ಅಮಿತ್ ಶಾ ರೈತ ಸಂಘಟನೆಗಳ 13 ಪ್ರತಿನಿಧಿಗಳ ಜೊತೆ ನಡೆಸಿದ ‘ಅನೌಪಚಾರಿಕ ಮಾತುಕತೆ’ ವಿಫಲವಾಗಿರುವ ಹಿನ್ನೆಲೆಯಲ್ಲಿ ಬುಧವಾರ ಕೇಂದ್ರ ಸರ್ಕಾರ ರೈತ ಪ್ರತಿನಿಧಿಗಳೊಂದಿಗೆ ಅಧಿಕೃತವಾಗಿ ಕರೆದಿದ್ದ 6ನೇ ಸಭೆಯನ್ನು ರೈತರು ಬಹಿಷ್ಕರಿಸಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ ಕರೆ ಕೊಟ್ಟಿರುವ ‘ಭಾರತ ಬಂದ್’ಗೆ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್, ಅಕಾಲಿ ದಳ, ಡಿಎಂಕೆ, ಆರ್ ಜೆಡಿ, ಆಮ್ ಆದ್ಮಿ ಪಾರ್ಟಿ, ತೃಣಮೂಲ ಕಾಂಗ್ರೆಸ್, ಟಿಆರ್ ಎಸ್, ಬಿಎಸ್ ಪಿ, ಎಸ್ ಪಿ, ಎನ್ ಸಿಪಿ, ಶಿವಸೇನಾ ಹಾಗೂ ಎಡ ಪಕ್ಷಗಳು ಬೆಂಬಲ ಘೋಷಿಸಿವೆ.
Bharat Bandh: ನಾಳೆ ರೈತರು ಕರೆ ನೀಡಿರುವ ಭಾರತ್ ಬಂದ್ಗೆ ಹಲವು ಸಾರಿಗೆ ಸಂಸ್ಥೆಗಳು, ಬ್ಯಾಂಕಿಂಗ್ ಯೂನಿಯನ್, ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ಸಹ ಸಹಕಾರ ನೀಡಲು ಮುಂದಾಗಿವೆ.
ರೈತರು ದೆಹಲಿ ಗಡಿಯಲ್ಲಿ ಕೊರೆಯುವ ಚಳಿಯಲ್ಲಿ 12 ದಿನಗಳಿಂದ ಪ್ರತಿಭಟಿಸುತ್ತಿದ್ದರೂ, ಶೀತಗಾಳಿಗೆ ಈಗಾಗಲೇ ಪ್ರಾಣಹಾನಿ ಸಂಭವಿಸಿದ್ದರೂ ಲೆಕ್ಕಿಸದ ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಲು ಮುಂದಾಗದೆ 'ಮಾತುಕತೆ ನಡೆಸುವ' ನೆಪವನ್ನೇ ಮುಂದುವರೆಸಿದೆ.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಪಿಯೂಷ್ ಗೋಯಲ್, ಕಿರಿಯ ಕೈಗಾರಿಕಾ ಸಚಿವ ಸೋಮ್ ಪ್ರಕಾಶ್ ಹಾಗೂ ರೈತ ಸಂಘಟನೆಗಳ 35 ಮಂದಿ ಪ್ರತಿನಿಧಿಗಳ ನಡುವೆ ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಭೆಗಳಲ್ಲಿ ಮಾತುಕತೆ ಯಶಸ್ವಿಯಾಗಿರಲಿಲ್ಲ.
ಕೋವಿಡ್ -19ನ ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ, ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಕಠಿಣ ಎಚ್ಚರಿಕೆ ನೀಡಿದೆ. ಜೊತೆಗೆ ಕೇವಲ ಮಾರ್ಗಸೂಚಿಗಳನ್ನು ಮಾಡುವುದರಿಂದ ಏನೂ ಆಗಲ್ಲ, ಅವುಗಳನ್ನು ಪಾಲಿಸುವಂತೆ ಮಾಡುವುದು ಕೂಡ ಅವಶ್ಯಕವಾಗಿದೆ ಎಂದಿದೆ.
ಆರೋಗ್ಯ ಸೇತು ಆ್ಯಪ್ 'ಬ್ಯಾಕೆಂಡ್ ಕೋಡ್' ಅನ್ನು ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ, ಇದು ಕೋವಿಡ್ -19 ಸೋಂಕುಗಳ ಪತ್ತೆಗೆ ಸಂಬಂಧಿಸಿದಂತೆ ಅಪ್ಲಿಕೇಶನ್ನ ಕಾರ್ಯಾಚರಣೆಯನ್ನು ಅರ್ಥಮಾಡಿಕೊಳ್ಳಲು ಮತ್ತು ಗೌಪ್ಯತೆ ಮತ್ತು ಭದ್ರತಾ ಕಾಳಜಿಗಳ ಬಗ್ಗೆ ತಿಳಿಯಲು ಜನರಿಗೆ ಸಹಾಯ ಮಾಡುತ್ತದೆ.
ಕೇಂದ್ರ ಸರ್ಕಾರ ಮಂಗಳವಾರ ತಮಿಳುನಾಡು ಮೂಲದ ಖಾಸಗಿ ವಲಯದ ಸಾಲಗಾರ ಲಕ್ಷ್ಮಿ ವಿಲಾಸ್ ಬ್ಯಾಂಕನ್ನು ನಿಷೇಧಕ್ಕೆ ಒಳಪಡಿಸಿದೆ, ತನ್ನ ಗ್ರಾಹಕರ ಖಾತೆಯಿಂದ ತಿಂಗಳಿಗೆ ₹ 25,000 ಹಣವನ್ನು ಹಿಂಪಡೆಯುತ್ತದೆ ಎಂದು ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
2020-21 ನೇ ಸಾಲಿಗೆ ರಾಷ್ಟೀಯ ವಿದ್ಯಾರ್ಥಿ ವೇತನ ಪೋರ್ಟಲ್ (ಎನ್.ಎಸ್.ಪಿ) ಅನ್ವಯ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖ್, ಭೌದ್ದರು ಹಾಗೂ ಪಾರ್ಸಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ.
2019-2020 ರ ಅವಧಿಯಲ್ಲಿ ಸುಮಾರು 30.67 ಲಕ್ಷ ಕೇಂದ್ರ ಸರ್ಕಾರಿ ನೌಕರರು ಬೋನಸ್ ಪಡೆಯಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ನಂತರ ಖಜಾನೆಯ ಒಟ್ಟು ವೆಚ್ಚ ₹ 3,737 ಕೋಟಿ ಆಗಲಿದೆ ಎಂದು ಸಚಿವರು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.