾಮ್ಗೆ ಕರೆ ನೀಡಿದ್ದಾರೆ. ಚಕ್ಕಾ ಜಾಮ್ನಲ್ಲಿ ಹಿಂಸಾಚಾರದ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಪೊಲೀಸರು ಸೇರಿದಂತೆ ವಿವಿಧ ರಾಜ್ಯಗಳ ಪೊಲೀಸರು ಭಾರೀ ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಈ ಪ್ರತಿಭಟನಾತ್ಮಕ ಟ್ರ್ಯಾಕ್ಟರ್ ಮೆರವಣಿಗೆಯಲ್ಲಿ 50ಕ್ಕೂ ಹೆಚ್ಚು ರೈತ ಸಂಘಟನೆಗಳು ಭಾಗವಹಿಸುತ್ತಿದ್ದು ಎಲ್ಲಾ ಸಂಘಟನೆಗಳಿಗೂ ಭಿನ್ನ ಭಿನ್ನವಾದ ಸ್ತಬ್ಧಚಿತ್ರಗಳನ್ನು ರೂಪಿಸುವಂತೆ ಸೂಚಿಸಲಾಗಿದೆ. ದೇಶದೆಲ್ಲೆಡೆಯಿಂದ ಸುಮಾರು ಒಂದು ಲಕ್ಷ ಟ್ರ್ಯಾಕ್ಟರ್-ಟ್ರಾಲಿಗಳು ಭಾಗವಹಿಸಲಿವೆ.
ಕೌಶಲ್ಯ ಅಭಿವೃದ್ಧಿ ಸಚಿವ ಮಹೇಂದ್ರ ನಾಥ್ ಪಾಂಡೆ ಅವರ ಪ್ರಕಾರ, ಈ ಬಾರಿ ಜಿಲ್ಲಾ ಮಟ್ಟದ ಕೌಶಲ್ಯ ಸಮಿತಿಗಳನ್ನು ಬಲಪಡಿಸಲು ಒತ್ತು ನೀಡಲಾಗಿದೆ. ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಕೌಶಲ್ಯ ಕೋರ್ಸ್ಗಳನ್ನು ವಿನ್ಯಾಸಗೊಳಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು.
WhatsApp New Privacy Policy Updates - WhatsApp CEO ಗೆ ಈ ಕುರಿತು ಪತ್ರ ಬರೆದಿರುವ ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯ ಹೊಸ ಸೇವಾ ನಿಯಮಗಳು ಹಾಗೂ ಗೌಪ್ಯತಾ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿದೆ.
ಇತ್ತೀಚೆಗೆ ಆಂಧ್ರ ಪ್ರದೇಶದಲ್ಲಿಬಿಜೆಪಿ ಮತ್ತು ಟಿಡಿಪಿ ಕಾರ್ಯಕರ್ತರ ನಡುವೆ ಘರ್ಷಣೆ ಆಗಿತ್ತು. ಘರ್ಷಣೆ ವೇಳೆ ದೇವಾಲಯ ಕಟ್ಟಡದ ಮೇಲೆ ದಾಳಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹಿಂದು ದೇವಾಲಯಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪತ್ರ ಬರೆದಿದ್ದಾರೆ.
ಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ RAF ಘಟಕಕ್ಕೆ ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ್ದು, ಅಡಿಗಲ್ಲು ಫಲಕ ಅನಾವರಣಗೊಳಿಸಿದ್ದಾರೆ. ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ- ಕುಮಾರಸ್ವಾಮಿ
ಮುಂದಿನ ಮಾತುಕತೆಯಲ್ಲಿ ರೈತ ಸಂಘಟನೆಯ ಪ್ರತಿನಿಧಿಗಳು ಪರ್ಯಾಯ ಮಾರ್ಗ ಹುಡುಕಬಹುದು, ಅದರಿಂದ ಪರಿಹಾರ ಸಿಗಬಹುದು ಎಂಬ ಭಾವನೆ ಇದೆ ಎಂದು ನರೇಂದ್ರ ಸಿಂಗ್ ಥೋಮರ್ ಹೇಳಿದರು. ಈ ಮುಖಾಂತರ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಕೇಂದ್ರ ಸರ್ಕಾರ ಹಠಮಾರಿತನ ಮುಂದುವರೆಸುತ್ತದೆ ಎಂಬುದನ್ನು ಒಪ್ಪಿಕೊಂಡರು.
ಕೇಂದ್ರ ಸರ್ಕಾರ ಹಾಗೂ ರೈತರ ನಡುವೆ 7ನೇ ಸುತ್ತಿನ ಸಭೆ ನಡೆಯುವ ಮೊದಲೇ ರೈತರು 'ಮಾತುಕತೆ ಫಲಪ್ರದವಾಗದಿದ್ದರೆ, ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಒಪ್ಪದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು' ಎಂಬ ಎಚ್ಚರಿಕೆ ನೀಡಿದ್ದರು. ಈಗ ಪ್ರತಿಭಟನೆ ತೀವ್ರಗೊಳಿಸುವ ಹಿನ್ನೆಲೆಯಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಧೂಮಪಾನದ ಕಾನೂನುಬದ್ಧ ವಯಸ್ಸಿನ ಮಿತಿಯನ್ನು 18 ವರ್ಷದಿಂದ 21 ವರ್ಷಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕಾನೂನು ಉಲ್ಲಂಘಿಸುವವರಿಗೆ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 5 ಲಕ್ಷ ರೂ. ದಂಡ ವಿಧಿಸುವ ಬಗ್ಗೆಯೂ ಚಿಂತನೆ ನಡೆಸಿದೆ ಎನ್ನಲಾಗಿದೆ.
Dearness Allowance:ಶೀಘ್ರದಲ್ಲಿಯೇ ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಸಂತಸದ ಸುದ್ದಿಯೊಂದು ಸಿಗುವ ಸಾಧ್ಯತೆ ನಿಚ್ಚಳವಾಗತೊಡಗಿದೆ. ಹೌದು, ತುಟ್ಟಿ ಭತ್ಯೆಯಲ್ಲಿ ಶೇ.4 ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಅದರ ಹಿಂದಿನ ಲೆಕ್ಕಾಚಾರ ಇಲ್ಲಿದೆ.
7ನೇ ಸುತ್ತಿನ ಮಾತುಕತೆ ವಿಫಲವಾದರೆ ಹರಿಯಾಣದ ಎಲ್ಲಾ ಶಾಪಿಂಗ್ ಮಾಲ್ ಹಾಗೂ ಟೋಲ್ ಫ್ಲಾಜಾಗಳನ್ನು ಮುಚ್ಚಿಸುವುದಾಗಿ ಮತ್ತು ಗಣರಾಜ್ಯೋತ್ಸವದ ದಿನ ದೆಹಲಿಯಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ಮಾಡುವುದಾಗಿ ಪ್ರತಿಭಟನಾನಿರತ ರೈತರು ಬೆದರಿಕೆ ಹಾಕಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಇಂದು ದೇಶಾದ್ಯಂತ ನಡೆಯುತ್ತಿರುವ 'ಕೋವಿಡ್ ಡ್ರೈ ರನ್' ವೀಕ್ಷಣೆ ಮಾಡಲು ದೆಹಲಿಯ ಜಿಟಿಬಿ ಆಸ್ಪತ್ರೆಗೆ ಭೇಟಿ ನೀಡಿದ್ದ ವೇಳೆ ಈ ಮಹತ್ವದ ಘೋಷಣೆ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.