ರಾಜಕೀಯದಲ್ಲಿ ಒಂದೊಂದು ನಿಮಿಷಕ್ಕೆ ಒಂದೊಂದು ತಿರುವು ಇರಲಿದೆ. ಈಗಾಗಲೇ ರಾಜಕೀಯ ನಿವೃತ್ತಿ ಘೋಷಿಸಿರುವ ಶ್ರೀನಿವಾಸ್ ಪ್ರಸಾದ್ ಅವರ ಬೆಂಬಲವನ್ನು ಬಿಜೆಪಿ ಅಭ್ಯರ್ಥಿ ಬಾಲರಾಜು ಅವರಿಗೆ ತಿಳಿಸಿದ್ದಾರೆ ಇದರ ನಡುವೆ ಈ ಎಲ್ಲಾ ವಿಚಿತ್ರಗಳು ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ವ್ಯಂಗ್ಯವಾಡಿದ್ದಾರೆ.
ಹನೂರು ತಾಲೂಕಿನ ಗೋಪಿನಾಥಂ ಸಮೀಪವಿರುವ ಪುದೂರು ಗ್ರಾಮದ ಮೀನಾ(34), ಪವಿತ್ರಾ(14) ಹಾಗೂ ಕೀರ್ತಿ(11) ಮೃತರಾಗಿದ್ದು ಬಾಲಕ ಸುರೇಂದ್ರನಿಂದ ತಾಯಿ ಹಾಗೂ ಮಕ್ಕಳು ಮೃತಪಟ್ಟಿದ್ದು ಬೆಳಕಿಗೆ ಬಂದಿದೆ.
Road Accident: ಹನೂರು ತಾಲೂಕಿನ ಲೋಕ್ಕನಹಳ್ಳಿ ಮಾರ್ಗವಾಗಿ ಒಡೆಯರ್ ಪಾಳ್ಯ ಕಡೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಲಿ ಆನೆ ಕಾರಿಡಾರ್ ರಸ್ತೆಗೆ ಇಳಿದಿದೆ. ಕೂಡಲೇ ಸ್ಥಳೀಯರು ದೌಡಾಯಿಸಿ ಬಸ್ಸಿನಲ್ಲಿದ್ದವರನ್ನು ಹೊರಕ್ಕೆ ಕರೆತಂದಿದ್ದು ಕಿಟಕಿ ಬಳಿ ಕುಳಿತಿದ್ದ 6-7 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಾಡಿನ ಪ್ರಸಿದ್ಧ ಯಾತ್ರಸ್ಥಳವಾದ ಮಲೆಮಹದೇಶ್ವರ ಬೆಟ್ಟಕ್ಕೆ 40 ಲಕ್ಷಕ್ಕೂ ಅಧಿಕ ಮಂದಿ ಭಕ್ತರು ಭೇಟಿ ಕೊಟ್ಟಿದ್ದರೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ 1 ವರ್ಷದಲ್ಲಿ 2.5 ಲಕ್ಷ ದಷ್ಟು ಮಂದಿ ಹಿಮಾಚ್ಛಾದಿತ ಬೆಟ್ಟದ ಚೆಲುವನ್ನು ಕಂಡಿದ್ದಾರೆ.
CP Yogeeshwara brother in law murder case: ತೋಟದ ಮನೆಯಿಂದ ಕಾಣೆಯಾಗಿದ್ದ ಮಹಾದೇವಯ್ಯ ಅವರ ಶವ ಅರೆ ಕೊಳೆತ ಸ್ಥಿತಿಯಲ್ಲಿ ಕಳೆದ 4ರಂದು ರಾಮಾಪುರದಿಂದ 6 ಕಿಮೀ ದೂರದ ಕಂದಕದಲ್ಲಿ ಪತ್ತೆಯಾಗಿತ್ತು.
ಕಳೆದ ಚುನಾವಣೆಯಲ್ಲಿ ನನ್ನನ್ನು ಕಾಂಗ್ರೆಸ್ ನವರು ಸೋಲಿಸಲಿಲ್ಲ, ಬಿಜೆಪಿ ಅವರೇ ನನ್ನನ್ನು ಸೋಲಿಸಿದ್ದು, ನನ್ನ ಸಮುದಾಯದವರೇ ನನ್ನನ್ನು ಸೋಲಿಸಿದ್ದು, ಅವರಿಗೆ ಒಳ್ಳೆಯದಾಗಲಿ, ನಾನು ಮತ್ತಷ್ಟು ಶಕ್ತಿವಂತನಾಗಿದ್ದೇನೆ- ಮಾಜಿ ಸಚಿವ ವಿ. ಸೋಮಣ್ಣ
ಅ.17ರಂದು 10.15ಕ್ಕೆ ಪೂಜೆ ಸಲ್ಲಿಸುವ ಮೂಲಕ ಗಡಿಜಿಲ್ಲೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಬೇಕಿದ್ದ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಎರಡು ತಾಸು ತಡವಾಗಿ ಬಂದರು. ಈ ನಡುವೆ ಸ್ಥಳೀಯ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಮರಾಜೇಶ್ವರನಿಗೆ ಸಾಂಪ್ರದಾಯಿಕ ಪೂಜೆ ಕೈಂಕರ್ಯ ಮುಗಿಸಿ ಹೊರ ಬರುತ್ತಿದ್ದ ಸಮಯಕ್ಕೆ ಬಂದ ಉಸ್ತುವಾರಿ ಸಚಿವರು ಮತ್ತೊಮ್ಮೆ ಪೂಜೆ ಪುನಸ್ಕಾರಗಳ ರೀಟೇಕ್ ಮಾಡಿಸಿದರು.
ಮಳೆ ಬರಲಿ ಎಂದು ಸಿದ್ದರಾಮಯ್ಯ ದೇವರಿಗೆ ಬೇಡಿಕೊಂಡಿದ್ದಾರೆ. ದೇವರಿಗೆ ಬೇಡಿದರೆ ಮಳೆ ಬರಲ್ಲ, ಇರುವ ನೀರನ್ನು ಮೊದಲು ಉಳಿಸಿ ಅಂಥಾ ನಾವು ಕೇಳುತ್ತಿದ್ದೇವೆ- ಕಬ್ಬು ಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್
ಚಾಮರಾಜನಗರದ ಡಿಪ್ಲೊಮ ಪದವೀಧರ ಭರತ್(29 ವರ್ಷ) ಎಂಬವರು ದುಬಾರಿ ಟೆಲಿಸ್ಕೋಪ್ ಕೊಳ್ಳಲು ಆರ್ಥಿಕ ಶಕ್ತಿ ಇಲ್ಲದ ಕಾರಣ ಸ್ವತಃ ದೂರದರ್ಶಕ ತಯಾರು ಮಾಡಿದ್ದು ನಿತ್ಯ ಖಗೋಲ ವೀಕ್ಷಣೆ ಮಾಡುವ ಮೂಲಕ ತಮ್ಮ ವಿಜ್ಞಾನಾಸಕ್ತಿಯನ್ನು ತಣಿಸಿಕೊಳ್ಳುತ್ತಿದ್ದಾರೆ.
ಮಹಾದೇವಸ್ವಾಮಿ ಮೂಲತಃ ಕೃಷಿಕರಾಗಿದ್ದು ಸವಿತಾ ಟೈಲರಿಂಗ್ ಮಾಡುತ್ತಿದ್ದರಂತೆ, ಇವರಿಗೆ ಇಬ್ಬರು ಪುತ್ರಿಯರಿದ್ದು ಓರ್ವ ಪುತ್ರಿ ಕಾಲೇಜು ವ್ಯಾಸಂಗ ಮಾಡುತ್ತಿದ್ದು ತಾತನ ಮನೆಯಲ್ಲಿದ್ದಾಳೆ. ಕಿರಿಯ ಮಗಳು ಸಿಂಚನಾ 9 ನೇ ತರಗತಿ ಓದುತ್ತಿದ್ದು ಅಪ್ಪ-ಅಮ್ಮನ ಜೊತೆ ಇದ್ದಳು.
ಚಾಮರಾಜನಗರ ಜಿಲ್ಲೆಯ ಚಾಮರಾಜನಗರ, ಯಳಂದೂರು, ಗುಂಡ್ಲುಪೇಟೆ ಹಾಗೂ ಹನೂರು ಭಾಗದಲ್ಲಿ 2 ತಾಸಿಗೂ ಅಧಿಕ ಮಳೆಯಾಗಿದ್ದು ಹಲವೆಡೆ ರಸ್ತೆಗಳಿಗೆ ಮರಗಳು ಉರುಳಿ ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು.
Karnataka Assembly Elections: ಕಾಂಗ್ರೆಸ್ ಪಕ್ಷದವರು ಒಂದೊಂದು ದಿನ ಒಂದೊಂದು ಮಾತಾಡ್ತಾ ಇದ್ದಾರೆ. ಇದೇನಾ 75 ವರ್ಷ ಆಡಳಿತ ನಡಿಸಿದವರ ರೀತಿ..!, ದೇವರು, ಸತ್ ಸಂಪ್ರದಾಯಗಳೇ ಬೇಡ ಎಂದರೆ ಈ ದೇಶಕ್ಕೆ ಭವಿಷ್ಯ ಇರುತ್ತಾ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.