ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಚಿತ್ರ ನಟ ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್ ಕುಮಾರ್ ಸೇರಿದಂತೆ ರಾಜ್ ಕುಮಾರ್ ಕುಟುಂಬದ ಸದಸ್ಯರು ಬೆಂಗಳೂರಿನ ರೇಸ್ ಕೋರ್ಸ್ ನಿವಾಸದಲ್ಲಿ ಭೇಟಿ ಮಾಡಿದರು.
Independence day 2022 : ಸ್ವಾತಂತ್ರ್ಯ ಅಮೃತಮಹೋತ್ಸವದ ಹಿನ್ನಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವಾರಾಜ ಬೊಮ್ಮಾಯಿ, ರಾಜ್ಯಕ್ಕೆ ಐದು ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ಸ್ವಚ್ಛತೆ, ಪೌಷ್ಠಿಕತೆ ಕಾಪಾಡಲು, ರೈತರು, ಶ್ರಮಿಕರ ಅಭ್ಯುದಯಕ್ಕೆ ಹಾಗೂ ಸೈನಿಕರ ಕ್ಷೇಮಾಭಿವೃದ್ಧಿಗೆ ಕೆಲವು ಕೊಡುಗೆ ನೀಡಲು ಸರ್ಕಾರದ ಹೊಸ ಯೋಜನೆ ಘೋಷಿಸಿದೆ.
ಕೋವಿಡ್ನಿಂದ ಗುಣಮುಖರಾಗುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಎಂದಿನ ಕೆಲಸ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಿಡುತ್ತಿದ್ದಾರೆ. ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಮತ್ತು ಪೂರ್ಣಗೊಂಡ ಕಾಮಗಾರಿಗಳಿಗೆ ಚಾಲನೆ ನೀಡಲು ಮೈಸೂರು, ಮಂಡ್ಯ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. ಮಂಡ್ಯದಲ್ಲಿ ಸಿಎಂಗೆ ನಟ ಯಶ್ ಸಾಥ್ ನೀಡಿದ್ದಾರೆ.
CM Basavaraj Bommai : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಎಚ್ ಎ ಎಲ್ ವಿಮಾನ ನಿಲ್ದಾಣದಿಂದ ಮೈಸೂರಿಗೆ ತೆರಳಿದರು. ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ಖ್ಯಾತ ಚಿತ್ರ ನಟ ಯಶ್ ಅವರ ಜೊತೆ ಹೆಲಿ ಕ್ಯಾಪ್ಟರ್ ನಲ್ಲಿ ಮೈಸೂರಿಗೆ ತೆರಳಿದರು.
ರಾಜ್ಯದಲ್ಲಿ ಮೂರನೇಯವರಾದ್ರೂ ಬರಲಿ, ನಾಲ್ಕನೇಯವರಾದ್ರೂ ಬರಲಿ ನಮಗೇನು ಸಂಬಂಧವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, BSY ಬದಲಾವಣೆ ಬಗ್ಗೆ ನಂಗೆ ಗೊತ್ತಿತ್ತು. ಅದಕ್ಕೆ ನಾನು ಈ ಹಿಂದೆ ಹೇಳಿದ್ದೆ. ಆದ್ರೆ ಬೊಮ್ಮಾಯಿವರ ಬಗ್ಗೆ ನಂಗೆ ಮಾಹಿತಿ ಇಲ್ಲ ಎಂದಿದ್ದಾರೆ.
ಬೊಮ್ಮಾಯಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡ್ತಾವ್ರೆ. ಇದನ್ನ ಕಾಂಗ್ರೆಸ್ ಸಹಿಸಲಾಗದೆ ಸಿಎಂ ಬದಲಾವಣೆ ಗೊಂದಲ ಸೃಷ್ಠಿ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಮೈಸೂರಿನಲ್ಲಿ ಸಚಿವ ಎಸ್.ಟಿ ಸೋಮಶೇಖರ್ ಕಿಡಿಕಾರಿದ್ದಾರೆ. 3ನೇ ಸಿಎಂ ಎಂದು ಕಾಂಗ್ರೆಸ್ ನೂರಕ್ಕೆ ನೂರು ಸುಳ್ಳು ಪ್ರಚಾರ ಮಾಡ್ತಿದೆ. ಸಿದ್ದರಾಮೋತ್ಸವದ ಬೆಂಕಿ ಆರಿಸಿಕೊಳ್ಳಲು ಕಾಂಗ್ರೆಸ್ ಹೀಗೆ ಮಾಡ್ತಿದೆ ಎಂದಿದ್ದಾರೆ.
ಜುಲೈ 25, 26ಕ್ಕೆ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಸಾಧ್ಯತೆ ಇದೆ. ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿಯೂ ಸಿಎಂ ಭಾಗಿಯಾಗಲಿದ್ದಾರೆ.
ಇಂದು ಮಂಡ್ಯದ ಕೆ.ಆರ್.ಪೇಟೆಗೆ ಸಿಎಂ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. 1,700 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಕೆ.ಆರ್.ಪೇಟೆ ಪಟ್ಟಣ ಪುರಸಭೆಯ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಕಾರ್ಯಕ್ರಮಕ್ಕಾಗಿ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ.
ತರಕಾರಿ, ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಜನ ಸಾಮಾನ್ಯರ ಜೇಬಿಗೆ ಈಗಾಗಲೇ ಕತ್ತರಿ ಬಿದ್ದಾಗಿದೆ. ಈ ದುಬಾರಿ ದುನಿಯಾದಲ್ಲಿ ರಾಜ್ಯದ ಜನರಿಗೆ ಮತ್ತೊಂದು ಶಾಕ್ ಕಾದಿದೆ. ರಾಜ್ಯದಲ್ಲಿ ಇದೀಗ ಬಸ್ ಟಿಕೆಟ್ ದರ ಏರಿಕೆ ಸರದಿ. ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಹೊತ್ತಿನಲ್ಲಿ ಬಸ್ ದರ ಏರಿಕೆ ಬರೆ ಸಾರ್ವಜನಿಕರ ಮೇಲೆ ಬೀಳುವ ಸಾಧ್ಯತೆಯಿದೆ. ರಾಜ್ಯದಲ್ಲಿ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಿದೆ. ಬರೋಬ್ಬರಿ 38% ರಷ್ಟು ಟಿಕೆಟ್ ದರ ಏರಿಕೆಯ ಪ್ರಸ್ತಾವನೆಯನ್ನು ಸರ್ಕಾರದ ಮುಂದೆ ಇಡಲಾಗಿದೆ. ಬಸ್ ಟಿಕೆಟ್ ದರ ಪರಿಷ್ಕರಣೆಗೆ ಕೆಎಸ್ಆರ್ಟಿಸಿ ಪಟ್ಟು ಹಿಡಿದಿದೆ. ಸದ್ಯ ಟಿಕೆಟ್ ದರ ಪರಿಷ್ಕರಣೆ ಚೆಂಡು ಸಿಎಂ ಬಸವರಾಜ್ ಬೊಮ್ಮಾಯಿ ಅಂಗಳದಲ್ಲಿದೆ. ಒಂದೆರಡು ದಿನಗಳಲ್ಲಿ ಕೆಎಸ್ಆರ್ಟಿಸಿ ಟಿಕೆಟ್ ರೇಟ್
ರಾಜ್ಯದಲ್ಲಿ ಇದೀಗ ಬಸ್ ಟಿಕೆಟ್ ದರ ಏರಿಕೆ ಸರದಿ. ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಹೊತ್ತಿನಲ್ಲಿ ಬಸ್ ದರ ಏರಿಕೆ ಬರೆ ಸಾರ್ವಜನಿಕರ ಮೇಲೆ ಬೀಳುವ ಸಾಧ್ಯತೆಯಿದೆ. ರಾಜ್ಯದಲ್ಲಿ ಕೆಎಸ್ಆರ್ಟಿಸಿ ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.