ಛತ್ತೀಸ್ಗಢದ ದಾಂತೇವಾಡದಲ್ಲಿ ಮಾವೋವಾದಿಗಳು ನಡೆಸಿದ ಐಇಡಿ ಸ್ಫೋಟದಲ್ಲಿ 10 ಪೊಲೀಸ್ ಸಿಬ್ಬಂದಿ ಮತ್ತು ಚಾಲಕ ಬುಧವಾರ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಕ್ಸಲೀಯರ ವಿರುದ್ಧದ ಕಾರ್ಯಾಚರಣೆ ಮುಗಿಸಿ ರಾಜ್ಯ ಪೊಲೀಸ್ನ ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ತಂಡ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ.
man allegedly stabbed a girl: ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಒಬ್ಬ ಪುರುಷನು ಬಾಲಕಿಯನ್ನು ಅವಳ ಕೂದಲಿನಿಂದ ಎಳೆದುಕೊಂಡು ಹೋಗುತ್ತಿರುವುದು ಕಾಣಬಹುದು. ತನ್ನ ಇನ್ನೊಂದು ಕೈಯಿಂದ ಚಾಕುವಿನಂತಹ ಆಯುಧವನ್ನು ಬೀಸುತ್ತಿದ್ದು, ನಿರ್ದಯವಾಗಿ ಅವಳನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿದ್ದಾನೆ.
Unemployment Allowance : ಮುಂದಿನ ಆರ್ಥಿಕ ವರ್ಷದಿಂದ ನಿರುದ್ಯೋಗಿ ಯುವಕರಿಗೆ ಮಾಸಿಕ ನಿರುದ್ಯೋಗ ಭತ್ಯೆ . ಕಾರ್ಮಿಕರ ಕಲ್ಯಾಣ ಮಂಡಳಿಯು ಕಾರ್ಮಿಕರಿಗೆ ತಮ್ಮ ಮನೆ ನಿರ್ಮಾಣಕ್ಕಾಗಿ 50 ಸಾವಿರ ರೂಪಾಯಿ ಅನುದಾನ.
"ಮದುವೆಯ ನೆಪದಲ್ಲಿ ಕಳೆದ ಕೆಲವು ವರ್ಷಗಳಿಂದ ಜಾಂಜ್ಗೀರ್-ಚಂಪಾದಲ್ಲಿ ಆರೋಪಿಯು ತನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಎಂದು ಮಹಿಳೆ ಆರೋಪಿಸಿದ್ದಾರೆ. ಅವರು ಗರ್ಭಪಾತಕ್ಕೆ ಒಳಗಾಗುವಂತೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ" ಎಂದು ಧುರ್ವೆ ಹೇಳಿದ್ದಾರೆ.
ತನ್ನ ಜೊತೆ ಮಾತನಾಡಲು ನಿರಾಕರಿಸಿದ 21 ವರ್ಷದ ಯುವತಿಯನ್ನು ವ್ಯಕ್ತಿಯೋರ್ವ ಸ್ಕ್ರೂಡ್ರೈವರ್ನಿಂದ 51 ಬಾರಿ ಚುಚ್ಚಿ ಚುಚ್ಚಿ ಕೊಂದಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು ಭೀಕರವಾಗಿ ಕೊಂದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ.
ವೈದ್ಯಕೀಯ ಕಾಲೇಜಿನ ಒಪಿಡಿಯಲ್ಲಿ ಆರಾಮವಾಗಿ ಮಲಗಿದ್ದ ವ್ಯಕ್ತಿಯೊಬ್ಬ ಮಹಿಳೆ ಕೂಲರ್ ಆಫ್ ಮಾಡಿದ ಬಳಿಕ ನಿದ್ರೆಯಿಂದ ಎದ್ದಿದ್ದಾನೆ. ಬಳಿಕ ಆಕೆಯ ಬಳಿ, ಏಕೆ ಕೂಲರ್ ಬಂದಿ ಮಾಡಿದಿರಿ ಎಂದು ಪ್ರಶ್ನಿಸಿದ್ದಾನೆ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಗಲಾಟೆ ನಡೆದಿದ್ದು, ಬಳಿಕ ಕೋಪಗೊಂಡ ಆಕೆ ಚಪ್ಪಲಿಯಿಂದ ಥಳಿಸಿದ್ದಾಳೆ.
ಕಂಠಪೂರ್ತಿ ಮದ್ಯ ಸೇವಿಸಿದ್ದ ಶಿಕ್ಷಕಿಯನ್ನು ಎಬ್ಬಿಸಲು ಎಷ್ಟೇ ಪ್ರಯತ್ನಿಸಿದ್ರೂ ಪ್ರಯೋಜನವಾಗಿಲ್ಲ. ಬೆಳಗ್ಗೆ 11 ಗಂಟೆಗೆ ಶಾಲೆಗೆ ಭೇಟಿ ನೀಡಿದ್ದ ಶಿಕ್ಷಣಾಧಿಕಾರಿ ಆಕೆಯನ್ನು ಕಂಡು ಸುಸ್ತಾಗಿ ಬೆಸ್ತು ಬಿದ್ದಿದ್ದಾರೆ.
ಛತ್ತೀಸ್ಗಢ ಕೇಡರ್ನ ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಈಗ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿಯನ್ನು ಹಂಚಿಕೊಳ್ಳುವ ಮೂಲಕ ಎಲ್ಲರ ಗಮನಸೆಳೆದಿದ್ದಾರೆ.ಹೌದು ಈ ಪೋಸ್ಟ್ ಈಗ ಟ್ವಿಟ್ಟರ್ ನಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ
ಬೋರ್ವೆಲ್ಗೆ ಬಿದ್ದು 104 ಗಂಟೆ ಬಳಿಕವೂ ಬಾಲಕನೊಬ್ಬ ಸಾವು ಗೆದ್ದ ಪವಾಡ ಸದೃಶ್ಯ ಘಟನೆ ಛತ್ತೀಸ್ಗಢದ ಜಂಜಗೀರ್ ಚಂಪಾ ಜಿಲ್ಲೆಯಲ್ಲಿ ನಡೆದಿದೆ... 11 ವರ್ಷದ ರಾಹುಲ್ ಎಂಬ ಬಾಲಕ ಆಟವಾಡುವಾಗ ಕಾಲು ಜಾರಿ ಕೊಳವೆ ಬಾವಿಗೆ ಬಿದ್ದಿದ್ದಾನೆ. 80 ಅಡಿ ಆಳಕ್ಕೆ ಬಿದ್ದಿದ್ದ ಬಾಲಕನನ್ನು 500ಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ..
ಇಲ್ಲಿನ ಚಾರ್ಭಾಟದಲ್ಲಿ ಅದ್ದೂರಿಯಾಗಿ ನಡೆಯುತ್ತಿದ್ದ ಮದುವೆ ಮನೆ ಕೇವಲ ಲಡ್ಡೂ ವಿಚಾರವಾಗಿ ರಣರಂಗವಾಗಿ ಮಾರ್ಪಾಡಾಗಿತ್ತು. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.
Court Notice - ಹಲವು ಬಾರಿ ನ್ಯಾಯಾಲಯದ ನೋಟಿಸ್ ಗಳು ತಪ್ಪಾಗಿ ಜಾರಿಯಾಗುತ್ತವೆ ಮತ್ತು ಜನರು ಅವುಗಳ ಕುರಿತು ಮಾತನಾಡುವುದನ್ನು ನೀವು ಕೇಳಿರಬಹುದು, ಆದರೆ, ದೇವಾದಿದೇವ ಶಿವನಿಗೆ (Lord Shiva) ಕೋರ್ಟ್ ನೋಟಿಸ್ ನೀಡಿರುವುದನ್ನು ನೀವು ಎಂದಾದರು ಕೇಳಿದ್ದೀರಾ? ಅಷ್ಟೇ ಅಲ್ಲ ಕೋರ್ಟ್ ನೀಡಿರುವ ಈ ನೋಟಿಸ್ (Court Notice) ಗೆ ಪ್ರತಿಕ್ರಿಯೆಯಾಗಿ ಶಿವ ನ್ಯಾಯಾಲಯಕ್ಕೂ ಕೂಡ ಹಾಜರಾಗಿದ್ದಾನೆ. ಆದರೆ, ಆ ವೇಳೆ ನ್ಯಾಯಾಧೀಶರೇ ಕೋರ್ಟ್ ರೂಮ್ ನಿಂದ ಕಾಣೆಯಾಗಿದ್ದರು.
ವಿಧಾನಸಭಾ ಚುನಾವಣೆಗಾಗಿ ನೋಯ್ಡಾದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರ ಪ್ರಚಾರ ಮಾಡುವಾಗ COVID-19 ಮಾನದಂಡಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ವಿರುದ್ಧ ಭಾನುವಾರ ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
130 ಕಿಮೀ ದೂರದಲ್ಲಿರುವ ಉತ್ತರ ಪ್ರದೇಶದ ಲಖಿಂಪುರ್ ಜಿಲ್ಲೆಯಲ್ಲಿ ಭಾನುವಾರ ಎಂಟು ಸಾವುಗಳ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಡುವೆ ಛತ್ತೀಸ್ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಇಂದು ಮಧ್ಯಾಹ್ನ ಲಖನೌ ವಿಮಾನ ನಿಲ್ದಾಣದದಲ್ಲಿ ಪೊಲೀಸರು ತಡೆದಿರುವ ಹಿನ್ನಲೆಯಲ್ಲಿ ಅವರು ಸ್ಥಳದಲ್ಲಿಯೇ ಧರಣಿ ಸತ್ಯಾಗ್ರಹಕ್ಕೆ ಕುಳಿತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.